AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಇಎ ಪರೀಕ್ಷೆ ಅಕ್ರಮ ಪ್ರಕರಣ: ಆರ್​ಡಿ ಪಾಟೀಲ್​ಗೆ ರಕ್ಷಣೆ ನೀಡಿದ ಇಬ್ಬರ ಬಂಧನ

ಕಲಬುರಗಿ ಕೆಇಎ ಪರೀಕ್ಷೆ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಆರ್​ಡಿ ಪಾಟೀಲ್ ಪೊಲೀಸರು ದಾಳಿ ನಡೆಸುವ ವೇಳೆ ಕಂಪೌಂಡ್ ಹಾರಿ ತಪ್ಪಿಸಿಕೊಂಡಿದ್ದಾನೆ. ಅಷ್ಟೇ ಅಲ್ಲದೆ, ಈತನಿಗೆ ರಕ್ಷಣೆ ನೀಡಿದ ಆರೋಪದಡಿ ಫ್ಲ್ಯಾಟ್ ಮಾಲೀಕ ಮತ್ತು ಮ್ಯಾನೇಜರ್​​ನನ್ನು ಪೊಲೀಸರು ಬಂಧಿಸಿದ್ದಾರೆ.

ಕೆಇಎ ಪರೀಕ್ಷೆ ಅಕ್ರಮ ಪ್ರಕರಣ: ಆರ್​ಡಿ ಪಾಟೀಲ್​ಗೆ ರಕ್ಷಣೆ ನೀಡಿದ ಇಬ್ಬರ ಬಂಧನ
ಬಂಧಿತ ಫ್ಲ್ಯಾಟ್ ಮಾಲೀಕ ಶಂಕರ್ ಗೌಡಯಾಳವಾರ್, ಮ್ಯಾನೇಜರ್ ದಿಲೀಪ್ ಪವಾರ್ ಹಾಗೂ ಪರಾರಿಯಾಗಿರುವ ಆರೋಪಿ ಆರ್​ಡಿ ಪಾಟೀಲ್
ಸಂಜಯ್ಯಾ ಚಿಕ್ಕಮಠ
| Edited By: |

Updated on: Nov 10, 2023 | 8:21 AM

Share

ಕಲಬುರಗಿ, ನ.10: ಕೆಇಎ ಪರೀಕ್ಷೆ ಅಕ್ರಮ (KEA Exam Scam) ಪ್ರಕರಣದ ಪ್ರಮುಖ ಆರೋಪಿ ಆರ್.​ಡಿ. ಪಾಟೀಲ್ (R.D.Patil) ಪೊಲೀಸರು ದಾಳಿ ನಡೆಸುವ ವೇಳೆ ಕಂಪೌಂಡ್ ಹಾರಿ ತಪ್ಪಿಸಿಕೊಂಡಿದ್ದಾನೆ. ಅಷ್ಟೇ ಅಲ್ಲದೆ, ಈತನಿಗೆ ರಕ್ಷಣೆ ನೀಡಿದ ಆರೋಪದಡಿ ಫ್ಲ್ಯಾಟ್ ಮಾಲೀಕ ಮತ್ತು ಮ್ಯಾನೇಜರ್​​ನನ್ನು ಪೊಲೀಸರು ಬಂಧಿಸಿದ್ದಾರೆ.

ಕಲ್ಬುರ್ಗಿಯ ವರದಾ ಲೇಔಟ್​ನಲ್ಲಿರುವ ಮಹಾಲಕ್ಷ್ಮಿ ಅಪಾರ್ಟಮೆಂಟ್​ನಲ್ಲಿದ್ದ ಆರ್​ಡಿ ಪಾಟೀಲ್, ನವೆಂಬರ್ 6 ರಂದು ಪೊಲೀಸರು ದಾಳಿ ನಡೆಸಿದಾಗ ಪರಾರಿಯಾಗಿದ್ದ. ಅದರಂತೆ ಆರೋಪಿಗೆ ಫ್ಲ್ಯಾಟ್ ಬಾಡಿಗೆ ನೀಡಿದ ತಪ್ಪಿಗೆ ಫ್ಲ್ಯಾಟ್ ಮಾಲೀಕ ಮತ್ತು ಅಪಾರ್ಟ್ಮೆಂಟ್ ವ್ಯವಸ್ಥಾಪಕರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಪರೀಕ್ಷಾ ಅಕ್ರಮದ ಕಿಂಗ್​ಪಿನ್ ಪರಾರಿ​​: ಅಫಜಲಪುರ ಕ್ಷೇತ್ರದ ಶಾಸಕನಾಗುವ ಕನಸು ಕಂಡಿದ್ದ ಆರ್‌ಡಿ ಪಾಟೀಲ್​​

ಆರ್ ಡಿ ಪಾಟೀಲ್​ಗೆ ಫ್ಲ್ಯಾಟ್ ಬಾಡಿಗೆ ನೀಡಿದ ತಪ್ಪಿಗೆ ಶಹಾಪೂರದ ಶಂಕರ್ ಗೌಡಯಾಳವಾರ್ ಮತ್ತು ಅಪಾರ್ಟ್ಮೆಂಟ್​ನ ವ್ಯವಸ್ಥಾಪಕ ದಿಲೀಪ್ ಪವಾರ್ ಬಂಧಿತರಾಗಿದ್ದಾರೆ. ಆರ್​ಡಿ ಪಾಟೀಲ್​ನಿಂದ ವ್ಯವಸ್ಥಾಪಕ ದಿಲೀಪ್ 10 ಸಾವಿರ ರೂ. ಅಡ್ವಾನ್ಸ್ ಪಡೆದು, ಆ ಹಣ ಫ್ಲ್ಯಾಟ್ ಮಾಲೀಕ ಶಂಕರ್ ಗೌಡಗೆ ಕೊಟ್ಟಿದ್ದ.

ಕೆಇಎ ಪರೀಕ್ಷೆ ಆಕ್ರಮದಲ್ಲಿ ಆರ್​ಡಿ ಪಾಟೀಲ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು. ಇದೇ ವೇಳೆ ಆರ್.ಡಿ ಪಾಟೀಲ್, ನ.5 ರಂದು ರಾತ್ರಿ 11 ಗಂಟೆಗೆ ಮಹಾಲಕ್ಷ್ಮೀ ಅಪಾರ್ಟಮೆಂಟ್​ಗೆ ಆಗಮಿಸಿ ರಾತ್ರಿ ಅಲ್ಲಿಯೇ ಅಡಗಿದ್ದ. ಮರು ದಿನ ಮದ್ಯಾಹ್ನ ಪೊಲೀಸರು ಆಗಮಿಸುವ ಮಾಹಿತಿ ಸಿಕ್ಕ ತಕ್ಷಣ ಹಿಂಬದಿಯ ಕಾಂಪೌಂಡ್ ಹಾರಿ ಪರಾರಿಯಾಗಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು