ಕೆಇಎ ಪರೀಕ್ಷೆ ಅಕ್ರಮ ಪ್ರಕರಣ: ಆರ್​ಡಿ ಪಾಟೀಲ್​ಗೆ ರಕ್ಷಣೆ ನೀಡಿದ ಇಬ್ಬರ ಬಂಧನ

| Updated By: Rakesh Nayak Manchi

Updated on: Nov 10, 2023 | 8:21 AM

ಕಲಬುರಗಿ ಕೆಇಎ ಪರೀಕ್ಷೆ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಆರ್​ಡಿ ಪಾಟೀಲ್ ಪೊಲೀಸರು ದಾಳಿ ನಡೆಸುವ ವೇಳೆ ಕಂಪೌಂಡ್ ಹಾರಿ ತಪ್ಪಿಸಿಕೊಂಡಿದ್ದಾನೆ. ಅಷ್ಟೇ ಅಲ್ಲದೆ, ಈತನಿಗೆ ರಕ್ಷಣೆ ನೀಡಿದ ಆರೋಪದಡಿ ಫ್ಲ್ಯಾಟ್ ಮಾಲೀಕ ಮತ್ತು ಮ್ಯಾನೇಜರ್​​ನನ್ನು ಪೊಲೀಸರು ಬಂಧಿಸಿದ್ದಾರೆ.

ಕೆಇಎ ಪರೀಕ್ಷೆ ಅಕ್ರಮ ಪ್ರಕರಣ: ಆರ್​ಡಿ ಪಾಟೀಲ್​ಗೆ ರಕ್ಷಣೆ ನೀಡಿದ ಇಬ್ಬರ ಬಂಧನ
ಬಂಧಿತ ಫ್ಲ್ಯಾಟ್ ಮಾಲೀಕ ಶಂಕರ್ ಗೌಡಯಾಳವಾರ್, ಮ್ಯಾನೇಜರ್ ದಿಲೀಪ್ ಪವಾರ್ ಹಾಗೂ ಪರಾರಿಯಾಗಿರುವ ಆರೋಪಿ ಆರ್​ಡಿ ಪಾಟೀಲ್
Follow us on

ಕಲಬುರಗಿ, ನ.10: ಕೆಇಎ ಪರೀಕ್ಷೆ ಅಕ್ರಮ (KEA Exam Scam) ಪ್ರಕರಣದ ಪ್ರಮುಖ ಆರೋಪಿ ಆರ್.​ಡಿ. ಪಾಟೀಲ್ (R.D.Patil) ಪೊಲೀಸರು ದಾಳಿ ನಡೆಸುವ ವೇಳೆ ಕಂಪೌಂಡ್ ಹಾರಿ ತಪ್ಪಿಸಿಕೊಂಡಿದ್ದಾನೆ. ಅಷ್ಟೇ ಅಲ್ಲದೆ, ಈತನಿಗೆ ರಕ್ಷಣೆ ನೀಡಿದ ಆರೋಪದಡಿ ಫ್ಲ್ಯಾಟ್ ಮಾಲೀಕ ಮತ್ತು ಮ್ಯಾನೇಜರ್​​ನನ್ನು ಪೊಲೀಸರು ಬಂಧಿಸಿದ್ದಾರೆ.

ಕಲ್ಬುರ್ಗಿಯ ವರದಾ ಲೇಔಟ್​ನಲ್ಲಿರುವ ಮಹಾಲಕ್ಷ್ಮಿ ಅಪಾರ್ಟಮೆಂಟ್​ನಲ್ಲಿದ್ದ ಆರ್​ಡಿ ಪಾಟೀಲ್, ನವೆಂಬರ್ 6 ರಂದು ಪೊಲೀಸರು ದಾಳಿ ನಡೆಸಿದಾಗ ಪರಾರಿಯಾಗಿದ್ದ. ಅದರಂತೆ ಆರೋಪಿಗೆ ಫ್ಲ್ಯಾಟ್ ಬಾಡಿಗೆ ನೀಡಿದ ತಪ್ಪಿಗೆ ಫ್ಲ್ಯಾಟ್ ಮಾಲೀಕ ಮತ್ತು ಅಪಾರ್ಟ್ಮೆಂಟ್ ವ್ಯವಸ್ಥಾಪಕರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಪರೀಕ್ಷಾ ಅಕ್ರಮದ ಕಿಂಗ್​ಪಿನ್ ಪರಾರಿ​​: ಅಫಜಲಪುರ ಕ್ಷೇತ್ರದ ಶಾಸಕನಾಗುವ ಕನಸು ಕಂಡಿದ್ದ ಆರ್‌ಡಿ ಪಾಟೀಲ್​​

ಆರ್ ಡಿ ಪಾಟೀಲ್​ಗೆ ಫ್ಲ್ಯಾಟ್ ಬಾಡಿಗೆ ನೀಡಿದ ತಪ್ಪಿಗೆ ಶಹಾಪೂರದ ಶಂಕರ್ ಗೌಡಯಾಳವಾರ್ ಮತ್ತು ಅಪಾರ್ಟ್ಮೆಂಟ್​ನ ವ್ಯವಸ್ಥಾಪಕ ದಿಲೀಪ್ ಪವಾರ್ ಬಂಧಿತರಾಗಿದ್ದಾರೆ. ಆರ್​ಡಿ ಪಾಟೀಲ್​ನಿಂದ ವ್ಯವಸ್ಥಾಪಕ ದಿಲೀಪ್ 10 ಸಾವಿರ ರೂ. ಅಡ್ವಾನ್ಸ್ ಪಡೆದು, ಆ ಹಣ ಫ್ಲ್ಯಾಟ್ ಮಾಲೀಕ ಶಂಕರ್ ಗೌಡಗೆ ಕೊಟ್ಟಿದ್ದ.

ಕೆಇಎ ಪರೀಕ್ಷೆ ಆಕ್ರಮದಲ್ಲಿ ಆರ್​ಡಿ ಪಾಟೀಲ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು. ಇದೇ ವೇಳೆ ಆರ್.ಡಿ ಪಾಟೀಲ್, ನ.5 ರಂದು ರಾತ್ರಿ 11 ಗಂಟೆಗೆ ಮಹಾಲಕ್ಷ್ಮೀ ಅಪಾರ್ಟಮೆಂಟ್​ಗೆ ಆಗಮಿಸಿ ರಾತ್ರಿ ಅಲ್ಲಿಯೇ ಅಡಗಿದ್ದ. ಮರು ದಿನ ಮದ್ಯಾಹ್ನ ಪೊಲೀಸರು ಆಗಮಿಸುವ ಮಾಹಿತಿ ಸಿಕ್ಕ ತಕ್ಷಣ ಹಿಂಬದಿಯ ಕಾಂಪೌಂಡ್ ಹಾರಿ ಪರಾರಿಯಾಗಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ