ಕೆಇಎ ಪರೀಕ್ಷೆ ಅಕ್ರಮ ಪ್ರಕರಣ: ಆರ್​ಡಿ ಪಾಟೀಲ್​ಗೆ ರಕ್ಷಣೆ ನೀಡಿದ ಇಬ್ಬರ ಬಂಧನ

ಕಲಬುರಗಿ ಕೆಇಎ ಪರೀಕ್ಷೆ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಆರ್​ಡಿ ಪಾಟೀಲ್ ಪೊಲೀಸರು ದಾಳಿ ನಡೆಸುವ ವೇಳೆ ಕಂಪೌಂಡ್ ಹಾರಿ ತಪ್ಪಿಸಿಕೊಂಡಿದ್ದಾನೆ. ಅಷ್ಟೇ ಅಲ್ಲದೆ, ಈತನಿಗೆ ರಕ್ಷಣೆ ನೀಡಿದ ಆರೋಪದಡಿ ಫ್ಲ್ಯಾಟ್ ಮಾಲೀಕ ಮತ್ತು ಮ್ಯಾನೇಜರ್​​ನನ್ನು ಪೊಲೀಸರು ಬಂಧಿಸಿದ್ದಾರೆ.

ಕೆಇಎ ಪರೀಕ್ಷೆ ಅಕ್ರಮ ಪ್ರಕರಣ: ಆರ್​ಡಿ ಪಾಟೀಲ್​ಗೆ ರಕ್ಷಣೆ ನೀಡಿದ ಇಬ್ಬರ ಬಂಧನ
ಬಂಧಿತ ಫ್ಲ್ಯಾಟ್ ಮಾಲೀಕ ಶಂಕರ್ ಗೌಡಯಾಳವಾರ್, ಮ್ಯಾನೇಜರ್ ದಿಲೀಪ್ ಪವಾರ್ ಹಾಗೂ ಪರಾರಿಯಾಗಿರುವ ಆರೋಪಿ ಆರ್​ಡಿ ಪಾಟೀಲ್
Edited By: Rakesh Nayak Manchi

Updated on: Nov 10, 2023 | 8:21 AM

ಕಲಬುರಗಿ, ನ.10: ಕೆಇಎ ಪರೀಕ್ಷೆ ಅಕ್ರಮ (KEA Exam Scam) ಪ್ರಕರಣದ ಪ್ರಮುಖ ಆರೋಪಿ ಆರ್.​ಡಿ. ಪಾಟೀಲ್ (R.D.Patil) ಪೊಲೀಸರು ದಾಳಿ ನಡೆಸುವ ವೇಳೆ ಕಂಪೌಂಡ್ ಹಾರಿ ತಪ್ಪಿಸಿಕೊಂಡಿದ್ದಾನೆ. ಅಷ್ಟೇ ಅಲ್ಲದೆ, ಈತನಿಗೆ ರಕ್ಷಣೆ ನೀಡಿದ ಆರೋಪದಡಿ ಫ್ಲ್ಯಾಟ್ ಮಾಲೀಕ ಮತ್ತು ಮ್ಯಾನೇಜರ್​​ನನ್ನು ಪೊಲೀಸರು ಬಂಧಿಸಿದ್ದಾರೆ.

ಕಲ್ಬುರ್ಗಿಯ ವರದಾ ಲೇಔಟ್​ನಲ್ಲಿರುವ ಮಹಾಲಕ್ಷ್ಮಿ ಅಪಾರ್ಟಮೆಂಟ್​ನಲ್ಲಿದ್ದ ಆರ್​ಡಿ ಪಾಟೀಲ್, ನವೆಂಬರ್ 6 ರಂದು ಪೊಲೀಸರು ದಾಳಿ ನಡೆಸಿದಾಗ ಪರಾರಿಯಾಗಿದ್ದ. ಅದರಂತೆ ಆರೋಪಿಗೆ ಫ್ಲ್ಯಾಟ್ ಬಾಡಿಗೆ ನೀಡಿದ ತಪ್ಪಿಗೆ ಫ್ಲ್ಯಾಟ್ ಮಾಲೀಕ ಮತ್ತು ಅಪಾರ್ಟ್ಮೆಂಟ್ ವ್ಯವಸ್ಥಾಪಕರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಪರೀಕ್ಷಾ ಅಕ್ರಮದ ಕಿಂಗ್​ಪಿನ್ ಪರಾರಿ​​: ಅಫಜಲಪುರ ಕ್ಷೇತ್ರದ ಶಾಸಕನಾಗುವ ಕನಸು ಕಂಡಿದ್ದ ಆರ್‌ಡಿ ಪಾಟೀಲ್​​

ಆರ್ ಡಿ ಪಾಟೀಲ್​ಗೆ ಫ್ಲ್ಯಾಟ್ ಬಾಡಿಗೆ ನೀಡಿದ ತಪ್ಪಿಗೆ ಶಹಾಪೂರದ ಶಂಕರ್ ಗೌಡಯಾಳವಾರ್ ಮತ್ತು ಅಪಾರ್ಟ್ಮೆಂಟ್​ನ ವ್ಯವಸ್ಥಾಪಕ ದಿಲೀಪ್ ಪವಾರ್ ಬಂಧಿತರಾಗಿದ್ದಾರೆ. ಆರ್​ಡಿ ಪಾಟೀಲ್​ನಿಂದ ವ್ಯವಸ್ಥಾಪಕ ದಿಲೀಪ್ 10 ಸಾವಿರ ರೂ. ಅಡ್ವಾನ್ಸ್ ಪಡೆದು, ಆ ಹಣ ಫ್ಲ್ಯಾಟ್ ಮಾಲೀಕ ಶಂಕರ್ ಗೌಡಗೆ ಕೊಟ್ಟಿದ್ದ.

ಕೆಇಎ ಪರೀಕ್ಷೆ ಆಕ್ರಮದಲ್ಲಿ ಆರ್​ಡಿ ಪಾಟೀಲ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು. ಇದೇ ವೇಳೆ ಆರ್.ಡಿ ಪಾಟೀಲ್, ನ.5 ರಂದು ರಾತ್ರಿ 11 ಗಂಟೆಗೆ ಮಹಾಲಕ್ಷ್ಮೀ ಅಪಾರ್ಟಮೆಂಟ್​ಗೆ ಆಗಮಿಸಿ ರಾತ್ರಿ ಅಲ್ಲಿಯೇ ಅಡಗಿದ್ದ. ಮರು ದಿನ ಮದ್ಯಾಹ್ನ ಪೊಲೀಸರು ಆಗಮಿಸುವ ಮಾಹಿತಿ ಸಿಕ್ಕ ತಕ್ಷಣ ಹಿಂಬದಿಯ ಕಾಂಪೌಂಡ್ ಹಾರಿ ಪರಾರಿಯಾಗಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us