ಕಿಯೋನಿಕ್ಸ್ ಎಂಡಿ 32 ಕೋಟಿ ರೂ. ಲಂಚ ಆರೋಪ: ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದ ಸಚಿವ ಪ್ರಿಯಾಂಕ್​ ಖರ್ಗೆ

ಕಿಯೋನಿಕ್ಸ್​​ನಲ್ಲಿ ಕಳೆದ ಮೂರು ವರ್ಷಗಳಲ್ಲಿ ಸಾಕಷ್ಟು ಹಗರಣ ನಡದಿದೆ. ನಾನು ಸಚಿವನಾದ ಮೇಲೆ ಎರಡು ಬಾರಿ ಪ್ರಗತಿ ಪರಿಶೀಲನಾ ಸಭೆ ಮಾಡಿದ್ದೆನೆ. ನನಗೂ ಮೇಲ್ನೋಟಕ್ಕೆ 200-250 ಕೋಟಿ ರೂ. ಹಗರಣ ನಡೆದಿದೆ ಅಂತ ಕಂಡು ಬಂದಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಕಿಯೋನಿಕ್ಸ್ ಎಂಡಿ 32 ಕೋಟಿ ರೂ. ಲಂಚ ಆರೋಪ: ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದ ಸಚಿವ ಪ್ರಿಯಾಂಕ್​ ಖರ್ಗೆ
ಸಚಿವ ಪ್ರಿಯಾಂಕ್ ಖರ್ಗೆ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Nov 07, 2023 | 5:35 PM

ಕಲಬುರಗಿ, ನವೆಂಬರ್​​ 07: ಕಿಯೋನಿಕ್ಸ್​​ನಲ್ಲಿ ಕಳೆದ ಮೂರು ವರ್ಷಗಳಲ್ಲಿ ಸಾಕಷ್ಟು ಹಗರಣ ನಡದಿದೆ. ನಾನು ಸಚಿವನಾದ ಮೇಲೆ ಎರಡು ಬಾರಿ ಪ್ರಗತಿ ಪರಿಶೀಲನಾ ಸಭೆ ಮಾಡಿದ್ದೆನೆ. ನನಗೂ ಮೇಲ್ನೋಟಕ್ಕೆ 200-250 ಕೋಟಿ ರೂ. ಹಗರಣ ನಡೆದಿದೆ ಅಂತ ಕಂಡು ಬಂದಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದ್ದಾರೆ. ಚಿತ್ತಾಪುರದಲ್ಲಿ ಮಾಧ್ಯದವರೊಂದಿಗೆ ಮಾತನಾಡಿದ ಅವರು, ಕಿಯೋನಿಕ್ಸ್ ಎಂಡಿ ಸಂಗಪ್ಪ ಲಂಚ 32 ಕೋಟಿ ರೂ. ಲಂಚ ಕೇಳಿರುವ ಬಗ್ಗೆ ಹಚ್ಚಿನ ಮಾಹಿತಿ ನನಗಿಲ್ಲ. ಆದರೆ ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಹೇಳಿದ್ದಾರೆ.

ಆಡಿಟರ್ ಜನರಲ್ ರಿಪೋರ್ಟ್ ಅಲ್ಲೂ ಸಹ ಇದೆ.‌ ಮೂರನೇ ವ್ಯಕ್ತಿಯಿಂದ ತನಿಖೆ ಪರಿಶೀಲನೆ ಮಾಡದೆ ಹಣ ಬಿಡುಗಡೆ ಮಾಡಬಾರದು ಅಂತ ಕಾನೂನು ಇದೆ. ಮೂರನೇ ವ್ಯಕ್ತಿಯಿಂದ ಪರಿಶೀಲನೆ ನಡೆದ ಮೇಲೆ ಹಣ ಬಿಡುಗಡೆ ಮಾಡಲಾಗುತ್ತೆ. ಕಾಮಗಾರಿ ಆದರೆ ಪರಿಶೀಲನೆ ಮಾಡಿ ದುಡ್ಡು ಕೊಡಲಾಗುತ್ತೆ‌. ಹಗರಣದ ಬಗ್ಗೆ ಏನಾದರೂ ಸಾಕ್ಷಿ ಇದ್ದರೆ ಕೊಡಿ ಎಂದರು.

ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಕಿಯೋನಿಕ್ಸ್ ವಿಚಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಬಿಜೆಪಿ ಆಗ್ರಹ ವಿಚಾರ‌‌ವಾಗಿ ಮಾತನಾಡಿದ ಅವರು, ನಾವು ಅಧಿಕಾರಕ್ಕೆ ಬರುವ ಮುಂಚೆ ಬಿಜೆಪಿಯರೇ ಆಡಳಿತ ನಡೆಸಿದ್ದಾರೆ. ಟೈಮ್ ಕೊಡಿ ಹಿಂದೆ ಮೂರು ವರ್ಷದಲ್ಲಿ ಬಿಜೆಪಿಯರು ಏನ್ ಮಾಡಿದ್ದಾರೆ ಅಂತ ನಾನೇ ಬಿಚ್ಚಿಡುತ್ತೇನೆ. ಅವರ ಕಾಲದಲ್ಲಿ‌ ಹಗರಣ ಆಗಿದ್ದು ನಾವು ಅಧಿಕಾರಕ್ಕೆ ಬಂದ ಮೇಲೆ ಯಾವುದೇ ಕೆಲಸ ಮಾಡಿಸಿಲ್ಲ. ಬಿಜೆಪಿಯವರು ಸ್ವಲ್ಪ ಮೈಮೇಲೆ ಪ್ರಜ್ಞೆ ಇಟ್ಟುಕೊಂಡು ಮಾತಾಡಲಿ ಎಂದು ಕಿಡಿಕಾರಿದ್ದಾರೆ.

ಇವರ ಸರ್ಕಾರನೇ ಇವರಿಗೆ ಉಳಿಸಿಕೊಳ್ಳಲು ಆಗಲಿಲ್ಲ

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ಟೀಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು, 5 ವರ್ಷದ ಎರಡು ಆಡಳಿತದಲ್ಲಿ ಬಿಜೆಪಿ ಐವರು ಸಿಎಂಗಳನ್ನು ನೀಡಿದೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಜಗದೀಶ ಶೆಟ್ಟರ್, ಡಿ.ವಿ.ಸದಾನಂದಗೌಡ, ಬಸವರಾಜ ಬೊಮ್ಮಾಯಿ ಇವರು ಸ್ಥಿರತೆ ಬಗ್ಗೆ ಮಾತಾಡ್ತಾರಾ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಆರ್​ಡಿ ಪಾಟೀಲ್ ಬಂಧನವಾದರೆ ಪ್ರಿಯಾಂಕ್ ಖರ್ಗೆ ಹೆಸರು ಹೊರಬರುವ ಆತಂಕ ಎಟಿಎಂ ಸರ್ಕಾರಕ್ಕೆ: ಬಿಜೆಪಿ ವಾಗ್ದಾಳಿ

ಇವರ ಸರ್ಕಾರನೇ ಇವರಿಗೆ ಉಳಿಸಿಕೊಳ್ಳಲು ಆಗಲಿಲ್ಲ. ಸರ್ಕಾರ ಉಳಿಸಿಕೊಳ್ಳಲು ಮೋದಿ, ಅಮಿತ್ ಷಾ ಗಲ್ಲಿ ಗಲ್ಲಿ ತಿರುಗಾಡಿದರು. ನಮ್ಮ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆದಿದೆ ಅಂತಾ ಆರೋಪ‌ ಮಾಡ್ತಾರೆ. 40% ಕಮಿಷನ್ ಸರ್ಕಾರ ಅಂತಾ ಬಿರುದು ಸಿಕ್ಕಿದ್ದು ಯಾರ ಸರ್ಕಾರಕ್ಕೆ? ನಮಗೆ 135 ಸೀಟ್ ಕೊಟ್ಟು ಬಿಜೆಪಿಗೆ ಜನ ಕಪಾಳಮೋಕ್ಷ ಮಾಡಿದ್ದಾರೆ. ಮೋದಿ ಮೊದಲು ಕರ್ನಾಟಕದ ರಾಜಕೀಯ ಇತಿಹಾಸ ತಿಳಿದುಕೊಳ್ಳಲಿ ಎಂದು ವಾಗ್ದಾಳಿ ಮಾಡಿದ್ದಾರೆ.

ಆರ್.ಡಿ ಪಾಟೀಲ್​ಗೆ ಸಚಿವ ಪ್ರಿಯಾಂಕ್ ಖರ್ಗೆ ಬೆಂಬಲ: ಬಿಜೆಪಿ ಆರೋಪ

ಕೆಇಎ ಪರೀಕ್ಷೆ ಕಿಂಗ್​ಪಿನ್​ ಆರ್.ಡಿ ಪಾಟೀಲ್​ಗೆ ಸಚಿವ ಪ್ರಿಯಾಂಕ್ ಖರ್ಗೆ ಬೆಂಬಲವಿದೆ ಅನ್ನುವ ಬಿಜೆಪಿ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ನಾವು ಬಂದು ಆರು ತಿಂಗಳ ಆಗಿದೆ. ಹಿಂದೆ ಅವರೇ ಅಧಿಕಾರದಲ್ಲಿದ್ದರು. ನನಗೆ ಅವರ ಜೊತೆ ಸಂಬಂಧ ಇದೆ ಅಂತ ಇದ್ದರೆ ಹಿಂದೆ ಅಧಿಕಾರದಲ್ಲಿದ್ದಾಗ ಏನು ಮಾಡುತ್ತಿದ್ದರು. ಅವರು ಅಧಿಕಾರದಲ್ಲಿದ್ದಾಗ ಯಾಕೆ ಒದ್ದು ಒಳಗೆ ಹಾಕಿಲ್ಲ. ಪಿಎಸ್ಐ ಅಕ್ರಮದ ಅಂತಿಮ ಪಟ್ಟಿ ಬಿಡುಗಡೆ ಆದರೂ ಆರು ಬಾರಿ ಹಗರಣ ನಡೆದೆ ಇಲ್ಲ ಅಂತ ಹೇಳಿದ್ದರು. ಆದರೆ ಕೊನೆಗೆ ಅವರೇ ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ಆಗಿದೆ ಅಂತ ಒಪ್ಪಿಕೊಂಡು. ಸಮ್ಮನೇ ನಮ್ಮ ಮೇಲೆ ಗೂಬೆ ಕೂರಿಸೋದಲ್ಲ ದಾಖಲೆ ಇದ್ದರೆ ಕೊಡಿ. ಅವರಿಗೆ ವಿರೋಧ ಪಕ್ಷ ನಾಯಕ ಇಲ್ಲ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು