AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalaburagi News: ವಿದ್ಯಾರ್ಥಿನಿಗೆ ನೀನು ಮುಸಲ್ಮಾನಳಾಗಿದ್ದರೆ ಬುರ್ಖಾ ಧರಿಸಿ ಮಾತನಾಡು ಎಂದಿದ್ದ KKRTC ಬಸ್ ಚಾಲಕ ಸಸ್ಪೆಂಡ್

ನೀನು ಮುಸಲ್ಮಾನಳಾಗಿದ್ದರೆ ಬುರ್ಖಾ ಧರಿಸಿ ಮಾತನಾಡು ಎಂದು ವಿದ್ಯಾರ್ಥಿನಿಗೆ ಕೆಕೆಆರ್​ಟಿಸಿ (KKRTC) ಬಸ್ ಚಾಲಕ ಹೇಳಿದ್ದಾಗಿ ನಿನ್ನೆ(ಜು.26) ಆರೋಪ ಕೇಳಿಬಂದಿತ್ತು. ಈ ಸಂಬಂಧ ಚಾಲಕ ಮೆಹಬೂಬ್ ಪಟೇಲ್ ಎಂಬಾತನನ್ನ ಅಮಾನತು ಮಾಡಲಾಗಿದೆ.

Kalaburagi News: ವಿದ್ಯಾರ್ಥಿನಿಗೆ ನೀನು ಮುಸಲ್ಮಾನಳಾಗಿದ್ದರೆ ಬುರ್ಖಾ ಧರಿಸಿ ಮಾತನಾಡು ಎಂದಿದ್ದ KKRTC ಬಸ್ ಚಾಲಕ ಸಸ್ಪೆಂಡ್
ಕೆಕೆಆರ್​ಟಿಸಿ ಬಸ್​ ಡ್ರೈವರ್​ ಸಸ್ಪೆಂಡ್​
ಸಂಜಯ್ಯಾ ಚಿಕ್ಕಮಠ
| Edited By: |

Updated on: Jul 28, 2023 | 1:59 PM

Share

ಕಲಬುರಗಿ, ಜು.28: ನೀನು ಮುಸಲ್ಮಾನಳಾಗಿದ್ದರೆ ಬುರ್ಖಾ ಧರಿಸಿ ಮಾತನಾಡು ಎಂದು ವಿದ್ಯಾರ್ಥಿನಿಗೆ ಕೆಕೆಆರ್​ಟಿಸಿ (KKRTC) ಬಸ್ ಚಾಲಕ ಹೇಳಿದ್ದಾಗಿ ನಿನ್ನೆ(ಜು.26) ಆರೋಪ ಕೇಳಿಬಂದಿತ್ತು. ಈ ಸಂಬಂಧ ಕಲಬುರಗಿ(Kalaburagi) ಜಿಲ್ಲೆಯ ಕಮಲಾಪುರ ಬಸ್ ನಿಲ್ದಾಣದಲ್ಲಿ ಶಿಕ್ಷಕ ಮತ್ತು ಚಾಲಕನ ನಡುವೆ ನಡೆದ ವಾಗ್ವಾದದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಬಳಿಕ ಕಲಬುರಗಿ ಬಸ್ ಡಿಪೋ 3 ರ ಚಾಲಕ ಮೆಹಬೂಬ್ ಪಟೇಲ್ ವಿರುದ್ದ ಕಮಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನಲೆ ಬುರ್ಖಾ ಧರಿಸಿ ಮಾತನಾಡುವಂತೆ ಮುಸ್ಲಿಂ ವಿದ್ಯಾರ್ಥಿನಿಗೆ ಹೇಳಿದ್ದ ಡ್ರೈವರ್​ನನ್ನ ಇದೀಗ ಕೆಕೆಆರ್​ಟಿಸಿ ಕಲಬುರಗಿ ವಿಭಾಗದ ಡಿಸಿ ಅಮಾನತು ಮಾಡಿದ್ದಾರೆ.

ಬುರ್ಖಾ ಧರಿಸಿ ಬನ್ನಿ ಎಂದು ಮುಸ್ಲಿಂ ವಿದ್ಯಾರ್ಥಿನಿಗೆ ಹೇಳಿದ್ದ ಬಸ್‌ ಚಾಲಕ

ಜಿಲ್ಲೆಯ ಓಕಳಿ ಎಂಬ ಗ್ರಾಮಕ್ಕೆ ಹೋಗಲು ಬಸ್ ಹತ್ತುತ್ತಿದ್ದ ವಿದ್ಯಾರ್ಥಿನಿಯರ ಜೊತೆ ಚಾಲಕ ಮೆಹಬೂಬ್ ಪಟೇಲ್ ದರ್ಪದಿಂದ ವರ್ತಿಸಿದ್ದ. ಈ ವೇಳೆ ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಯರನ್ನ ನೀನು ಮುಸ್ಲಿಂ ಇದ್ದೀಯಾ ಅಲ್ವಾ, ಬುರ್ಖಾ ಧರಿಸಿ ಬಾ ಎಂದು ಹೇಳಿದ್ದ. ಇದಕ್ಕೆ ಶಿಕ್ಷಕರು ಮತ್ತು ಬಸ್ ಚಾಲಕನ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಇದೀಗ ಪ್ರಯಾಣಿಕರೊಂದಿಗೆ ಅಸಭ್ಯ ವರ್ತನೆ ಆರೋಪದ ಮೇಲೆ ಕೆಕೆಆರ್​ಟಿಸಿ ಬೀದರ್ ಡಿಸಿಯಿಂದ ಅಮಾನತ್ತು ಮಾಡಲಾಗಿದೆಯಂತೆ. ಈ ಕುರಿತು ಕೆಕೆಆರ್​ಟಿಸಿ ಎಂ ಡಿ, ಎಂ ರಾಚಪ್ಪ ಎಂಬುವವರು ದೃಢಪಡಿಸಿದ್ದಾರೆ.

ಇದನ್ನೂ ಓದಿ:ಮುಸಲ್ಮಾನಳಾಗಿದ್ದರೆ ಬುರ್ಖಾ ಧರಿಸಿ ಮಾತನಾಡು: KKRTC ಬಸ್ ಚಾಲಕನ ಉದ್ಧಟತನದ ಮಾತಿಗೆ ಆಕ್ರೋಶ

ಘಟನೆ ವಿವರ

ಈ ಕುರಿತು ವಿದ್ಯಾರ್ಥಿ ಮಾತನಾಡಿ ‘ನಾವು ಬಸ್​ ಹತ್ತುವಾಗ ನೀನು ಮುಸಲ್ಮಾನಳಾ ಎಂದು ಪ್ರಶ್ನಿಸಿ ಹೆಸರು ಹೇಳುವಂತೆ ಚಾಲಕ ಕೇಳಿದ್ದರು. ಆದರೆ, ನಾವು ಹೆಸರು ಹೇಳಲಿಲ್ಲ. ಈ ವೇಳೆ ಚಾಲಕ, ನೀನು ಮುಸಲ್ಮಾನಳಾಗಿದ್ದರೆ ಮೊದಲು ಬುರ್ಖಾ ಹಾಕಿಕೊಂಡು ಮಾತನಾಡು ಎಂದು ಹೇಳಿದ್ದರು. ಅದಾಗ್ಯೂ, ಬಸ್ ಹತ್ತಲು ಯತ್ನಿಸಿದಾಗ ಹತ್ತಲು ಬಿಡಲಿಲ್ಲ ಎಂದು ಎಂದು ವಿದ್ಯಾರ್ಥಿಗಳು ಆರೋಪಿಸಿದ್ದರು. ಈ ಬಗ್ಗೆ ವಿದ್ಯಾರ್ಥಿಗಳು ಶಿಕ್ಷಕರ ಗಮನಕ್ಕೆ ತಂದಿದ್ದಾರೆ. ಕೂಡಲೇ ಶಿಕ್ಷಕರೊಬ್ಬರು ಬಸ್ ನಿಲ್ದಾಣದಲ್ಲಿ ಚಾಲಕನನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿತ್ತು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್