AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೇವರ್ಗಿ ಬಳಿ ಟೈರ್ ಬ್ಲಾಸ್ಟ್ ಆಗಿ ಮದ್ಯ ಸರಬರಾಜು ಮಾಡುತ್ತಿದ್ದ ವಾಹನ ಪಲ್ಟಿ

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಹಸನಾಪುರ ಗ್ರಾಮದ ಬಳಿ ಟೈರ್ ಬ್ಲಾಸ್ಟ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ.

ಜೇವರ್ಗಿ ಬಳಿ ಟೈರ್ ಬ್ಲಾಸ್ಟ್ ಆಗಿ ಮದ್ಯ ಸರಬರಾಜು ಮಾಡುತ್ತಿದ್ದ ವಾಹನ ಪಲ್ಟಿ
ಮದ್ಯ ಸರಬರಾಜು ಮಾಡುತ್ತಿದ್ದ ವಾಹನ ಪಲ್ಟಿ
TV9 Web
| Edited By: |

Updated on:Jan 09, 2023 | 1:07 PM

Share

ಕಲಬುರಗಿ: ಟೈರ್ ಬ್ಲಾಸ್ಟ್ ಆಗಿ ಮದ್ಯ ಸರಬರಾಜು ಮಾಡುತ್ತಿದ್ದ ವಾಹನ ಪಲ್ಟಿ ಹೊಡೆದ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಹಸನಾಪುರ ಗ್ರಾಮದ ಬಳಿ ನಡೆದಿದೆ. ಟೈರ್ ಬ್ಲಾಸ್ಟ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಘಟನೆಯಿಂದ ಅಪಾರ ಪ್ರಮಾಣದ ಮದ್ಯದ ಬಾಟಲಿಗಳು ನಾಶವಾಗಿವೆ. ಚಾಲಕ, ಕ್ಲೀನರ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕಲಬುರಗಿ ನಗರದಿಂದ ಜೇವರ್ಗಿ ಪಟ್ಟಣಕ್ಕೆ ತೆರಳುತ್ತಿದ್ದ ನಗರದ ಗೋದಮಿನಿಂದ ವೈನ್‌ಶಾಪ್‌ಗಳಿಗೆ ಸರಬರಾಜು ಆಗುತ್ತಿದ್ದ ಮದ್ಯ ರಸ್ತೆ ಪಾಲಾಗಿದೆ. ಕಲಬುರಗಿ ನಗರ ಸಂಚಾರಿ 1 ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: 1 ವಾರದಲ್ಲಿ ಮಸೀದಿ ನೆಲಸಮ ಮಾಡ್ಬೇಕು, ಇಲ್ಲದಿದ್ರೆ ಶ್ರೀರಾಮಸೇನೆ ನುಗ್ಗುತ್ತೆ: ಬೆಳಗಾವಿ ಪಾಲಿಕೆ ಆಯುಕ್ತರಿಗೆ ಮುತಾಲಿಕ್ ಎಚ್ಚರಿಕೆ

ಪೂಜಾ ಸಾಮಗ್ರಿ ಗೋಡೌನ್​​ನಲ್ಲಿ ಅಗ್ನಿ ಅವಘಡ

ಬೆಂಗಳೂರಿನ ಬಸವನಗುಡಿಯ ಡಿವಿಜಿ ರಸ್ತೆಯಲ್ಲಿರುವ ಪೂಜಾ ಸಾಮಗ್ರಿ ಗೋಡೌನ್​​ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ರಾತ್ರಿ 11.30ಕ್ಕೆ ಕಟ್ಟಡದ 3ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಗೋಡೌನ್​​ನಲ್ಲಿದ್ದ ಪೂಜಾ ಸಾಮಗ್ರಿಗಳು ಅಗ್ನಿಗಾಹುತಿಯಾಗಿವೆ. 35 ಅಗ್ನಿಶಾಮಕ ಸಿಬ್ಬಂದಿ ಸತತ 3 ಗಂಟೆಗಳ ನಿರಂತರ ಕಾರ್ಯಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.

ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಶಾರ್ಟ್ ​ಸರ್ಕ್ಯೂಟ್​​ನಿಂದ ಬೆಂಕಿ ಹೊತ್ತಿರುವ ಶಂಕೆ ವ್ಯಕ್ತವಾಗಿದೆ. ಗೋಡೌನ್ ಒಳಭಾಗದಲ್ಲಿದ್ದ ಕರ್ಪೂರ, ಊದಿನ ಕಡ್ಡಿ, ದೀಪದ ಎಣ್ಣೆ ಮತ್ತು ಇತರೆ ಪೂಜಾ ಸಾಮಾಗ್ರಿಗಳಿಗೆ ಬೆಂಕಿ ಹೊತ್ತಿದ್ದರಿಂದ ಬೆಂಕಿ ಹಾರಿಸಲು ಅಗ್ನಿಶಾಮಕ ಸಿಬ್ಬಂದಿ ‌ಹರಸಾಹಸಪಡುವಂತಾಯಿತು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:11 am, Mon, 9 January 23

ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ