AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಕಾಯ್ದೆ ಹಿಂಪಡೆಯುವ ಹಿಂದೆ ರಾಜಕೀಯ ನಡೆ ಇದೆ, ಬಿಜೆಪಿ ವಿರುದ್ದ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ರೈತರ ಬಗ್ಗೆ ಕಾಳಜಿ ಇದ್ದಿದ್ದರೆ ಮೊದಲೇ ತೋರಿಸಬೇಕಿತ್ತು. ಸುಗ್ರಿವಾಜ್ಞೆ ಮೂಲಕ ಕಾಯ್ದೆಯನ್ನ ಮೊದಲೇ ಹಿಂಪಡೆಯಬೇಕಿತ್ತು. ಇದೀಗ ಐದು ರಾಜ್ಯಗಳ ಚುನಾವಣೆ ಬಂದಿದೆ. ಅದರ ಪರಿಣಾಮ ತಮ್ಮ ಪಕ್ಷದ ಮೇಲೆ ಆಗಬಹುದು. -ಮಲ್ಲಿಕಾರ್ಜುನ ಖರ್ಗೆ

ಕೃಷಿ ಕಾಯ್ದೆ ಹಿಂಪಡೆಯುವ ಹಿಂದೆ ರಾಜಕೀಯ ನಡೆ ಇದೆ, ಬಿಜೆಪಿ ವಿರುದ್ದ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ
ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ
TV9 Web
| Edited By: |

Updated on: Nov 21, 2021 | 12:29 PM

Share

ಕಲಬುರಗಿ: ನವೆಂಬರ್ 19ರಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿಯವರು ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿದರು. ಸದ್ಯ ಕೃಷಿ ಕಾಯ್ದೆ ಹಿಂಪಡೆಯುವ ಹಿಂದೆ ರಾಜಕೀಯ ನಡೆ ಇದೆ ಎಂದು ಕಲಬುರಗಿಯಲ್ಲಿ ಬಿಜೆಪಿ ವಿರುದ್ದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ರೈತರ ಬಗ್ಗೆ ಕಾಳಜಿ ಇದ್ದಿದ್ದರೆ ಮೊದಲೇ ತೋರಿಸಬೇಕಿತ್ತು. ಸುಗ್ರಿವಾಜ್ಞೆ ಮೂಲಕ ಕಾಯ್ದೆಯನ್ನ ಮೊದಲೇ ಹಿಂಪಡೆಯಬೇಕಿತ್ತು. ಇದೀಗ ಐದು ರಾಜ್ಯಗಳ ಚುನಾವಣೆ ಬಂದಿದೆ. ಅದರ ಪರಿಣಾಮ ತಮ್ಮ ಪಕ್ಷದ ಮೇಲೆ ಆಗಬಹುದು. ಉಪ ಚುನಾವಣೆಯಲ್ಲಿ ಹಿನ್ನಡೆಯಿಂದ ಹಿಂಪಡೆದಿದ್ದಾರೆ. ಈ ನಿರ್ಧಾರವನ್ನು ಕ್ಯಾಬಿನೇಟ್ ಕರೆದು ನಿರ್ಧಾರ ಕೈಗೊಂಡಿಲ್ಲಾ. ಕಾಯ್ದೆ ವಾಪಸ್ ವಿಚಾರವನ್ನ ಸದನದಲ್ಲಿ ಚರ್ಚೆ ಮಾಡುತ್ತೇವೆ ಎಂದು ಕಲಬುರಗಿಯಲ್ಲಿ ಬಿಜೆಪಿ ವಿರುದ್ದ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಇದು ಬಿಜೆಪಿ ಮತ್ತು ಮೋದಿ ನಡೆಯನ್ನು ತೋರಿಸುತ್ತದೆ. ಪ್ರಧಾನಿ ಮೋದಿ ರೈತರಿಗೆ ಉಪಕಾರ ಮಾಡಿಲ್ಲಾ. ಮೋದಿ ಅವರು ಈ ನಿರ್ಧಾರವನ್ನು ಕ್ಯಾಬಿನೇಟ್ ಕರೆದು ನಿರ್ಧಾರ ಕೈಗೊಂಡಿಲ್ಲಾ. ಅವರ ಮನಸಿಗೆ ತಿಳಿದಂತೆ ನಿರ್ಧಾರ ಕೈಗೊಳ್ಳುತ್ತಾರೆ ಎಂದಿದ್ದಾರೆ.

“ನಾವು ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ ಎಂದು ನಾನು ನಿಮಗೆ ಹೇಳಲು ಬಂದಿದ್ದೇನೆ. ಈ ತಿಂಗಳ ಅಂತ್ಯದಲ್ಲಿ ಪ್ರಾರಂಭವಾಗುವ ಮುಂಬರುವ ಸಂಸತ್ತಿನ ಅಧಿವೇಶನದಲ್ಲಿ, ನಾವು ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಸಾಂವಿಧಾನಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತೇವೆ” ಎಂದು ಪ್ರಧಾನಿ ಮೋದಿ ಹೇಳಿದರು.

ಮೂರು ವಿವಾದಾತ್ಮಕ ಕೃಷಿ ಕಾನೂನುಗಳು- ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನೆ ಮತ್ತು ಅನುಕೂಲ) ಕಾಯಿದೆ, 2020, ರೈತರ (ಸಬಲೀಕರಣ ಮತ್ತು ರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯಿದೆ, 2020 ಮತ್ತು ಅಗತ್ಯ ಸರಕುಗಳ (ತಿದ್ದುಪಡಿ) ಕಾಯಿದೆ 2020. ಈ ಕಾಯ್ದೆಗಳನ್ನು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರವು ಅಂಗೀಕರಿಸಿತು. ಸದ್ಯ ಈಗ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿದ್ದಾರೆ.

ಇದನ್ನೂ ಓದಿ: ಪುನೀತ್ ರಾಜ್​ಕುಮಾರ್ ಹೆಸರಲ್ಲಿ ಮಹಾರಾಷ್ಟ್ರ ಅನಾಥಾಶ್ರಮದಲ್ಲಿ ಅನ್ನದಾನ

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್