AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ತೆರಳುತ್ತಿದ್ದ ಕೆಕೆ ಎಕ್ಸ್​​ಪ್ರೆಸ್​ ಸ್ಫೋಟಿಸುವ ಬೆದರಿಕೆ: ಓರ್ವನನ್ನು ವಶಕ್ಕೆ ಪಡೆದ ವಾಡಿ ರೈಲ್ವೆ ಪೊಲೀಸರು

ತನ್ನ ಸಹೋದರನಿಗೆ ಫೈನ್ ಹಾಕಿದ್ದಕ್ಕೆ ಆಕ್ರೋಶಗೊಂಡಿದ್ದ ಆರೋಪಿ ಮದ್ಯದ ಅಮಲಿನಲ್ಲಿ ದೆಹಲಿ-ಬೆಂಗಳೂರು ಕೆ.ಕೆ.ಎಕ್ಸಪ್ರೆಸ್ ರೈಲು ಸ್ಫೋಟಗೊಳ್ಳುವುದಾಗಿ ಕರೆ ಮಾಡಿ ಬೆದರಿಕೆ ಹಾಕಿದ್ದ.

ಬೆಂಗಳೂರಿಗೆ ತೆರಳುತ್ತಿದ್ದ ಕೆಕೆ ಎಕ್ಸ್​​ಪ್ರೆಸ್​ ಸ್ಫೋಟಿಸುವ ಬೆದರಿಕೆ: ಓರ್ವನನ್ನು ವಶಕ್ಕೆ ಪಡೆದ ವಾಡಿ ರೈಲ್ವೆ ಪೊಲೀಸರು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 15, 2021 | 10:04 AM

Share

ಕಲಬುರಗಿ: ದೆಹಲಿ-ಬೆಂಗಳೂರು ಕೆ.ಕೆ.ಎಕ್ಸಪ್ರೆಸ್ ರೈಲು ಸ್ಫೋಟ ಬೆದರಿಕೆ ಕೇಸ್ಗೆ ಸಂಬಂಧಿಸಿ ಕಲಬುರಗಿ ಜಿಲ್ಲೆಯ ವಾಡಿ ರೈಲ್ವೆ ಪೊಲೀಸರು ಓರ್ವ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ತನ್ನ ಸಹೋದರನಿಗೆ ಫೈನ್ ಹಾಕಿದ್ದಕ್ಕೆ ಆಕ್ರೋಶಗೊಂಡು ಆರೋಪಿ ಬೆದರಿಕೆ ಹಾಕಿರುವುದಾಗಿ ತಿಳಿದು ಬಂದಿದೆ.

ತನ್ನ ಸಹೋದರನಿಗೆ ಫೈನ್ ಹಾಕಿದ್ದಕ್ಕೆ ಆಕ್ರೋಶಗೊಂಡಿದ್ದ ಆರೋಪಿ ಮದ್ಯದ ಅಮಲಿನಲ್ಲಿ ದೆಹಲಿ-ಬೆಂಗಳೂರು ಕೆ.ಕೆ.ಎಕ್ಸಪ್ರೆಸ್ ರೈಲು ಸ್ಫೋಟಗೊಳ್ಳುವುದಾಗಿ ಕರೆ ಮಾಡಿ ಬೆದರಿಕೆ ಹಾಕಿದ್ದ. ಈ ವೇಳೆ ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಪ್ರಯಾಣಿಕನೊಬ್ಬನನ್ನು ವಶಕ್ಕೆ ಪಡೆದು ರೈಲ್ವೆ ಪೊಲೀಸರು ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ಇದು ಕುಡುಕ ಸಹೋದರನ ಕಿತಾಪತಿ ಎನ್ನುವುದು ಬಯಲಾಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ವಾಡಿ ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದೆಹಲಿ ಮೂಲದ ಸತ್ಯ ಎನ್ನುವಾತ ಬೆಂಗಳೂರಿಗೆ ತೆರಳುತ್ತಿರುವ ಕೆಕೆ ಎಕ್ಸಪ್ರೆಸ್ ರೈಲು ಬ್ಲಾಸ್ಟ್ ಮಾಡುವುದಾಗಿ ಬೆದರಿಕೆ ಒಡ್ಡಿದ್ದ ಎಂಬುವುದು ತಿಳಿದು ಬಂದಿದೆ. ವಶಕ್ಕೆ ಪಡೆದುಕೊಂಡ ಯುವಕನಿಗೆ ಬೇರೊಂದು ರೈಲಿನಲ್ಲಿ ಬೆಂಗಳೂರಿಗೆ ಕಳುಹಿಸುವ ಸಾಧ್ಯತೆ ಇದೆ.

ಘಟನೆ ಹಿನ್ನೆಲೆ ವಶಕ್ಕೆ ಪಡೆದ ವ್ಯಕ್ತಿಯ ತಮ್ಮ ಕೆ.ಕೆ.ಎಕ್ಸಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿರುವಾಗ ರೈಲಿನಲ್ಲೇ ಸಿಗರೇಟು ಸೇದಿದ್ದಾನೆ. ಹೀಗಾಗಿ ಆತನಿಗೆ ಫೈನ್ ಹಾಕಲಾಗಿತ್ತು. ಈ ವೇಳೆ ಫೈನ್ ಕಟ್ಟಲು ಹಣ ಇಲ್ಲದ ಕಾರಣ ಆತ ತನ್ನ ಅಣ್ಣನಿಗೆ ಕರೆ ಮಾಡಿ ಹಣ ಗೂಗಲ್ ಪೇ ಮಾಡಲು ಹೇಳಿದ್ದ. ಫೈನ್ ಕಟ್ಟಿದ ಬಳಿಕ ಅಣ್ಣನ ಬಳಿ ತನಗಾದ ಅವಮಾನವನ್ನು ಹೇಳಿಕೊಂಡಿದ್ದ. ಇಷ್ಟಕ್ಕೇ ರೊಚ್ಚಿಗೆದ್ದ ಅಣ್ಣ ಕುಡಿದ ಮತ್ತಿನಲ್ಲಿ ರೈಲ್ವೇ ಕಂಟ್ರೋಲ್ ರೂಂಗೆ ಕರೆ ಮಾಡಿ ಹಲಿ-ಬೆಂಗಳೂರು ಕೆ.ಕೆ.ಎಕ್ಸಪ್ರೆಸ್ ರೈಲು ಸ್ಫೋಟಗೊಳ್ಳಲಿದೆ. ಬಾಂಬ್ ಇಟ್ಟಿದ್ದೇನೆ ಎಂದು ಬೆದರಿಕೆ ಹಾಕಿದ್ದ.

ಇದನ್ನೂ ಓದಿ: ಶಿವರಾಜ್ ಕೆ.ಆರ್ ಪೇಟೆ ಮೊದಲ ಸಂಬಳ ಎಷ್ಟು?; ಗೂಗಲ್​ನಲ್ಲಿ ಜನರು ಹುಡುಕಾಡಿದ ಪ್ರಶ್ನೆಗಳಿಗೆ ಸ್ವತಃ ಅವರೇ ಉತ್ತರಿಸಿದ್ದಾರೆ! ವಿಡಿಯೋ ನೋಡಿ

Published On - 9:49 am, Wed, 15 December 21

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ