AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಕೊನೆಗೂ ದೂರು ನೀಡಿದ ವೈದ್ಯಕೀಯ ವಿದ್ಯಾರ್ಥಿಗಳು; FIR ದಾಖಲಿಸದ ಪೊಲೀಸರ ನಡೆ ಮೇಲೆ ಅನುಮಾನ

ವೈದ್ಯ ಪಿಜಿ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ಸಹಾಯ ಆಗಲಿ ಅಂತಾ ಪ್ರತಿ ತಿಂಗಳು ಸರ್ಕಾರದ ನಿಯಮಾವಳಿಯಂತೆ ಸ್ಟೈಫಂಡ್ ನೀಡಲಾಗುತ್ತೆ. ಆದರೆ, ಕಲಬುರಗಿಯ ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಮಹಾವಿದ್ಯಾಲಯದ ಆಡಳಿತ ಮಂಡಳಿ ವಿದ್ಯಾರ್ಥಿಗಳಿಂದ ಖಾಲಿ ಚೆಕ್ ಪಡೆದು ನೂರಾರು ಕೋಟಿ ರೂಪಾಯಿ ಶಿಷ್ಯವೇತನವನ್ನು ಕನ್ನ ಹಾಕಿತ್ತು. ಪ್ರಕರಣ ಬಯಲಿಗೆ ಬಂದಿದ್ದರೂ ವಿದ್ಯಾರ್ಥಿಗಳು ದೂರು ಕೊಟ್ಟಿರಲಿಲ್ಲ, ಇದೀಗ ಆಡಳಿತ ಮಂಡಳಿ ವಿರುದ್ಧ ದೂರು ನೀಡಿದ್ದಾರೆ.

ಕಲಬುರಗಿ: ಕೊನೆಗೂ ದೂರು ನೀಡಿದ ವೈದ್ಯಕೀಯ ವಿದ್ಯಾರ್ಥಿಗಳು; FIR ದಾಖಲಿಸದ ಪೊಲೀಸರ ನಡೆ ಮೇಲೆ ಅನುಮಾನ
ಕಲಬುರಗಿ ಮೆಡಿಕಲ್ ಕಾಲೇಜು ಹಗರಣ: ಕೊನೆಗೂ ದೂರು ನೀಡಿದ ವಿದ್ಯಾರ್ಥಿಗಳು, FIR ದಾಖಲಿಸಲು ಪೊಲೀಸರ ಹಿಂದೇಟು
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: Rakesh Nayak Manchi|

Updated on: Feb 25, 2024 | 8:58 AM

Share

ಕಲಬುರಗಿ, ಫೆ.25: ವೈದ್ಯ ಪಿಜಿ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ಸಹಾಯ ಆಗಲಿ ಅಂತಾ ಪ್ರತಿ ತಿಂಗಳು ಸರ್ಕಾರದ ನಿಯಮಾವಳಿಯಂತೆ ಸ್ಟೈಫಂಡ್ ನೀಡಲಾಗುತ್ತದೆ. ಆದರೆ, ಈ ಶಿಷ್ಯ ವೇತನಕ್ಕೆ ಕನ್ನ ಹಾಕಿದ್ದ ಕಲಬುರಗಿಯ (Kalaburagi) ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಮಹಾವಿದ್ಯಾಲಯದ ಆಡಳಿತ ಮಂಡಳಿ ವಿರುದ್ಧ ಕೊನೆಗೂ ವಿದ್ಯಾರ್ಥಿಗಳು ದೂರು ನೀಡಿದ್ದಾರೆ.

ನೂರಾರು ಕೋಟಿ ಹಣವನ್ನ ನುಂಗಿ ನೀರು ಕುಡಿದಿರುವ ವೈದ್ಯಕೀಯ ಕಾಲೇಜಿನ ಹಗರಣದ ಬಗ್ಗೆ ಟಿವಿ9 ಬಯಲಿಗೆಳೆದಿತ್ತು. ಆದರೆ ತಮ್ಮ ಭವಿಷ್ಯಕ್ಕೆ ತೊಂದರೆಯಾಗುತ್ತೆ ಅಂತ ಸುಮ್ಮನಿದ್ದ ವಿಧ್ಯಾರ್ಥಿಗಳು ಕೊನೆಗೂ ಧೈರ್ಯ ಮಾಡಿ ಠಾಣೆ ಮೆಟ್ಟಿಲೇರಿದ್ದಾರೆ. ತಮ್ಮ ಶಿಷ್ಯವೇತನವನ್ನ ಆಡಳಿತ ಮಂಡಳಿ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.

ಎಫ್​ಐಆರ್ ದಾಖಲಿಸಲು ಪೊಲೀಸರು ಹಿಂದೇಟು

ಕಾಲೇಜು ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳು ದೂರು ನೀಡಿದರೂ ಪೊಲೀಸರು ಮಾತ್ರ ನಾನಾ ಕಾರಣಗಳನ್ನು ಹೇಳಿ ಎಫ್​ಐಆರ್ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಖುದ್ದು 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ದೂರು ನೀಡಿದರೂ ಎಫ್​ಐಆರ್ ದಾಖಲು ಮಾಡಿಲ್ಲ ತಡರಾತ್ರಿಯವರೆಗೂ ಠಾಣೆಯ ಮುಂದೆ ವಿದ್ಯಾರ್ಥಿಗಳು ನಿಂತಿದ್ದರು. ಇದೇ ವೇಳೆ ಠಾಣೆಗೆ ಕಾಲೇಜು ಡೀನ್ ಅವರನ್ನೂ ಪೊಲೀಸರು ಕರೆದಿದ್ದಾರೆ. ಆ ಮೂಲಕ ಬೇದರುಸುವ ತಂತ್ರ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ದೂರು ದಾಖಲಾಗುವ ಮುನ್ನ ಡೀನ್ ಠಾಣೆಗೆ ಬಂದಿದ್ದು ಹೇಗೆ? ಪೊಲೀಸರ ನಡೆಯ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಇದನ್ನೂ ಓದಿ: ಕಲಬುರಗಿ ಮೆಡಿಕಲ್ ಕಾಲೇಜಿನಲ್ಲಿ ಕೋಟ್ಯಂತರ ಶಿಷ್ಯವೇತನ ಗೋಲ್ ಮಾಲ್, ಆಡಿಯೋದಲ್ಲಿ ಆಡಳಿತ ಮಂಡಳಿ ಕಳ್ಳಾಟ ಬಯಲು

ಏನಿದು ಪ್ರಕರಣ?

ವೈದ್ಯ ಪಿಜಿ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ಸಹಾಯ ಆಗಲಿ ಅಂತಾ ಪ್ರತಿ ತಿಂಗಳು ಸರ್ಕಾರದ ನಿಯಮಾವಳಿಯಂತೆ ಸ್ಟೈಫಂಡ್ ನೀಡಲಾಗುತ್ತದೆ. ಆದರೆ ಕಲಬುರಗಿಯ MRMC ಮೆಡಿಕಲ್ ಕಾಲೇಜು ಮಾತ್ರ ಆ ಶಿಷ್ಯವೇತನದಲ್ಲಿ ಭಾರೀ ಕಳ್ಳಾಟವಾಡಿರುವುದು ಬಟಾಬಯಲಾಗಿತ್ತು. ವಿದ್ಯಾರ್ಥಿಗಳಿಂದ ಮೊದಲೆ ಬ್ಲ್ಯಾಂಕ್ ಚೆಕ್ ಪಡೆದು ಶಿಷ್ಯವೇತನವನ್ನ ವಿದ್ಯಾರ್ಥಿಗಳ ಖಾತೆಗೆ ಜಮಾ ಆದ ತಕ್ಷಣ, ಕಾಲೇಜು ಆಡಳಿತ ಮಂಡಳಿ ಡ್ರಾ ಮಾಡಿಕೊಂಡು ಪಿಜಿ ವಿದ್ಯಾರ್ಥಿಗಳಿಗೆ ಮೋಸ ಮಾಡುತ್ತಿತ್ತು.

ಪಿಜಿ ವೈದ್ಯ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಧೋಕಾ ಬಗ್ಗೆ ದಾಖಲೆಗಳೇ ಹೇಳುತ್ತಿವೆ. ತಮ್ಮ ಶಿಕ್ಷಣಕ್ಕೆ ತೊಂದರೆ ಮಾಡಬಹುದು ಅಂತಾ ಬಹಿರಂಗವಾಗಿ ಅನ್ಯಾಯ ಬಗ್ಗೆ ವಿದ್ಯಾರ್ಥಿಗಳು ಹೇಳುತ್ತಿಲ್ಲ. ಆದರೆ ತಮಗಾಗುತ್ತಿರುವ ಅನ್ಯಾಯದ ಬಗ್ಗೆ ವಿದ್ಯಾರ್ಥಿಗಳೇ ಸಾಮಾಜಿಕ ಕಾರ್ಯಕರ್ತರ ಬಳಿ ಮಾತನಾಡಿರೋ ಆಡಿಯೋ ವೈರಲ್ ಆಗಿದ್ದು, ಗೋಲ್ ಮಾಲ್ ಬಟಾಬಯಲಾಗಿದೆ. MRMC ಮೆಡಿಕಲ್ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಮೋಸ ಮಾಡಿರುವ ಗಂಭೀರ ಆರೋಪ ಕೇಳಿ ಬಂದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು