AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಕೊನೆಗೂ ದೂರು ನೀಡಿದ ವೈದ್ಯಕೀಯ ವಿದ್ಯಾರ್ಥಿಗಳು; FIR ದಾಖಲಿಸದ ಪೊಲೀಸರ ನಡೆ ಮೇಲೆ ಅನುಮಾನ

ವೈದ್ಯ ಪಿಜಿ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ಸಹಾಯ ಆಗಲಿ ಅಂತಾ ಪ್ರತಿ ತಿಂಗಳು ಸರ್ಕಾರದ ನಿಯಮಾವಳಿಯಂತೆ ಸ್ಟೈಫಂಡ್ ನೀಡಲಾಗುತ್ತೆ. ಆದರೆ, ಕಲಬುರಗಿಯ ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಮಹಾವಿದ್ಯಾಲಯದ ಆಡಳಿತ ಮಂಡಳಿ ವಿದ್ಯಾರ್ಥಿಗಳಿಂದ ಖಾಲಿ ಚೆಕ್ ಪಡೆದು ನೂರಾರು ಕೋಟಿ ರೂಪಾಯಿ ಶಿಷ್ಯವೇತನವನ್ನು ಕನ್ನ ಹಾಕಿತ್ತು. ಪ್ರಕರಣ ಬಯಲಿಗೆ ಬಂದಿದ್ದರೂ ವಿದ್ಯಾರ್ಥಿಗಳು ದೂರು ಕೊಟ್ಟಿರಲಿಲ್ಲ, ಇದೀಗ ಆಡಳಿತ ಮಂಡಳಿ ವಿರುದ್ಧ ದೂರು ನೀಡಿದ್ದಾರೆ.

ಕಲಬುರಗಿ: ಕೊನೆಗೂ ದೂರು ನೀಡಿದ ವೈದ್ಯಕೀಯ ವಿದ್ಯಾರ್ಥಿಗಳು; FIR ದಾಖಲಿಸದ ಪೊಲೀಸರ ನಡೆ ಮೇಲೆ ಅನುಮಾನ
ಕಲಬುರಗಿ ಮೆಡಿಕಲ್ ಕಾಲೇಜು ಹಗರಣ: ಕೊನೆಗೂ ದೂರು ನೀಡಿದ ವಿದ್ಯಾರ್ಥಿಗಳು, FIR ದಾಖಲಿಸಲು ಪೊಲೀಸರ ಹಿಂದೇಟು
ದತ್ತಾತ್ರೇಯ ಪಾಟೀಲ್​
| Edited By: Rakesh Nayak Manchi|

Updated on: Feb 25, 2024 | 8:58 AM

Share

ಕಲಬುರಗಿ, ಫೆ.25: ವೈದ್ಯ ಪಿಜಿ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ಸಹಾಯ ಆಗಲಿ ಅಂತಾ ಪ್ರತಿ ತಿಂಗಳು ಸರ್ಕಾರದ ನಿಯಮಾವಳಿಯಂತೆ ಸ್ಟೈಫಂಡ್ ನೀಡಲಾಗುತ್ತದೆ. ಆದರೆ, ಈ ಶಿಷ್ಯ ವೇತನಕ್ಕೆ ಕನ್ನ ಹಾಕಿದ್ದ ಕಲಬುರಗಿಯ (Kalaburagi) ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಮಹಾವಿದ್ಯಾಲಯದ ಆಡಳಿತ ಮಂಡಳಿ ವಿರುದ್ಧ ಕೊನೆಗೂ ವಿದ್ಯಾರ್ಥಿಗಳು ದೂರು ನೀಡಿದ್ದಾರೆ.

ನೂರಾರು ಕೋಟಿ ಹಣವನ್ನ ನುಂಗಿ ನೀರು ಕುಡಿದಿರುವ ವೈದ್ಯಕೀಯ ಕಾಲೇಜಿನ ಹಗರಣದ ಬಗ್ಗೆ ಟಿವಿ9 ಬಯಲಿಗೆಳೆದಿತ್ತು. ಆದರೆ ತಮ್ಮ ಭವಿಷ್ಯಕ್ಕೆ ತೊಂದರೆಯಾಗುತ್ತೆ ಅಂತ ಸುಮ್ಮನಿದ್ದ ವಿಧ್ಯಾರ್ಥಿಗಳು ಕೊನೆಗೂ ಧೈರ್ಯ ಮಾಡಿ ಠಾಣೆ ಮೆಟ್ಟಿಲೇರಿದ್ದಾರೆ. ತಮ್ಮ ಶಿಷ್ಯವೇತನವನ್ನ ಆಡಳಿತ ಮಂಡಳಿ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.

ಎಫ್​ಐಆರ್ ದಾಖಲಿಸಲು ಪೊಲೀಸರು ಹಿಂದೇಟು

ಕಾಲೇಜು ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳು ದೂರು ನೀಡಿದರೂ ಪೊಲೀಸರು ಮಾತ್ರ ನಾನಾ ಕಾರಣಗಳನ್ನು ಹೇಳಿ ಎಫ್​ಐಆರ್ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಖುದ್ದು 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ದೂರು ನೀಡಿದರೂ ಎಫ್​ಐಆರ್ ದಾಖಲು ಮಾಡಿಲ್ಲ ತಡರಾತ್ರಿಯವರೆಗೂ ಠಾಣೆಯ ಮುಂದೆ ವಿದ್ಯಾರ್ಥಿಗಳು ನಿಂತಿದ್ದರು. ಇದೇ ವೇಳೆ ಠಾಣೆಗೆ ಕಾಲೇಜು ಡೀನ್ ಅವರನ್ನೂ ಪೊಲೀಸರು ಕರೆದಿದ್ದಾರೆ. ಆ ಮೂಲಕ ಬೇದರುಸುವ ತಂತ್ರ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ದೂರು ದಾಖಲಾಗುವ ಮುನ್ನ ಡೀನ್ ಠಾಣೆಗೆ ಬಂದಿದ್ದು ಹೇಗೆ? ಪೊಲೀಸರ ನಡೆಯ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಇದನ್ನೂ ಓದಿ: ಕಲಬುರಗಿ ಮೆಡಿಕಲ್ ಕಾಲೇಜಿನಲ್ಲಿ ಕೋಟ್ಯಂತರ ಶಿಷ್ಯವೇತನ ಗೋಲ್ ಮಾಲ್, ಆಡಿಯೋದಲ್ಲಿ ಆಡಳಿತ ಮಂಡಳಿ ಕಳ್ಳಾಟ ಬಯಲು

ಏನಿದು ಪ್ರಕರಣ?

ವೈದ್ಯ ಪಿಜಿ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ಸಹಾಯ ಆಗಲಿ ಅಂತಾ ಪ್ರತಿ ತಿಂಗಳು ಸರ್ಕಾರದ ನಿಯಮಾವಳಿಯಂತೆ ಸ್ಟೈಫಂಡ್ ನೀಡಲಾಗುತ್ತದೆ. ಆದರೆ ಕಲಬುರಗಿಯ MRMC ಮೆಡಿಕಲ್ ಕಾಲೇಜು ಮಾತ್ರ ಆ ಶಿಷ್ಯವೇತನದಲ್ಲಿ ಭಾರೀ ಕಳ್ಳಾಟವಾಡಿರುವುದು ಬಟಾಬಯಲಾಗಿತ್ತು. ವಿದ್ಯಾರ್ಥಿಗಳಿಂದ ಮೊದಲೆ ಬ್ಲ್ಯಾಂಕ್ ಚೆಕ್ ಪಡೆದು ಶಿಷ್ಯವೇತನವನ್ನ ವಿದ್ಯಾರ್ಥಿಗಳ ಖಾತೆಗೆ ಜಮಾ ಆದ ತಕ್ಷಣ, ಕಾಲೇಜು ಆಡಳಿತ ಮಂಡಳಿ ಡ್ರಾ ಮಾಡಿಕೊಂಡು ಪಿಜಿ ವಿದ್ಯಾರ್ಥಿಗಳಿಗೆ ಮೋಸ ಮಾಡುತ್ತಿತ್ತು.

ಪಿಜಿ ವೈದ್ಯ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಧೋಕಾ ಬಗ್ಗೆ ದಾಖಲೆಗಳೇ ಹೇಳುತ್ತಿವೆ. ತಮ್ಮ ಶಿಕ್ಷಣಕ್ಕೆ ತೊಂದರೆ ಮಾಡಬಹುದು ಅಂತಾ ಬಹಿರಂಗವಾಗಿ ಅನ್ಯಾಯ ಬಗ್ಗೆ ವಿದ್ಯಾರ್ಥಿಗಳು ಹೇಳುತ್ತಿಲ್ಲ. ಆದರೆ ತಮಗಾಗುತ್ತಿರುವ ಅನ್ಯಾಯದ ಬಗ್ಗೆ ವಿದ್ಯಾರ್ಥಿಗಳೇ ಸಾಮಾಜಿಕ ಕಾರ್ಯಕರ್ತರ ಬಳಿ ಮಾತನಾಡಿರೋ ಆಡಿಯೋ ವೈರಲ್ ಆಗಿದ್ದು, ಗೋಲ್ ಮಾಲ್ ಬಟಾಬಯಲಾಗಿದೆ. MRMC ಮೆಡಿಕಲ್ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಮೋಸ ಮಾಡಿರುವ ಗಂಭೀರ ಆರೋಪ ಕೇಳಿ ಬಂದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ