AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nandini Milk Price: ಹಾಲಿನ ದರ ಏರಿಕೆ ವಿಚಾರವಾಗಿ ನವೆಂಬರ್​ 20ರ ನಂತರ ಸಭೆ ಕರೆದು ತೀರ್ಮಾನ: ಸಿಎಂ ಬೊಮ್ಮಾಯಿ

ನಂದಿನಿ ಹಾಲಿನ ದರ ಪ್ರತಿ ಲೀಟರ್​ಗೆ 3 ರೂ. ಹೆಚ್ಚಳ ವಿಚಾರವಾಗಿ ನವೆಂಬರ್​ 20ರ ನಂತರ ಸಭೆ ಕರೆದು ನಿರ್ಧರಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

Nandini Milk Price: ಹಾಲಿನ ದರ ಏರಿಕೆ ವಿಚಾರವಾಗಿ ನವೆಂಬರ್​ 20ರ ನಂತರ ಸಭೆ ಕರೆದು ತೀರ್ಮಾನ: ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Updated By: Digi Tech Desk|

Updated on:Nov 14, 2022 | 6:44 PM

Share

ಕಲಬುರಗಿ: ಹಾಲಿನ ದರ ಏರಿಕೆ ವಿಚಾರವಾಗಿ ಸರ್ಕಾರ ಮತ್ತು ಕೆಎಂಎಫ್​​ನ ನಡುವಿನ ಗುದ್ದಾಟದಿಂದ ಜನರು ಹೈರಾಣಾಗುತ್ತಿದ್ದಾರೆ. ಇತ್ತ ಕೆಎಂಎಫ್ ​ಈಗಾಗಲೇ ನಂದಿನಿ ಹಾಲಿನ ದರವನ್ನು 3 ರೂ ಏರಿಸಿ ಆದೇಶ ಹೊರಡಿಸಿದೆ. ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ನಂದಿನಿ ಹಾಲಿನ ದರ ಪ್ರತಿ ಲೀಟರ್​ಗೆ 3 ರೂ. ಹೆಚ್ಚಳ ವಿಚಾರವಾಗಿ ನವೆಂಬರ್​ 20ರ ನಂತರ ಸಭೆ ಕರೆದು ನಿರ್ಧರಿಸುತ್ತೇವೆ. ಜನರಿಗೆ ಹೊರೆಯಾಗದ ರೀತಿಯಲ್ಲಿ ಹಾಲಿನ ದರ ಹೆಚ್ಚಿಸುತ್ತೇವೆ ಎಂದು ಸೇಡಂ ಪಟ್ಟಣದಲ್ಲಿ ಹೇಳಿದ್ದಾರೆ.

16 ಹಾಲು ಒಕ್ಕೂಟಗಳಿಂದ ಕೆಎಂಎಫ್​​ಗೆ ಮನವಿ

ರೈತರು ಸಂಕಷ್ಟದಲ್ಲಿದ್ದಾರೆ ಹೀಗಾಗಿ ಪ್ರತಿ ಲೀಟರ್​ಗೆ 3 ರೂಗೆ ಏರಿಕೆ ಮಾಡಬೇಕೆಂದು 16 ಜಿಲ್ಲಾ ಹಾಲು ಒಕ್ಕೂಟಗಳು ಕೆಎಂಎಫ್​​ಗೆ ಮನವಿ ಮಾಡಿದ್ದವು. ಅಲ್ಲದೆ ದರ ಏರಿಕೆಯ ಹಣವನ್ನು ರೈತರಿಗೆ ನೀಡುವುದಾಗಿ ಹೇಳಿದ್ದವು. ಈ ಕುರಿತು ಹಿಂದೊಮ್ಮೆ ಬೆಂಗಳೂರಿನಲ್ಲಿ ಬಾಲಚಂದ್ರ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಕೆಎಂಎಫ್‌ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ ನಡೆದಿತ್ತು. ಸಭೆಯಲ್ಲಿ ಈ ಬಗ್ಗೆ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿತ್ತು. ಕೆಎಂಎಫ್‌ನ ಎಲ್ಲ 16 ಜಿಲ್ಲಾ ಹಾಲು ಒಕ್ಕೂಟಗಳು ಹಾಲಿನ ದರ ಹೆಚ್ಚಳ ಮಾಡುವುದಕ್ಕೆ ಬೆಂಬಲ ವ್ಯಕ್ತಪಡಿಸಿದ್ದವು.

ಸಚಿವ ಎಸ್.ಟಿ. ಸೋಮಶೇಖರ್ ಭರವಸೆ

ಹಾಲಿನ ಬೆಲೆ ಹೆಚ್ಚಳ ಸೇರಿದಂತೆ ಪ್ರಮುಖ ನಿರ್ಧಾರ ತೆಗೆದುಕೊಳ್ಳುವಾಗ ರಾಜ್ಯ ಸರ್ಕಾರದ ಅನುಮೋದನೆ ಪಡೆದುಕೊಳ್ಳಬೇಕು. ಹೀಗಾಗಿ ಈ ಪ್ರಸ್ತಾವನೆಯನ್ನು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರ ಕಿವಿಗು ಹಾಕಲಾಗಿತ್ತು. ಹೀಗಾಗಿ ಎಸ್.ಟಿ. ಸೋಮಶೇಖರ್ ವಿಧಾನಪರಿಷತ್​​ನಲ್ಲಿ ಲೀಟರ್​ ಹಾಲಿಗೆ 3 ರೂ. ಹೆಚ್ಚಳ ಮಾಡಲು ಕೆಎಂಎಫ್​ನಲ್ಲೂ ತೀರ್ಮಾನ ಆಗಿದೆ. ತಕ್ಷಣ ತೀರ್ಮಾನ ತೆಗೆದುಕೊಳ್ಳಲು ಸಿಎಂ ಗಮನಕ್ಕೆ ತರುವೆ ಎಂದಿದ್ದರು.

ಭರವಸೆ ನೀಡಿ 8 ತಿಂಗಳು ಕಳೆದರು ಸರ್ಕಾರ ಹಾಲಿನ ದರ ಏರಿಕೆ ಬಗ್ಗೆ ಚಕಾರ ಎತ್ತಿರಲಿಲ್ಲ. ಇದರಿಂದ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿರುವುದರಿಂದ ಇರುವ ಅಧಿಕಾರವನ್ನು ಬಳಸಿಕೊಂಡು ದರ ಹೆಚ್ಚಳದ ಆದೇಶ ಮಾಡಬೇಕು ಎಂದು ಒಕ್ಕೂಟಗಳು ಅಧ್ಯಕ್ಷರ ಮೇಲೆ ಒತ್ತಡ ಹೇರಿದ್ದವು. ನಂತರ ಕೆಎಂಎಫ್​​ ಅಧ್ಯಕ್ಷ ಬಾಲಚಂದ್ರ ಜಾರಕಿಹೋಳಿ ಅಕ್ಟೋಬರ್​ 31 ರಂದು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ ಶೀಘ್ರದಲ್ಲೇ ಹಾಲಿನ ದರ ಏರಿಸುವುದಾಗಿ ಹೇಳಿದ್ದರು. ಹೇಳಿಕೆ ನೀಡಿ 15 ದಿವಸ ಕಳೆಯುವುದರ ಒಳಗಾಗಿ ಕೆಎಂಎಫ್​​ ಹಾಲಿನ ದರವನ್ನು ಏರಿಕೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 5:11 pm, Mon, 14 November 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!