AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಳು ಕೆಲಸ: ಟ್ರ್ಯಾಕ್ಟರ್​ನಿಂದ ನೇಗಿಲು ಹೊಡೆದು ತಾಲೂಕು ಕ್ರೀಡಾಂಗಣ ಹಾಳು ಮಾಡಿದ ಕಿಡಿಗೇಡಿಗಳು

ದುಷ್ಕರ್ಮಿಗಳು ಟ್ರ್ಯಾಕ್ಟರ್ ನಿಂದ ನೇಗಿಲು ಹೊಡೆದು ಕ್ರೀಡಾಂಗಣವನ್ನು ಹಾಳು ಮಾಡಿದ್ದಾರೆ. ಕ್ರೀಡಾಂಗಣದಲ್ಲಿರೋ ಕ್ರಿಕೆಟ್ ಪಿಚ್ ಅನ್ನು ಕಿಡಿಕೇಡಿಗಳು ಹಾಳು ಮಾಡಿದ್ದಾರೆ. ಕ್ರೀಡಾಪಟುಗಳು ತಮ್ಮ ಸ್ವಂತ ಹಣದಿಂದ ಕ್ರಿಕೆಟ್ ಪಿಚ್ ನಿರ್ಮಿಸಿಕೊಂಡಿದ್ದರು. ಈ ಬಗ್ಗೆ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಳು ಕೆಲಸ: ಟ್ರ್ಯಾಕ್ಟರ್​ನಿಂದ ನೇಗಿಲು ಹೊಡೆದು ತಾಲೂಕು ಕ್ರೀಡಾಂಗಣ ಹಾಳು ಮಾಡಿದ ಕಿಡಿಗೇಡಿಗಳು
ಹಾಳು ಕೆಲಸ: ಟ್ರ್ಯಾಕ್ಟರ್​ನಿಂದ ನೇಗಿಲು ಹೊಡೆದು ತಾಲೂಕು ಕ್ರೀಡಾಂಗಣ ಹಾಳು ಮಾಡಿದ ಕಿಡಿಗೇಡಿಗಳು
TV9 Web
| Edited By: |

Updated on:Dec 01, 2021 | 10:42 AM

Share

ಕಲಬುರಗಿ: ಕಿಡಿಗೇಡಿಗಳು ಟ್ರ್ಯಾಕ್ಟರ್​ನಿಂದ ನೇಗಿಲು ಹೊಡೆದು ತಾಲೂಕು ಕ್ರೀಡಾಂಗಣವನ್ನು ಹಾಳು ಮಾಡಿರುವ ಹಾಳು ಕೆಲಸ ನಡೆದಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ಪಟ್ಟಣದಲ್ಲಿರೋ ಕ್ರೀಡಾಂಗಣಕ್ಕೆ ಈ ದುರದಗತಿ ಬಂದೊದಗಿದೆ. ದುಷ್ಕರ್ಮಿಗಳು ಟ್ರ್ಯಾಕ್ಟರ್ ನಿಂದ ನೇಗಿಲು ಹೊಡೆದು ಕ್ರೀಡಾಂಗಣವನ್ನು ಹಾಳು ಮಾಡಿದ್ದಾರೆ. ಕ್ರೀಡಾಂಗಣದಲ್ಲಿರೋ ಕ್ರಿಕೆಟ್ ಪಿಚ್ ಅನ್ನು ಕಿಡಿಕೇಡಿಗಳು ಹಾಳು ಮಾಡಿದ್ದಾರೆ. ಕ್ರೀಡಾಪಟುಗಳು ತಮ್ಮ ಸ್ವಂತ ಹಣದಿಂದ ಕ್ರಿಕೆಟ್ ಪಿಚ್ ನಿರ್ಮಿಸಿಕೊಂಡಿದ್ದರು. ಆದರೆ ದುಷ್ಕರ್ಮಿಗಳು ಕಳೆದ ರಾತ್ರಿ ಕ್ರೀಡಾಂಗಣಕ್ಕೆ (afzalpur taluk playground) ಟ್ರ್ಯಾಕ್ಟರ್​ ಸಮೇತ ಲಗ್ಗೆಯಿಟ್ಟು ಹಾಳು ಮಾಡಿದ್ದಾರೆ. ಈ ಬಗ್ಗೆ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೇಮಿಗಳು ಇಬ್ಬರೂ ತಬ್ಬಿಕೊಂಡು ಮುಡಿಕಟ್ಟೆ ಬಳಿ ಕಪಿಲಾ ನದಿಗೆ ಹಾರಿದರು! ಮುಂದೇನಾದರು? ಮೈಸೂರು: ಇಬ್ಬರು ಯುವ ಪ್ರೇಮಿಗಳು ಜನುಮದ ಜೋಡಿಯಾಗಿ ಪರಸ್ಪರ ತಬ್ಬಿಕೊಂಡು ಮುಡಿಕಟ್ಟೆ ಬಳಿ ಕಪಿಲಾ ನದಿಗೆ ಹಾರಿದ್ದಾರೆ. ಹಾಗೆ ಪ್ರೇಮಿಗಳು ಕಪಿಲಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಬಳಿ ನಡೆದಿದೆ. ಕೊನೆಗೆ ತೆಪ್ಪ ನಡೆಸುವ ಅಂಬಿಗರಿಂದ ಪ್ರೇಮಿಗಳ ರಕ್ಷಣೆಯಾಗಿದೆ. ಅಭಿ (19) ಮತ್ತು 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯಿಂದ ಆತ್ಮಹತ್ಯೆ ಯತ್ನ ನಡೆದಿದೆ. ಬಾಲಕಿಯು ಚಾಮರಾಜನಗರದ ಕಾಲೇಜು ವಿದ್ಯಾರ್ಥಿನಿಯಾಗಿದ್ದರೆ ಅಭಿ ಪೆಟ್ರೋಲ್ ಬಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದಾನೆ.

ಬಾಲಕಿಯ ಮನೆಯಲ್ಲಿ ಇವರಿಬ್ಬರ ಪ್ರೀತಿಯ ವಿಷಯ ತಿಳಿದ ಹಿನ್ನೆಲೆ ಮುಡಿಕಟ್ಟೆ ಬಳಿ ಪ್ರೇಮಿಗಳು ಕಪಿಲಾ ನದಿಗೆ ಹಾರಿದ್ದಾರೆ. ಇಬ್ಬರಿಗೂ ಈಗ ನಂಜನಗೂಡು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಂಜನಗೂಡು ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

2ನೇ ವಿವಾಹಕ್ಕೆ ಒಪ್ಪಿಗೆ ನೀಡದ ಹಿನ್ನೆಲೆ, ಪತ್ನಿಯ ಮೇಲೆ ಹಲ್ಲೆ ನಡೆಸಿ ಪರಾರಿಯಾದ ಪತಿ ಗೋಪಾಲ 2ನೇ ವಿವಾಹ ಮಾಡಿಕೊಳ್ಳಲು ಪತ್ನಿ ಒಪ್ಪಿಗೆ ನೀಡದ ಹಿನ್ನೆಲೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಬೆಳ್ಳುಬ್ಬಿ ಗ್ರಾಮದಲ್ಲಿ ಪತಿರಾಯ ತನ್ನ ಪತ್ನಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಪತ್ನಿ ಶೀಲಾ ಹರಿಜನ ಮೇಲೆ ಪತಿ ಗೋಪಾಲ ಹರಿಜನ ಹಲ್ಲೆ ಮಾಡಿದ್ದಾನೆ. ಪತ್ನಿ ಶೀಲಾ ಮುಖ, ಕತ್ತು, ಕೈಗೆ ಗಾಯಗಳಾಗಿವೆ. ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಪತ್ನಿ ಮೇಲೆ ಹಲ್ಲೆ ನಡೆಸಿದ ಪತಿ ಗೋಪಾಲ ಪರಾರಿಯಾಗಿದ್ದಾನೆ. ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Published On - 8:32 am, Wed, 1 December 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್