AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಕಾಂಗ್ರೆಸ್ ಮುಖಂಡ ಬಸವರಾಜ್ ಚೌಲ್ ಪುತ್ರನ ಬರ್ಬರ ಕೊಲೆ, ನಡು ರಸ್ತೆಯಲ್ಲಿ ಚಾಕು ಇರಿದು ಹತ್ಯೆ

ಕಲಬುರಗಿ ಜಿಲ್ಲೆ ಆಳಂದ ಪಟ್ಟಣದ ಹೊರವಲಯದ ಜಿಡಗಾ ರಸ್ತೆಯಲ್ಲಿ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕಾಂಗ್ರೆಸ್ ಮುಖಂಡ ಬಸವರಾಜ್ ಚೌಲ್ ಪುತ್ರ ಚಂದ್ರಶೇಖರ್ ಚೌಲ್(21) ಬರ್ಬರ ಕೊಲೆ ಮಾಡಿದ್ದಾರೆ. ಸ್ನೇಹಿತರಿಂದಲೇ ಚಂದ್ರಶೇಖರ್ ಚೌಲ್​​​ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಕಲಬುರಗಿ: ಕಾಂಗ್ರೆಸ್ ಮುಖಂಡ ಬಸವರಾಜ್ ಚೌಲ್ ಪುತ್ರನ ಬರ್ಬರ ಕೊಲೆ, ನಡು ರಸ್ತೆಯಲ್ಲಿ ಚಾಕು ಇರಿದು ಹತ್ಯೆ
ಚಂದ್ರಶೇಖರ್ ಚೌಲ್
ಸಂಜಯ್ಯಾ ಚಿಕ್ಕಮಠ
| Edited By: ಆಯೇಷಾ ಬಾನು|

Updated on: Dec 24, 2023 | 8:51 AM

Share

ಕಲಬುರಗಿ, ಡಿ.24: ಕಾಂಗ್ರೆಸ್ ಮುಖಂಡ ಬಸವರಾಜ್ ಚೌಲ್ ಅವರ ಪುತ್ರನ ಬರ್ಬರ (Murder) ಕೊಲೆಯಾಗಿದೆ. ಆಳಂದ ಶಾಸಕ ಬಿ.ಆರ್.ಪಾಟೀಲ್ ಆಪ್ತ ಬಸವರಾಜ್ ಚೌಲ್ ಪುತ್ರನನ್ನು ನಡು ರಸ್ತೆಯಲ್ಲಿ ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಕಲಬುರಗಿ (Kalaburagi) ಜಿಲ್ಲೆ ಆಳಂದ ಪಟ್ಟಣದ ಹೊರವಲಯದ ಜಿಡಗಾ ರಸ್ತೆಯಲ್ಲಿ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಚಂದ್ರಶೇಖರ್ ಚೌಲ್(21) ಬರ್ಬರ ಕೊಲೆ ಮಾಡಿದ್ದಾರೆ. ಸ್ನೇಹಿತರಿಂದಲೇ ಚಂದ್ರಶೇಖರ್ ಚೌಲ್​​​ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಸದ್ಯ ಘಟನಾ ಸ್ಥಳಕ್ಕೆ ಆಳಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಬರ್ಬರ ಕೊಲೆ

ಇನ್ನು ಕಲಬುರಗಿಯಲ್ಲೇ ಮತ್ತೊಂದು ಕೊಲೆ ನಡೆದಿದೆ. ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಲಾದ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ಪಟ್ಟಣದಲ್ಲಿ ನಡೆದಿದೆ. ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಬಳಿಕ ಗುರುತು ಸಿಗಬಾರದೆಂದು ಶವವನ್ನ ಪೆಟ್ರೋಲ್ ಹಾಕಿ ಸುಡಲಾಗಿದೆ. ದಾವಲ್‌ಸಾಬ್ (25) ಹತ್ಯೆಯಾದ ವ್ಯಕ್ತಿ. ಚಿತ್ತಾಪುರ ಪಟ್ಟಣದಲ್ಲಿ ಹೂವಿನ ಅಂಗಡಿ ವ್ಯಾಪಾರ ಮಾಡಿಕೊಂಡಿದ್ದ ದಾವಲ್‌ಸಾಬ್ ಅವರನ್ನು ಅಪರಿಚಿತ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ.

ತಡರಾತ್ರಿ ಸ್ಥಳಕ್ಕೆ ಎಸ್ಪಿ ಅಡ್ಡೂರು ಶ್ರೀನಿವಾಸುಲು, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕಾಗಿ ಕೊಲೆ ಮಾಡಿದ್ದಾರೆ ಎಂಬುವುದು ತಿಳಿದುಬಂದಿಲ್ಲ‌. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್