AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಕಾಂಗ್ರೆಸ್ ಮುಖಂಡ ಬಸವರಾಜ್ ಚೌಲ್ ಪುತ್ರನ ಬರ್ಬರ ಕೊಲೆ, ನಡು ರಸ್ತೆಯಲ್ಲಿ ಚಾಕು ಇರಿದು ಹತ್ಯೆ

ಕಲಬುರಗಿ ಜಿಲ್ಲೆ ಆಳಂದ ಪಟ್ಟಣದ ಹೊರವಲಯದ ಜಿಡಗಾ ರಸ್ತೆಯಲ್ಲಿ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕಾಂಗ್ರೆಸ್ ಮುಖಂಡ ಬಸವರಾಜ್ ಚೌಲ್ ಪುತ್ರ ಚಂದ್ರಶೇಖರ್ ಚೌಲ್(21) ಬರ್ಬರ ಕೊಲೆ ಮಾಡಿದ್ದಾರೆ. ಸ್ನೇಹಿತರಿಂದಲೇ ಚಂದ್ರಶೇಖರ್ ಚೌಲ್​​​ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಕಲಬುರಗಿ: ಕಾಂಗ್ರೆಸ್ ಮುಖಂಡ ಬಸವರಾಜ್ ಚೌಲ್ ಪುತ್ರನ ಬರ್ಬರ ಕೊಲೆ, ನಡು ರಸ್ತೆಯಲ್ಲಿ ಚಾಕು ಇರಿದು ಹತ್ಯೆ
ಚಂದ್ರಶೇಖರ್ ಚೌಲ್
ಸಂಜಯ್ಯಾ ಚಿಕ್ಕಮಠ
| Edited By: |

Updated on: Dec 24, 2023 | 8:51 AM

Share

ಕಲಬುರಗಿ, ಡಿ.24: ಕಾಂಗ್ರೆಸ್ ಮುಖಂಡ ಬಸವರಾಜ್ ಚೌಲ್ ಅವರ ಪುತ್ರನ ಬರ್ಬರ (Murder) ಕೊಲೆಯಾಗಿದೆ. ಆಳಂದ ಶಾಸಕ ಬಿ.ಆರ್.ಪಾಟೀಲ್ ಆಪ್ತ ಬಸವರಾಜ್ ಚೌಲ್ ಪುತ್ರನನ್ನು ನಡು ರಸ್ತೆಯಲ್ಲಿ ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಕಲಬುರಗಿ (Kalaburagi) ಜಿಲ್ಲೆ ಆಳಂದ ಪಟ್ಟಣದ ಹೊರವಲಯದ ಜಿಡಗಾ ರಸ್ತೆಯಲ್ಲಿ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಚಂದ್ರಶೇಖರ್ ಚೌಲ್(21) ಬರ್ಬರ ಕೊಲೆ ಮಾಡಿದ್ದಾರೆ. ಸ್ನೇಹಿತರಿಂದಲೇ ಚಂದ್ರಶೇಖರ್ ಚೌಲ್​​​ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಸದ್ಯ ಘಟನಾ ಸ್ಥಳಕ್ಕೆ ಆಳಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಬರ್ಬರ ಕೊಲೆ

ಇನ್ನು ಕಲಬುರಗಿಯಲ್ಲೇ ಮತ್ತೊಂದು ಕೊಲೆ ನಡೆದಿದೆ. ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಲಾದ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ಪಟ್ಟಣದಲ್ಲಿ ನಡೆದಿದೆ. ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಬಳಿಕ ಗುರುತು ಸಿಗಬಾರದೆಂದು ಶವವನ್ನ ಪೆಟ್ರೋಲ್ ಹಾಕಿ ಸುಡಲಾಗಿದೆ. ದಾವಲ್‌ಸಾಬ್ (25) ಹತ್ಯೆಯಾದ ವ್ಯಕ್ತಿ. ಚಿತ್ತಾಪುರ ಪಟ್ಟಣದಲ್ಲಿ ಹೂವಿನ ಅಂಗಡಿ ವ್ಯಾಪಾರ ಮಾಡಿಕೊಂಡಿದ್ದ ದಾವಲ್‌ಸಾಬ್ ಅವರನ್ನು ಅಪರಿಚಿತ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ.

ತಡರಾತ್ರಿ ಸ್ಥಳಕ್ಕೆ ಎಸ್ಪಿ ಅಡ್ಡೂರು ಶ್ರೀನಿವಾಸುಲು, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕಾಗಿ ಕೊಲೆ ಮಾಡಿದ್ದಾರೆ ಎಂಬುವುದು ತಿಳಿದುಬಂದಿಲ್ಲ‌. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​