AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಜಿಲ್ಲೆಯಲ್ಲಿ ನಿಧಿಗಾಗಿ ನಡೆಯುತ್ತೆ ಘೋರ ಆಚರಣೆ; ಮಗಳನ್ನೇ ಬಲಿ ಕೊಟ್ಟ ಅಪ್ಪ, ದೇಗುಲದ ಶಿವಲಿಂಗವನ್ನೇ ಕಿತ್ತೆಸೆದ ದುಷ್ಕರ್ಮಿಗಳು

Kalaburagi News: ಮಲ್ಲಿಕಾರ್ಜುನ ದೇವಸ್ಥಾನದ ಶಿವಲಿಂಗವನ್ನು ದುಷ್ಕರ್ಮಿಗಳು ಕಿತ್ತೆಸೆದಿದ್ದು, ಶಿವಲಿಂಗ ಇದ್ದ ಜಾಗದಲ್ಲಿ ನಿಧಿಗಾಗಿ ಶೋಧ ನಡೆಸಿದ್ದಾರೆ.

ಈ ಜಿಲ್ಲೆಯಲ್ಲಿ ನಿಧಿಗಾಗಿ ನಡೆಯುತ್ತೆ ಘೋರ ಆಚರಣೆ; ಮಗಳನ್ನೇ ಬಲಿ ಕೊಟ್ಟ ಅಪ್ಪ, ದೇಗುಲದ ಶಿವಲಿಂಗವನ್ನೇ ಕಿತ್ತೆಸೆದ ದುಷ್ಕರ್ಮಿಗಳು
ದೇಗುಲದ ಶಿವಲಿಂಗವನ್ನೇ ಕಿತ್ತೆಸೆದ ದುಷ್ಕರ್ಮಿಗಳು
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಆಯೇಷಾ ಬಾನು|

Updated on: Jun 04, 2023 | 12:37 PM

Share

ಕಲಬುರಗಿ: ಅನೇಕರು ದುಡಿದು ತಿನ್ನುವುದನ್ನು ಬಿಟ್ಟು ಕಾಣದ ನಿಧಿ ಹುಡುಕಲು(Treasure Hunt) ಹತ್ತಾರು ರೀತಿಯ ವ್ಯರ್ಥ ಕಸರತ್ತು ಮಾಡುತ್ತಲೇ ಇತ್ತಾರೆ. ಅದರಲ್ಲೂ ಕಲಬುರಗಿ(Kalaburagi) ಸೇರಿದಂತೆ ಉತ್ತರ ಕರ್ನಾಟಕದ ಅನೇಕ ಜಿಲ್ಲೆಯಲ್ಲಿ ಕೆಲವರು ನಿಧಿ ಹುಡುಕಾಟ ಮಾಡೋದನ್ನೇ ತಮ್ಮ ದೈನಂದಿನ ಕೆಲಸ ಮಾಡಿಕೊಂಡಿದ್ದು, ಅನೇಕ ದೇವಸ್ಥಾನ, ಕೋಟೆಗಳಲ್ಲಿ ನಿಧಿಗಾಗಿ ಭೂಮಿ ಅಗೆಯುತ್ತಲೇ ಇದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ನಿಧಿಯಾಸೆಗಾಗಿ ದುಷ್ಕರ್ಮಿಗಳು ದೇವಸ್ಥಾನದ‌ ಶಿವಲಿಂಗವನ್ನೇ(Shiva Linga) ಕಿತ್ತೆಸೆದಿರುವ ಘಟನೆ ನಡೆದಿದೆ.

ನಿಧಿಗಾಗಿ ಶಿವಲಿಂಗ ಕಿತ್ತೆಸದ ಕಿರಾತಕರು

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸೂಗೂರು ಎನ್ ಗ್ರಾಮದ ಹೊರವಲಯದಲ್ಲಿರುವ ಮಲ್ಲಿಕಾರ್ಜುನ ದೇವಸ್ಥಾನದ ಶಿವಲಿಂಗವನ್ನು ದುಷ್ಕರ್ಮಿಗಳು ಕಿತ್ತೆಸೆದಿದ್ದು, ಶಿವಲಿಂಗ ಇದ್ದ ಜಾಗದಲ್ಲಿ ನಿಧಿಗಾಗಿ ಶೋಧ ನಡೆಸಿದ್ದಾರೆ. ಮಲ್ಲಿಕಾರ್ಜುನ ಅನ್ನೋ ವ್ಯಕ್ತಿಯ ಜಾಗದಲ್ಲಿ ಪುಟ್ಟ ದೇವಸ್ಥಾನವಿತ್ತು. ದುಷ್ಕರ್ಮಿಗಳು ಕಳೆದ ರಾತ್ರಿ ಯಾರು ಇಲ್ಲದ ಸಮಯದಲ್ಲಿ ನುಗ್ಗಿ, ಶಿವಲಿಂಗವನ್ನು ಕಿತ್ತು ಬೇರಡೆ ಇಟ್ಟು ನಿಧಿ ಹುಡುಕಾಟ ನಡೆಸಿದ್ದಾರೆ. ಅದೇ ಸ್ಥಳದಲ್ಲಿ ಪೂಜೆ ಕೂಡಾ ಮಾಡಿದ್ದಾರೆ. ಇನ್ನು ಇಂದು ಕಾರ್ ಹುಣ್ಣಿಮೆ ಇರುವುದರಿಂದ ಹುಣ್ಣಿಮೆ ಮತ್ತು ಅಮವಾಸ್ಯೆ ದಿನ ಪೂಜೆ ಮಾಡಿದ್ರೆ ನಿಧಿ ಸಿಗುತ್ತೆ ಅನ್ನೋ ನಂಬಿಕೆ ಕೆಲವರಲ್ಲಿದೆ. ಹುಣ್ಣಿಮೆ ದಿನವೇ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ದುಷ್ಕರ್ಮಿಗಳು ನಿಧಿ ಹುಡುಕಾಟ ನಡೆಸಿದ್ದಾರೆ.

ಈ ಹಿಂದೆ ಕೂಡ ನಿಧಿ ಶೋಧ ನಡೆಸಿದ್ದ ದುಷ್ಕರ್ಮಿಗಳು

ಇನ್ನು ಸೂಗೂರು ಎನ್ ಗ್ರಾಮದಲ್ಲಿರುವ ಈ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ನಿಧಿ ಶೋಧ ಮಾಡಿರುವುದು ಮೊದಲೇನಲ್ಲಾ. ಮೂರು ವರ್ಷದ ಹಿಂದೆ ಕೂಡಾ ಇದೇ ರೀತಿ ದುಷ್ಕರ್ಮಿಗಳು ಶಿವಲಿಂಗವನ್ನು ಕಿತ್ತು ನಿಧಿಗಾಗಿ ಹುಡುಕಾಟ ನಡೆಸಿದ್ದರು. ದೇವಸ್ಥಾನದ ಕೆಳಗೆ ನಿಧಿ ಸಿಗುತ್ತದೆ ಅನ್ನೋ ಮೂಢನಂಬಿಕೆಯಿಂದ ಕೆಲವರು ಮೇಲಿಂದ ಮೇಲೆ ಜಿಲ್ಲೆಯ ಅನೇಕ ದೇವಸ್ಥಾನದಲ್ಲಿ ನಿಧಿಗಾಗಿ ಶೋಧ ನಡೆಸೋ ಕೆಲಸವನ್ನು ಮಾಡುತ್ತಲೇ ಇದ್ದಾರೆ.

ಇದನ್ನೂ ಓದಿ: Tumakuru: ಕೀಲು ಮೂಳೆ ಸಂಬಂಧಿಸಿದ ರೋಗಿಗಳಿಗೆ ಡಿ ಗ್ರೂಪ್ ನೌಕರನೇ ಡಾಕ್ಟರ್; ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ವಿಡಿಯೋ ವೈರಲ್​

ನಿಧಿಗಾಗಿ ಜೀವ ತಗೆದಿದ್ದ ದುಷ್ಕರ್ಮಿಗಳು

ಇನ್ನು ಕಲಬುರಗಿ ಜಿಲ್ಲೆಯ ಅನೇಕ ಕಡೆ ನಿಧಿಗಾಗಿ ಪೂಜೆ ಮಾಡುವುದು, ನಿಧಿಗಾಗಿ ಪುಟ್ಟ ಮಕ್ಕಳನ್ನು ಬಲಿ ಕೊಡುವುದು, ಪ್ರಾಣಿಗಳನ್ನು ಬಲಿ ಕೊಡುವುದನ್ನು ಕೆಲವರು ಮಾಡುತ್ತಲೇ ಇದ್ದಾರೆ. ದಶಕದ ಹಿಂದೆ ಕಲಬುರಗಿ ಜಿಲ್ಲೆಯ ಪಿರೋಜಾಬಾದ್ ನಲ್ಲಿ ಸ್ವತಃ ತಂದೆಯೇ ತನ್ನ ಐದು ವರ್ಷದ ಮಗಳನ್ನು ನಿಧಿಗಾಗಿ ಬಲಿ ನೀಡಿದ್ದ. ಕಲಬುರಗಿ ಜಿಲ್ಲೆಯ ಅನೇಕ ಕಡೆ ನಿಧಿಗಾಗಿ ಅನೇಕರ ಪ್ರಾಣಿಗಳನ್ನು ಬಲಿ ಕೊಟ್ಟ ಅನೇಕ ಉದಾಹರಣೆಗಳಿವೆ.

ಇನ್ನು ಸೂಗೂರು ಎನ್ ಗ್ರಾಮದಲ್ಲಿರುವ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ನಿಧಿಗಾಗಿ ಹುಡುಕಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಲಬುರಗಿ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!