AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಜಿಲ್ಲೆಯಲ್ಲಿ ನಿಧಿಗಾಗಿ ನಡೆಯುತ್ತೆ ಘೋರ ಆಚರಣೆ; ಮಗಳನ್ನೇ ಬಲಿ ಕೊಟ್ಟ ಅಪ್ಪ, ದೇಗುಲದ ಶಿವಲಿಂಗವನ್ನೇ ಕಿತ್ತೆಸೆದ ದುಷ್ಕರ್ಮಿಗಳು

Kalaburagi News: ಮಲ್ಲಿಕಾರ್ಜುನ ದೇವಸ್ಥಾನದ ಶಿವಲಿಂಗವನ್ನು ದುಷ್ಕರ್ಮಿಗಳು ಕಿತ್ತೆಸೆದಿದ್ದು, ಶಿವಲಿಂಗ ಇದ್ದ ಜಾಗದಲ್ಲಿ ನಿಧಿಗಾಗಿ ಶೋಧ ನಡೆಸಿದ್ದಾರೆ.

ಈ ಜಿಲ್ಲೆಯಲ್ಲಿ ನಿಧಿಗಾಗಿ ನಡೆಯುತ್ತೆ ಘೋರ ಆಚರಣೆ; ಮಗಳನ್ನೇ ಬಲಿ ಕೊಟ್ಟ ಅಪ್ಪ, ದೇಗುಲದ ಶಿವಲಿಂಗವನ್ನೇ ಕಿತ್ತೆಸೆದ ದುಷ್ಕರ್ಮಿಗಳು
ದೇಗುಲದ ಶಿವಲಿಂಗವನ್ನೇ ಕಿತ್ತೆಸೆದ ದುಷ್ಕರ್ಮಿಗಳು
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Jun 04, 2023 | 12:37 PM

Share

ಕಲಬುರಗಿ: ಅನೇಕರು ದುಡಿದು ತಿನ್ನುವುದನ್ನು ಬಿಟ್ಟು ಕಾಣದ ನಿಧಿ ಹುಡುಕಲು(Treasure Hunt) ಹತ್ತಾರು ರೀತಿಯ ವ್ಯರ್ಥ ಕಸರತ್ತು ಮಾಡುತ್ತಲೇ ಇತ್ತಾರೆ. ಅದರಲ್ಲೂ ಕಲಬುರಗಿ(Kalaburagi) ಸೇರಿದಂತೆ ಉತ್ತರ ಕರ್ನಾಟಕದ ಅನೇಕ ಜಿಲ್ಲೆಯಲ್ಲಿ ಕೆಲವರು ನಿಧಿ ಹುಡುಕಾಟ ಮಾಡೋದನ್ನೇ ತಮ್ಮ ದೈನಂದಿನ ಕೆಲಸ ಮಾಡಿಕೊಂಡಿದ್ದು, ಅನೇಕ ದೇವಸ್ಥಾನ, ಕೋಟೆಗಳಲ್ಲಿ ನಿಧಿಗಾಗಿ ಭೂಮಿ ಅಗೆಯುತ್ತಲೇ ಇದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ನಿಧಿಯಾಸೆಗಾಗಿ ದುಷ್ಕರ್ಮಿಗಳು ದೇವಸ್ಥಾನದ‌ ಶಿವಲಿಂಗವನ್ನೇ(Shiva Linga) ಕಿತ್ತೆಸೆದಿರುವ ಘಟನೆ ನಡೆದಿದೆ.

ನಿಧಿಗಾಗಿ ಶಿವಲಿಂಗ ಕಿತ್ತೆಸದ ಕಿರಾತಕರು

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸೂಗೂರು ಎನ್ ಗ್ರಾಮದ ಹೊರವಲಯದಲ್ಲಿರುವ ಮಲ್ಲಿಕಾರ್ಜುನ ದೇವಸ್ಥಾನದ ಶಿವಲಿಂಗವನ್ನು ದುಷ್ಕರ್ಮಿಗಳು ಕಿತ್ತೆಸೆದಿದ್ದು, ಶಿವಲಿಂಗ ಇದ್ದ ಜಾಗದಲ್ಲಿ ನಿಧಿಗಾಗಿ ಶೋಧ ನಡೆಸಿದ್ದಾರೆ. ಮಲ್ಲಿಕಾರ್ಜುನ ಅನ್ನೋ ವ್ಯಕ್ತಿಯ ಜಾಗದಲ್ಲಿ ಪುಟ್ಟ ದೇವಸ್ಥಾನವಿತ್ತು. ದುಷ್ಕರ್ಮಿಗಳು ಕಳೆದ ರಾತ್ರಿ ಯಾರು ಇಲ್ಲದ ಸಮಯದಲ್ಲಿ ನುಗ್ಗಿ, ಶಿವಲಿಂಗವನ್ನು ಕಿತ್ತು ಬೇರಡೆ ಇಟ್ಟು ನಿಧಿ ಹುಡುಕಾಟ ನಡೆಸಿದ್ದಾರೆ. ಅದೇ ಸ್ಥಳದಲ್ಲಿ ಪೂಜೆ ಕೂಡಾ ಮಾಡಿದ್ದಾರೆ. ಇನ್ನು ಇಂದು ಕಾರ್ ಹುಣ್ಣಿಮೆ ಇರುವುದರಿಂದ ಹುಣ್ಣಿಮೆ ಮತ್ತು ಅಮವಾಸ್ಯೆ ದಿನ ಪೂಜೆ ಮಾಡಿದ್ರೆ ನಿಧಿ ಸಿಗುತ್ತೆ ಅನ್ನೋ ನಂಬಿಕೆ ಕೆಲವರಲ್ಲಿದೆ. ಹುಣ್ಣಿಮೆ ದಿನವೇ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ದುಷ್ಕರ್ಮಿಗಳು ನಿಧಿ ಹುಡುಕಾಟ ನಡೆಸಿದ್ದಾರೆ.

ಈ ಹಿಂದೆ ಕೂಡ ನಿಧಿ ಶೋಧ ನಡೆಸಿದ್ದ ದುಷ್ಕರ್ಮಿಗಳು

ಇನ್ನು ಸೂಗೂರು ಎನ್ ಗ್ರಾಮದಲ್ಲಿರುವ ಈ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ನಿಧಿ ಶೋಧ ಮಾಡಿರುವುದು ಮೊದಲೇನಲ್ಲಾ. ಮೂರು ವರ್ಷದ ಹಿಂದೆ ಕೂಡಾ ಇದೇ ರೀತಿ ದುಷ್ಕರ್ಮಿಗಳು ಶಿವಲಿಂಗವನ್ನು ಕಿತ್ತು ನಿಧಿಗಾಗಿ ಹುಡುಕಾಟ ನಡೆಸಿದ್ದರು. ದೇವಸ್ಥಾನದ ಕೆಳಗೆ ನಿಧಿ ಸಿಗುತ್ತದೆ ಅನ್ನೋ ಮೂಢನಂಬಿಕೆಯಿಂದ ಕೆಲವರು ಮೇಲಿಂದ ಮೇಲೆ ಜಿಲ್ಲೆಯ ಅನೇಕ ದೇವಸ್ಥಾನದಲ್ಲಿ ನಿಧಿಗಾಗಿ ಶೋಧ ನಡೆಸೋ ಕೆಲಸವನ್ನು ಮಾಡುತ್ತಲೇ ಇದ್ದಾರೆ.

ಇದನ್ನೂ ಓದಿ: Tumakuru: ಕೀಲು ಮೂಳೆ ಸಂಬಂಧಿಸಿದ ರೋಗಿಗಳಿಗೆ ಡಿ ಗ್ರೂಪ್ ನೌಕರನೇ ಡಾಕ್ಟರ್; ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ವಿಡಿಯೋ ವೈರಲ್​

ನಿಧಿಗಾಗಿ ಜೀವ ತಗೆದಿದ್ದ ದುಷ್ಕರ್ಮಿಗಳು

ಇನ್ನು ಕಲಬುರಗಿ ಜಿಲ್ಲೆಯ ಅನೇಕ ಕಡೆ ನಿಧಿಗಾಗಿ ಪೂಜೆ ಮಾಡುವುದು, ನಿಧಿಗಾಗಿ ಪುಟ್ಟ ಮಕ್ಕಳನ್ನು ಬಲಿ ಕೊಡುವುದು, ಪ್ರಾಣಿಗಳನ್ನು ಬಲಿ ಕೊಡುವುದನ್ನು ಕೆಲವರು ಮಾಡುತ್ತಲೇ ಇದ್ದಾರೆ. ದಶಕದ ಹಿಂದೆ ಕಲಬುರಗಿ ಜಿಲ್ಲೆಯ ಪಿರೋಜಾಬಾದ್ ನಲ್ಲಿ ಸ್ವತಃ ತಂದೆಯೇ ತನ್ನ ಐದು ವರ್ಷದ ಮಗಳನ್ನು ನಿಧಿಗಾಗಿ ಬಲಿ ನೀಡಿದ್ದ. ಕಲಬುರಗಿ ಜಿಲ್ಲೆಯ ಅನೇಕ ಕಡೆ ನಿಧಿಗಾಗಿ ಅನೇಕರ ಪ್ರಾಣಿಗಳನ್ನು ಬಲಿ ಕೊಟ್ಟ ಅನೇಕ ಉದಾಹರಣೆಗಳಿವೆ.

ಇನ್ನು ಸೂಗೂರು ಎನ್ ಗ್ರಾಮದಲ್ಲಿರುವ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ನಿಧಿಗಾಗಿ ಹುಡುಕಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಲಬುರಗಿ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು