AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕತ್ತು ಕುಯ್ದು, ಸಿಕ್ಕಸಿಕ್ಕಲ್ಲೆಲ್ಲಾ ಚಾಕುವಿನಿಂದ ಚುಚ್ಚಿ ಹತ್ಯೆಗೈದ ಕಿರಾತಕರು; ಕುರಿಕೋಟಾ ಸೇತುವೆ ಬಳಿ ಗುರುತು ಸಿಗದ ಶವ ಪತ್ತೆ

ಸುಮಾರು 30 ವರ್ಷದ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದರು. ಅದ್ಯಾವ ಮಟ್ಟಿಗೆ ಅಂದ್ರೆ ಕುತ್ತಿಗೆಯನ್ನು ಚಾಕುವಿನಿಂದ ಕೊಯ್ದಿರುವ ದುಷ್ಕರ್ಮಿಗಳು, ದೇಹದ ಕಂಡ ಕಂಡಲ್ಲಿ ಚಾಕುವಿನಿಂದ ಚುಚ್ಚಿದ್ದಾರೆ. ಬರ್ಬರವಾಗಿ ಕೊಲೆ ಮಾಡಿ, ಶವವನ್ನು ಕುರಿಕೋಟಾ ಸೇತುವೆ ಮೇಲಿಂದ ನೀರಲ್ಲಿ ಹಾಕಿ ಹೋಗಿದ್ದಾರೆ.

ಕತ್ತು ಕುಯ್ದು, ಸಿಕ್ಕಸಿಕ್ಕಲ್ಲೆಲ್ಲಾ ಚಾಕುವಿನಿಂದ ಚುಚ್ಚಿ ಹತ್ಯೆಗೈದ ಕಿರಾತಕರು; ಕುರಿಕೋಟಾ ಸೇತುವೆ ಬಳಿ ಗುರುತು ಸಿಗದ ಶವ ಪತ್ತೆ
ಕತ್ತು ಕುಯ್ದು, ಸಿಕ್ಕಸಿಕ್ಕಲ್ಲೆಲ್ಲಾ ಚಾಕುವಿನಿಂದ ಚುಚ್ಚಿ ಹತ್ಯೆಗೈದ ಕಿರಾತಕರು, ಕುರಿಕೋಟಾ ಸೇತುವೆ ಬಳಿ ಗುರುತು ಸಿಗದ ಹೆಣ ಪತ್ತೆ
TV9 Web
| Edited By: |

Updated on: Aug 26, 2021 | 9:26 AM

Share

ಕಲಬುರಗಿ: ಕಮಲಾಪುರ ತಾಲೂಕಿನ ಕುರಿಕೋಟಾದ ಸೇತುವೆ ಬಳಿ ಸಾಲು ಸಾಲು ಹೆಣಗಳು ಪತ್ತೆಯಾಗುತ್ತಿವೆ. ಅದರಂತೆ ನಿನ್ನೆ ಕೂಡ ಒಂದು ಹೆಣ ಸಿಕ್ಕಿದೆ. ಕುರಿಕೋಟಾ ಗ್ರಾಮದ ಬೆಣ್ಣೆ ತೋರಾ ಹಿನ್ನಿರಿನಲ್ಲಿ ಶವ ತೇಲುತಿರೋದನ್ನ ಗಮನಿಸಿದ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇಲ್ಲಿ ಹೆಚ್ಚು ಜನ ಸೂಸೈಡ್ ಮಾಡಿಕೊಳ್ಳುವುದರಿಂದ ಯಾರಾದ್ರೂ ಆತ್ಮಹತ್ಯೆ ಮಾಡಿಕೊಂಡಿರಬಹುದು ಅಂತ ಮೀನುಗಾರರ ಸಹಾಯದಿಂದ ಸ್ಥಳೀಯರು ಶವ ಹೊರತೆಗೆದಿದ್ದಾರೆ. ಆದ್ರೆ ಶವದ ಸ್ಥಿತಿ ನೋಡಿದಾಗಿ ಇವರಿಗೆ ಶಾಕ್ ಆಗಿದೆ. ಯಾಕಂದ್ರೆ ಇದು ಆತ್ಮಹತ್ಯೆ ಆಗಿರಲಿಲ್ಲ, ಕೊಲೆ ಆಗಿತ್ತು.

ಸುಮಾರು 30 ವರ್ಷದ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದರು. ಅದ್ಯಾವ ಮಟ್ಟಿಗೆ ಅಂದ್ರೆ ಕುತ್ತಿಗೆಯನ್ನು ಚಾಕುವಿನಿಂದ ಕೊಯ್ದಿರುವ ದುಷ್ಕರ್ಮಿಗಳು, ದೇಹದ ಕಂಡ ಕಂಡಲ್ಲಿ ಚಾಕುವಿನಿಂದ ಚುಚ್ಚಿದ್ದಾರೆ. ಬರ್ಬರವಾಗಿ ಕೊಲೆ ಮಾಡಿ, ಶವವನ್ನು ಕುರಿಕೋಟಾ ಸೇತುವೆ ಮೇಲಿಂದ ನೀರಲ್ಲಿ ಹಾಕಿ ಹೋಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಶ್ವಾನದಳ, ವಿಧಿ ವಿಜ್ಞಾನ ತಂಡದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಭೀಕರವಾಗಿ ಕೊಲೆ ಮಾಡಿರೋ ಪಾಪಿಗಳು ಸಾಕ್ಷ್ಯ ನಾಶ ಮಾಡುವ ಉದ್ದೇಶದಿಂದ ಬೇರೆ ಕಡೆ ಕೊಲೆ ಮಾಡಿ ಇಲ್ಲಿ ಶವ ಬಿಸಾಕಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನು ಕುರಿಕೋಟಾ ಸೇತುವೆ ಇತ್ತೀಚೆಗೆ ಸುಸೈಡ್ ಸ್ಟಾಟ್ ಜೊತೆಗೆ ಮರ್ಡರ್ ಸ್ಟಾಟ್ ಆಗುತ್ತಿರೋದು ಸುತ್ತಮುತ್ತಲಿನ ಗ್ರಾಮದ ಜನರ ಆತಂಕಕ್ಕೆ ಕಾರಣವಾಗಿದೆ. ಬೆಣ್ಣೆ ತೋರಾ ಹಿನ್ನಿರಿಗೆ ಅಡ್ಡಲಾಗಿ ಸೇತುವೆಯನ್ನು ನಿರ್ಮಾಣ ಮಾಡಲಾಗಿದ್ದು, ಈ ಸೇತುವೆ ಮೇಲಿಂದ ಜಿಗಿದು, ಅನೇಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ಲದೇ ಎಲ್ಲೋ ಕೊಲೆ ಮಾಡಿ ಇಲ್ಲಿ ತಂದು ಹೆಣವನ್ನ ಹಾಕುತ್ತಿರೋ ಪ್ರಕರಣಗಳು ಹೆಚ್ಚಾಗಿವೆ.

‘ಕೊಲೆಯಾದ ವ್ಯಕ್ತಿ ಗುರುತು ಪತ್ತೆಯಾಗಬೇಕು’ ‘ಮಹಗಾಂವ್ ಠಾಣೆಯಲ್ಲಿ ವ್ಯಕ್ತಿ ಒಬ್ಬನ ಕೊಲೆ ಬಗ್ಗೆ ಕೇಸ್ ದಾಖಲಾಗಿದೆ. ಮೊದಲು ಕೊಲೆಯಾದ ವ್ಯಕ್ತಿಯ ಗುರುತು ಪತ್ತೆ ಮಾಡುವ ಕೆಲಸ ಮಾಡಲಾಗುತ್ತಿದೆ. ಕೊಲೆಯಾದ ವ್ಯಕ್ತಿ ಗುರುತು ಪತ್ತೆಯಾದ್ರೆ, ಸುಲಭವಾಗಿ ಕೊಲೆಗಾರರು ಯಾರು, ಯಾವ ಕಾರಣಕ್ಕಾಗಿ ಕೊಲೆಯಾಗಿದೆ ಅನ್ನೋದು ಗೊತ್ತಾಗಲಿದೆ.’ ಸದ್ಯ ಶವ ಸಿಕ್ಕಿರೋ ಬಗ್ಗೆ ಮಹಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೊಲೆಯಾದ ವ್ಯಕ್ತಿ ಯಾರು ಅನ್ನೋದು ಗೊತ್ತಾದ್ರೆ ಕೊಲೆ ಮಾಡಿದ್ದು ಯಾರು? ಯಾವ ಕಾರಣಕ್ಕಾಗಿ ಕೊಲೆ ಮಾಡಲಾಗಿದೆ ಅನ್ನೋದು ಆದಷ್ಟು ಬೇಗ ಗೊತ್ತಾಗಲಿದೆ.

ಇದನ್ನೂ ಓದಿ: ದನ ಮೇಯಿಸಲು ಹೋಗಿದ್ದ ಮಹಿಳೆಯ ಒರ್ಬರ ಕೊಲೆ, ಮಾಂಗಲ್ಯ ಸರ ನಾಪತ್ತೆ

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ