AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕತ್ತು ಕುಯ್ದು, ಸಿಕ್ಕಸಿಕ್ಕಲ್ಲೆಲ್ಲಾ ಚಾಕುವಿನಿಂದ ಚುಚ್ಚಿ ಹತ್ಯೆಗೈದ ಕಿರಾತಕರು; ಕುರಿಕೋಟಾ ಸೇತುವೆ ಬಳಿ ಗುರುತು ಸಿಗದ ಶವ ಪತ್ತೆ

ಸುಮಾರು 30 ವರ್ಷದ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದರು. ಅದ್ಯಾವ ಮಟ್ಟಿಗೆ ಅಂದ್ರೆ ಕುತ್ತಿಗೆಯನ್ನು ಚಾಕುವಿನಿಂದ ಕೊಯ್ದಿರುವ ದುಷ್ಕರ್ಮಿಗಳು, ದೇಹದ ಕಂಡ ಕಂಡಲ್ಲಿ ಚಾಕುವಿನಿಂದ ಚುಚ್ಚಿದ್ದಾರೆ. ಬರ್ಬರವಾಗಿ ಕೊಲೆ ಮಾಡಿ, ಶವವನ್ನು ಕುರಿಕೋಟಾ ಸೇತುವೆ ಮೇಲಿಂದ ನೀರಲ್ಲಿ ಹಾಕಿ ಹೋಗಿದ್ದಾರೆ.

ಕತ್ತು ಕುಯ್ದು, ಸಿಕ್ಕಸಿಕ್ಕಲ್ಲೆಲ್ಲಾ ಚಾಕುವಿನಿಂದ ಚುಚ್ಚಿ ಹತ್ಯೆಗೈದ ಕಿರಾತಕರು; ಕುರಿಕೋಟಾ ಸೇತುವೆ ಬಳಿ ಗುರುತು ಸಿಗದ ಶವ ಪತ್ತೆ
ಕತ್ತು ಕುಯ್ದು, ಸಿಕ್ಕಸಿಕ್ಕಲ್ಲೆಲ್ಲಾ ಚಾಕುವಿನಿಂದ ಚುಚ್ಚಿ ಹತ್ಯೆಗೈದ ಕಿರಾತಕರು, ಕುರಿಕೋಟಾ ಸೇತುವೆ ಬಳಿ ಗುರುತು ಸಿಗದ ಹೆಣ ಪತ್ತೆ
TV9 Web
| Edited By: |

Updated on: Aug 26, 2021 | 9:26 AM

Share

ಕಲಬುರಗಿ: ಕಮಲಾಪುರ ತಾಲೂಕಿನ ಕುರಿಕೋಟಾದ ಸೇತುವೆ ಬಳಿ ಸಾಲು ಸಾಲು ಹೆಣಗಳು ಪತ್ತೆಯಾಗುತ್ತಿವೆ. ಅದರಂತೆ ನಿನ್ನೆ ಕೂಡ ಒಂದು ಹೆಣ ಸಿಕ್ಕಿದೆ. ಕುರಿಕೋಟಾ ಗ್ರಾಮದ ಬೆಣ್ಣೆ ತೋರಾ ಹಿನ್ನಿರಿನಲ್ಲಿ ಶವ ತೇಲುತಿರೋದನ್ನ ಗಮನಿಸಿದ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇಲ್ಲಿ ಹೆಚ್ಚು ಜನ ಸೂಸೈಡ್ ಮಾಡಿಕೊಳ್ಳುವುದರಿಂದ ಯಾರಾದ್ರೂ ಆತ್ಮಹತ್ಯೆ ಮಾಡಿಕೊಂಡಿರಬಹುದು ಅಂತ ಮೀನುಗಾರರ ಸಹಾಯದಿಂದ ಸ್ಥಳೀಯರು ಶವ ಹೊರತೆಗೆದಿದ್ದಾರೆ. ಆದ್ರೆ ಶವದ ಸ್ಥಿತಿ ನೋಡಿದಾಗಿ ಇವರಿಗೆ ಶಾಕ್ ಆಗಿದೆ. ಯಾಕಂದ್ರೆ ಇದು ಆತ್ಮಹತ್ಯೆ ಆಗಿರಲಿಲ್ಲ, ಕೊಲೆ ಆಗಿತ್ತು.

ಸುಮಾರು 30 ವರ್ಷದ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದರು. ಅದ್ಯಾವ ಮಟ್ಟಿಗೆ ಅಂದ್ರೆ ಕುತ್ತಿಗೆಯನ್ನು ಚಾಕುವಿನಿಂದ ಕೊಯ್ದಿರುವ ದುಷ್ಕರ್ಮಿಗಳು, ದೇಹದ ಕಂಡ ಕಂಡಲ್ಲಿ ಚಾಕುವಿನಿಂದ ಚುಚ್ಚಿದ್ದಾರೆ. ಬರ್ಬರವಾಗಿ ಕೊಲೆ ಮಾಡಿ, ಶವವನ್ನು ಕುರಿಕೋಟಾ ಸೇತುವೆ ಮೇಲಿಂದ ನೀರಲ್ಲಿ ಹಾಕಿ ಹೋಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಶ್ವಾನದಳ, ವಿಧಿ ವಿಜ್ಞಾನ ತಂಡದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಭೀಕರವಾಗಿ ಕೊಲೆ ಮಾಡಿರೋ ಪಾಪಿಗಳು ಸಾಕ್ಷ್ಯ ನಾಶ ಮಾಡುವ ಉದ್ದೇಶದಿಂದ ಬೇರೆ ಕಡೆ ಕೊಲೆ ಮಾಡಿ ಇಲ್ಲಿ ಶವ ಬಿಸಾಕಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನು ಕುರಿಕೋಟಾ ಸೇತುವೆ ಇತ್ತೀಚೆಗೆ ಸುಸೈಡ್ ಸ್ಟಾಟ್ ಜೊತೆಗೆ ಮರ್ಡರ್ ಸ್ಟಾಟ್ ಆಗುತ್ತಿರೋದು ಸುತ್ತಮುತ್ತಲಿನ ಗ್ರಾಮದ ಜನರ ಆತಂಕಕ್ಕೆ ಕಾರಣವಾಗಿದೆ. ಬೆಣ್ಣೆ ತೋರಾ ಹಿನ್ನಿರಿಗೆ ಅಡ್ಡಲಾಗಿ ಸೇತುವೆಯನ್ನು ನಿರ್ಮಾಣ ಮಾಡಲಾಗಿದ್ದು, ಈ ಸೇತುವೆ ಮೇಲಿಂದ ಜಿಗಿದು, ಅನೇಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ಲದೇ ಎಲ್ಲೋ ಕೊಲೆ ಮಾಡಿ ಇಲ್ಲಿ ತಂದು ಹೆಣವನ್ನ ಹಾಕುತ್ತಿರೋ ಪ್ರಕರಣಗಳು ಹೆಚ್ಚಾಗಿವೆ.

‘ಕೊಲೆಯಾದ ವ್ಯಕ್ತಿ ಗುರುತು ಪತ್ತೆಯಾಗಬೇಕು’ ‘ಮಹಗಾಂವ್ ಠಾಣೆಯಲ್ಲಿ ವ್ಯಕ್ತಿ ಒಬ್ಬನ ಕೊಲೆ ಬಗ್ಗೆ ಕೇಸ್ ದಾಖಲಾಗಿದೆ. ಮೊದಲು ಕೊಲೆಯಾದ ವ್ಯಕ್ತಿಯ ಗುರುತು ಪತ್ತೆ ಮಾಡುವ ಕೆಲಸ ಮಾಡಲಾಗುತ್ತಿದೆ. ಕೊಲೆಯಾದ ವ್ಯಕ್ತಿ ಗುರುತು ಪತ್ತೆಯಾದ್ರೆ, ಸುಲಭವಾಗಿ ಕೊಲೆಗಾರರು ಯಾರು, ಯಾವ ಕಾರಣಕ್ಕಾಗಿ ಕೊಲೆಯಾಗಿದೆ ಅನ್ನೋದು ಗೊತ್ತಾಗಲಿದೆ.’ ಸದ್ಯ ಶವ ಸಿಕ್ಕಿರೋ ಬಗ್ಗೆ ಮಹಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೊಲೆಯಾದ ವ್ಯಕ್ತಿ ಯಾರು ಅನ್ನೋದು ಗೊತ್ತಾದ್ರೆ ಕೊಲೆ ಮಾಡಿದ್ದು ಯಾರು? ಯಾವ ಕಾರಣಕ್ಕಾಗಿ ಕೊಲೆ ಮಾಡಲಾಗಿದೆ ಅನ್ನೋದು ಆದಷ್ಟು ಬೇಗ ಗೊತ್ತಾಗಲಿದೆ.

ಇದನ್ನೂ ಓದಿ: ದನ ಮೇಯಿಸಲು ಹೋಗಿದ್ದ ಮಹಿಳೆಯ ಒರ್ಬರ ಕೊಲೆ, ಮಾಂಗಲ್ಯ ಸರ ನಾಪತ್ತೆ

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?