AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕತ್ತು ಕುಯ್ದು, ಸಿಕ್ಕಸಿಕ್ಕಲ್ಲೆಲ್ಲಾ ಚಾಕುವಿನಿಂದ ಚುಚ್ಚಿ ಹತ್ಯೆಗೈದ ಕಿರಾತಕರು; ಕುರಿಕೋಟಾ ಸೇತುವೆ ಬಳಿ ಗುರುತು ಸಿಗದ ಶವ ಪತ್ತೆ

ಸುಮಾರು 30 ವರ್ಷದ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದರು. ಅದ್ಯಾವ ಮಟ್ಟಿಗೆ ಅಂದ್ರೆ ಕುತ್ತಿಗೆಯನ್ನು ಚಾಕುವಿನಿಂದ ಕೊಯ್ದಿರುವ ದುಷ್ಕರ್ಮಿಗಳು, ದೇಹದ ಕಂಡ ಕಂಡಲ್ಲಿ ಚಾಕುವಿನಿಂದ ಚುಚ್ಚಿದ್ದಾರೆ. ಬರ್ಬರವಾಗಿ ಕೊಲೆ ಮಾಡಿ, ಶವವನ್ನು ಕುರಿಕೋಟಾ ಸೇತುವೆ ಮೇಲಿಂದ ನೀರಲ್ಲಿ ಹಾಕಿ ಹೋಗಿದ್ದಾರೆ.

ಕತ್ತು ಕುಯ್ದು, ಸಿಕ್ಕಸಿಕ್ಕಲ್ಲೆಲ್ಲಾ ಚಾಕುವಿನಿಂದ ಚುಚ್ಚಿ ಹತ್ಯೆಗೈದ ಕಿರಾತಕರು; ಕುರಿಕೋಟಾ ಸೇತುವೆ ಬಳಿ ಗುರುತು ಸಿಗದ ಶವ ಪತ್ತೆ
ಕತ್ತು ಕುಯ್ದು, ಸಿಕ್ಕಸಿಕ್ಕಲ್ಲೆಲ್ಲಾ ಚಾಕುವಿನಿಂದ ಚುಚ್ಚಿ ಹತ್ಯೆಗೈದ ಕಿರಾತಕರು, ಕುರಿಕೋಟಾ ಸೇತುವೆ ಬಳಿ ಗುರುತು ಸಿಗದ ಹೆಣ ಪತ್ತೆ
TV9 Web
| Updated By: ಆಯೇಷಾ ಬಾನು|

Updated on: Aug 26, 2021 | 9:26 AM

Share

ಕಲಬುರಗಿ: ಕಮಲಾಪುರ ತಾಲೂಕಿನ ಕುರಿಕೋಟಾದ ಸೇತುವೆ ಬಳಿ ಸಾಲು ಸಾಲು ಹೆಣಗಳು ಪತ್ತೆಯಾಗುತ್ತಿವೆ. ಅದರಂತೆ ನಿನ್ನೆ ಕೂಡ ಒಂದು ಹೆಣ ಸಿಕ್ಕಿದೆ. ಕುರಿಕೋಟಾ ಗ್ರಾಮದ ಬೆಣ್ಣೆ ತೋರಾ ಹಿನ್ನಿರಿನಲ್ಲಿ ಶವ ತೇಲುತಿರೋದನ್ನ ಗಮನಿಸಿದ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇಲ್ಲಿ ಹೆಚ್ಚು ಜನ ಸೂಸೈಡ್ ಮಾಡಿಕೊಳ್ಳುವುದರಿಂದ ಯಾರಾದ್ರೂ ಆತ್ಮಹತ್ಯೆ ಮಾಡಿಕೊಂಡಿರಬಹುದು ಅಂತ ಮೀನುಗಾರರ ಸಹಾಯದಿಂದ ಸ್ಥಳೀಯರು ಶವ ಹೊರತೆಗೆದಿದ್ದಾರೆ. ಆದ್ರೆ ಶವದ ಸ್ಥಿತಿ ನೋಡಿದಾಗಿ ಇವರಿಗೆ ಶಾಕ್ ಆಗಿದೆ. ಯಾಕಂದ್ರೆ ಇದು ಆತ್ಮಹತ್ಯೆ ಆಗಿರಲಿಲ್ಲ, ಕೊಲೆ ಆಗಿತ್ತು.

ಸುಮಾರು 30 ವರ್ಷದ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದರು. ಅದ್ಯಾವ ಮಟ್ಟಿಗೆ ಅಂದ್ರೆ ಕುತ್ತಿಗೆಯನ್ನು ಚಾಕುವಿನಿಂದ ಕೊಯ್ದಿರುವ ದುಷ್ಕರ್ಮಿಗಳು, ದೇಹದ ಕಂಡ ಕಂಡಲ್ಲಿ ಚಾಕುವಿನಿಂದ ಚುಚ್ಚಿದ್ದಾರೆ. ಬರ್ಬರವಾಗಿ ಕೊಲೆ ಮಾಡಿ, ಶವವನ್ನು ಕುರಿಕೋಟಾ ಸೇತುವೆ ಮೇಲಿಂದ ನೀರಲ್ಲಿ ಹಾಕಿ ಹೋಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಶ್ವಾನದಳ, ವಿಧಿ ವಿಜ್ಞಾನ ತಂಡದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಭೀಕರವಾಗಿ ಕೊಲೆ ಮಾಡಿರೋ ಪಾಪಿಗಳು ಸಾಕ್ಷ್ಯ ನಾಶ ಮಾಡುವ ಉದ್ದೇಶದಿಂದ ಬೇರೆ ಕಡೆ ಕೊಲೆ ಮಾಡಿ ಇಲ್ಲಿ ಶವ ಬಿಸಾಕಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನು ಕುರಿಕೋಟಾ ಸೇತುವೆ ಇತ್ತೀಚೆಗೆ ಸುಸೈಡ್ ಸ್ಟಾಟ್ ಜೊತೆಗೆ ಮರ್ಡರ್ ಸ್ಟಾಟ್ ಆಗುತ್ತಿರೋದು ಸುತ್ತಮುತ್ತಲಿನ ಗ್ರಾಮದ ಜನರ ಆತಂಕಕ್ಕೆ ಕಾರಣವಾಗಿದೆ. ಬೆಣ್ಣೆ ತೋರಾ ಹಿನ್ನಿರಿಗೆ ಅಡ್ಡಲಾಗಿ ಸೇತುವೆಯನ್ನು ನಿರ್ಮಾಣ ಮಾಡಲಾಗಿದ್ದು, ಈ ಸೇತುವೆ ಮೇಲಿಂದ ಜಿಗಿದು, ಅನೇಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ಲದೇ ಎಲ್ಲೋ ಕೊಲೆ ಮಾಡಿ ಇಲ್ಲಿ ತಂದು ಹೆಣವನ್ನ ಹಾಕುತ್ತಿರೋ ಪ್ರಕರಣಗಳು ಹೆಚ್ಚಾಗಿವೆ.

‘ಕೊಲೆಯಾದ ವ್ಯಕ್ತಿ ಗುರುತು ಪತ್ತೆಯಾಗಬೇಕು’ ‘ಮಹಗಾಂವ್ ಠಾಣೆಯಲ್ಲಿ ವ್ಯಕ್ತಿ ಒಬ್ಬನ ಕೊಲೆ ಬಗ್ಗೆ ಕೇಸ್ ದಾಖಲಾಗಿದೆ. ಮೊದಲು ಕೊಲೆಯಾದ ವ್ಯಕ್ತಿಯ ಗುರುತು ಪತ್ತೆ ಮಾಡುವ ಕೆಲಸ ಮಾಡಲಾಗುತ್ತಿದೆ. ಕೊಲೆಯಾದ ವ್ಯಕ್ತಿ ಗುರುತು ಪತ್ತೆಯಾದ್ರೆ, ಸುಲಭವಾಗಿ ಕೊಲೆಗಾರರು ಯಾರು, ಯಾವ ಕಾರಣಕ್ಕಾಗಿ ಕೊಲೆಯಾಗಿದೆ ಅನ್ನೋದು ಗೊತ್ತಾಗಲಿದೆ.’ ಸದ್ಯ ಶವ ಸಿಕ್ಕಿರೋ ಬಗ್ಗೆ ಮಹಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೊಲೆಯಾದ ವ್ಯಕ್ತಿ ಯಾರು ಅನ್ನೋದು ಗೊತ್ತಾದ್ರೆ ಕೊಲೆ ಮಾಡಿದ್ದು ಯಾರು? ಯಾವ ಕಾರಣಕ್ಕಾಗಿ ಕೊಲೆ ಮಾಡಲಾಗಿದೆ ಅನ್ನೋದು ಆದಷ್ಟು ಬೇಗ ಗೊತ್ತಾಗಲಿದೆ.

ಇದನ್ನೂ ಓದಿ: ದನ ಮೇಯಿಸಲು ಹೋಗಿದ್ದ ಮಹಿಳೆಯ ಒರ್ಬರ ಕೊಲೆ, ಮಾಂಗಲ್ಯ ಸರ ನಾಪತ್ತೆ

ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಹೋಶಿಯಾರ್​ಪುರದಲ್ಲಿ ಬಸ್ ಪಲ್ಟಿ, 8 ಮಂದಿ ಸಾವು, 25 ಜನರಿಗೆ ಗಾಯ
ಹೋಶಿಯಾರ್​ಪುರದಲ್ಲಿ ಬಸ್ ಪಲ್ಟಿ, 8 ಮಂದಿ ಸಾವು, 25 ಜನರಿಗೆ ಗಾಯ