AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalaburagi News: ಬಸವ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಕಲ್ಲು ತೂರಾಟ, ಗಾಜು ಪುಡಿ-ಪುಡಿ: ಪ್ರಯಾಣಿಕರಿಗೆ ಗಾಯ

ಕಲಬುರಗಿ ಬಳಿ ಬಸವ ಎಕ್ಸ್​ಪ್ರೆಸ್​ ರೈಲಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು, ಘಟನೆಯಲ್ಲಿ ಕೆಲ ಪ್ರಯಾಣಿಕೆಗೆ ಗಾಯಗಳಾಗಿರುವ ಘಟನೆ ನಡೆದಿದೆ.

Kalaburagi News: ಬಸವ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಕಲ್ಲು ತೂರಾಟ, ಗಾಜು ಪುಡಿ-ಪುಡಿ: ಪ್ರಯಾಣಿಕರಿಗೆ ಗಾಯ
ಸಂಜಯ್ಯಾ ಚಿಕ್ಕಮಠ
| Edited By: |

Updated on: Jul 20, 2023 | 7:13 AM

Share

ಕಲಬುರಗಿ, (ಜುಲೈ 20): ಕರ್ನಾಟಕದಲ್ಲಿ ರೈಲಿನ ಮೇಲೆ ಕಲ್ಲು ತೂರಾಟ ಪ್ರಕರಣಗಳು ಹೆಚ್ಚಾಗುತ್ತಿದೆ. ಇತ್ತೀಚೆಗೆ ವಂದೇ ಭಾರತ್ ಎಕ್ಸ್​ಪ್ರೆಸ್ ಹಾಗೂ ಕಲಬುರಗಿ-ಬೀದರ್​ ಪ್ಯಾಸೆಂಜರ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ ಬೆನ್ನಲ್ಲೇ ಇದೀಗ ಮತ್ತೊಂದು ಘಟನೆ ಮರುಕಳಿಸಿದೆ. ಹೌದು… ಬಸವ ಎಕ್ಸ್‌ಪ್ರೆಸ್‌ ರೈಲಿನ ((basava express train) )ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ(Stone Pelting) ನಡೆಸಿರುವ ಘಟನೆ ನಡೆದಿದೆ. ಕಲಬುರಗಿ(Kalaburagi) ತಾಲೂಕಿನ ಬಬಲಾದ ಗ್ರಾಮದ ಬಳಿ ಜುಲೈ 19ರ ರಾತ್ರಿ ಬಸವ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ದುಷ್ಕರ್ಮಿ ಕಲ್ಲು ಎಸೆದಿದ್ದಾರೆ. ಇದರಿಂದ ರೈಲಿನ AC A1 ಬೋಗಿಯ ಗಾಜು ಪುಡಿ-ಪುಡಿಯಾಗಿದ್ದು, ಘಟನೆಯಲ್ಲಿ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಇದನ್ನೂ ಓದಿ: ಕಲಬುರಗಿ-ಬೀದರ್​ ಪ್ಯಾಸೆಂಜರ್ ರೈಲಿನ ಮೇಲೆ ಕಲ್ಲು ತೂರಾಟ; ಓರ್ವ ಮಹಿಳೆಗೆ ಗಾಯ

ಅಲ್ಲದೇ ರೈಲಿನ ಇಂಜಿನ್ ಮೇಲೆ ಸಹ ಕಲ್ಲು ಎಸೆದಿದ್ದು, ಗಾಜು ಪುಡಿ ಪುಡಿಯಾಗಿದೆ. ಬಾಗಲಕೋಟೆ, ಮೈಸೂರು ಮಧ್ಯೆ ನಿತ್ಯ ಸಂಚರಿಸುವ ಬಸವ ಎಕ್ಸ್‌ಪ್ರೆಸ್‌ ರೈಲು, ಕಲಬುರಗಿ, ವಾಡಿ, ಯಾದಗಿರಿ ಮಾರ್ಗವಾಗಿ ಸಂಚಾರಿಸುತ್ತದೆ. ಈ ಬಗ್ಗೆ ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ