AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇರೆಯವರ ತರಹ ನಾನು ಕೈಕಾಲು ಹಿಡಿದಿದ್ದರೆ ಇಷ್ಟೊತ್ತಿಗೆ ಸಿಎಂ ಆಗುತ್ತಿದ್ದೆ: ಬಸನಗೌಡ ಪಾಟೀಲ್ ಯತ್ನಾಳ್

​ಬೇರೆಯವರ ತರಹ ನಾನು ಕೈಕಾಲು ಹಿಡಿದಿದ್ದರೆ ಇಷ್ಟೊತ್ತಿಗೆ ಕರ್ನಾಟಕದ ಮುಖ್ಯಮಂತ್ರಿ ಆಗುತ್ತಿದ್ದೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಹೇಳಿದ್ದಾರೆ.

TV9 Web
| Edited By: ವಿವೇಕ ಬಿರಾದಾರ|

Updated on:Feb 28, 2023 | 10:44 AM

Share

ಕಲಬುರಗಿ: ಬೇರೆಯವರ ತರಹ ನಾನು ಕೈಕಾಲು ಹಿಡಿದಿದ್ದರೆ ಇಷ್ಟೊತ್ತಿಗೆ ಕರ್ನಾಟಕದ ಮುಖ್ಯಮಂತ್ರಿ ಆಗುತ್ತಿದ್ದೆ ಎಂದು ವಿಜಯಪುರ (Vijaypura) ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ (Mla Basanagouda Patil Yatnal) ಹೇಳಿದ್ದಾರೆ. ಕೇಂದ್ರ ಮಾಜಿ ಸಚಿವ ಬಸನಗೌಡ ಪಾಟೀಲ್​ ಯತ್ನಾಳ ಆಗಾಗ ಮುಖ್ಯಮಂತ್ರಿಯಾಗುತ್ತಿದ್ದೆ ಎಂಬ ಹೇಳಿಕೆಗಳನ್ನು ನಿಡುತ್ತಲೇ ಇರುತ್ತಾರೆ. ಈ ಹಿಂದೆ ಕೂಡ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವ ಹೋರಾಟದಲ್ಲೂ ಕೂಡ ಎಲ್ಲರ ಜೊತೆ ಅಡ್ಜಸ್ಟ್​ ಆಗಿದ್ದರೆ ನಾನೆ ಮುಖ್ಯಮಂತ್ರಿಯಾಗುತ್ತಿದ್ದೆ ಎಂದಿದ್ದರು. ಇದಕ್ಕೂ ಮುಂಚೆ ಮುಖ್ಯಮಂತ್ರಿ ಆಗುವ ಅವಕಾಶವಿತ್ತು, ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ನನಗೆ ಅವಕಾಶ ತಪ್ಪಿಸಿದರು ಎಂದು ಹೇಳಿದ್ದರು. ವಿಧಾನಸಭೆ ಚುನಾವಣೆ ಹತ್ತಿರದಲ್ಲಿ ಇರುವಾಗಲೆ ಈ ಮಾತುಗಳನ್ನು ಆಡಿದ್ದಾರೆ.

ಕಳೆದ ರಾತ್ರಿ ಕಲಬುರಗಿ ನಗರದಲ್ಲಿ ನಡೆದ ಶಿವ ಪಾರ್ವತಿ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು ನಾನು ಯಾವುದೇ ಹುದ್ದೆಯ ಆಸೆ‌ ಪಟ್ಟವನಲ್ಲ. ಆ ಹುದ್ದೆ ನನಗೆ ಬರುವುದಿದ್ದರೇ ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಏನು ಆಗದಿದ್ದರೂ ಪರವಾಗಿಲ್ಲ, ಮತ್ತೊಬ್ಬರನ್ನು ನೋಡಿ ಖುಷಿ ಪಡುತ್ತೇನೆ. ಮತ್ತೊಬ್ಬರನ್ನು ನೋಡಿ‌ ಸಂತೋಷಪಡುವ ವ್ಯಕ್ತಿ ನಾನು ಎಂದು ಹೇಳಿದ್ದಾರೆ.

ವೈಷಮ್ಯ ಮರೆತು ಯಡಿಯೂರಪ್ಪರನ್ನು ಹಾಡಿ ಹೊಗಳಿದ ಯತ್ನಾಳ

ಮಾಜಿ ಮುಖ್ಯಮಂತ್ರಿ  ಬಿ.ಎಸ್​​.ಯಡಿಯೂರಪ್ಪ (BS Yediyurappa) ನಮ್ಮನ್ನೆಲ್ಲ ಮುನ್ನಡೆಸುತ್ತಿದ್ದರು. ಬಿಎಸ್​ ಯಡಿಯೂರಪ್ಪ ಅವರ ಜತೆ ಏನೇ ವೈಷಮ್ಯ ಇರಬಹುದು, ಅವರು ನಮ್ಮ ನಾಯಕರು. ಅನಂತಕುಮಾರ್‌ ಮತ್ತು ಯಡಿಯೂರಪ್ಪ ಕೃಷ್ಣ ಅರ್ಜುನ ರೀತಿ ಪಕ್ಷ ಕಟ್ಟಿದರು. ಯಡಿಯೂರಪ್ಪ, ಅನಂತಕುಮಾರ್‌ ನನ್ನನ್ನು ಕೇಂದ್ರ ಸಚಿವರನ್ನಾಗಿ ಮಾಡಿದರು ಎಂದು 15ನೇ ಅಧಿವೇಶನದ ಕೊನೆಯ ದಿನ ವಿಧಾನಸಭೆಯಲ್ಲಿ ಹೇಳಿದ್ದರು. ಪಕ್ಷ ಇಂದು ಈ ಸ್ಥಾನದಲ್ಲಿ ಇರಲು ಅವರೇ ಕಾರಣ ಎಂದು ಯತ್ನಾಳ್‌ ಬಿಎಸ್‌ವೈ ಅವರನ್ನು ಶ್ಲಾಘಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:38 am, Tue, 28 February 23

Follow Us
TV9 Web
TV9 Web

TV9 Kannada

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ