AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯವರು ದುಡ್ಡು ಕೊಟ್ಟು ಜೆಡಿಎಸ್ ಅಭ್ಯರ್ಥಿಯನ್ನು ನಿಲ್ಲಿಸುತ್ತಿದ್ದಾರೆ: ಜಮೀರ್ ಅಹ್ಮದ್

ಬಿಜೆಪಿಯವರು ದುಡ್ಡು ಕೊಟ್ಟು ಜೆಡಿಎಸ್ ಅಭ್ಯರ್ಥಿಯನ್ನು ನಿಲ್ಲಿಸುತ್ತಿದ್ದಾರೆ. ಬಿಜೆಪಿಗೆ ಅನುಕೂಲ ಮಾಡಲು ಜೆಡಿಎಸ್​​, ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ. ಜೆಡಿಎಸ್​​ಗೆ ಮತ ಹಾಕಿದರೆ ಬಿಜೆಪಿಗೆ ಹಾಕಿದಂತೆ ಎಂದು ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ.

TV9 Web
| Edited By: ವಿವೇಕ ಬಿರಾದಾರ|

Updated on:Feb 07, 2023 | 3:41 PM

Share

ಕಲಬುರಗಿ: ಬಿಜೆಪಿಯವರು (BJP) ದುಡ್ಡು ಕೊಟ್ಟು ಜೆಡಿಎಸ್ (JDS) ಅಭ್ಯರ್ಥಿಯನ್ನು ನಿಲ್ಲಿಸುತ್ತಿದ್ದಾರೆ. ಬಿಜೆಪಿಗೆ ಅನುಕೂಲ ಮಾಡಲು ಜೆಡಿಎಸ್​​, ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ. ಜೆಡಿಎಸ್​​ಗೆ ಮತ ಹಾಕಿದರೆ ಬಿಜೆಪಿಗೆ ಹಾಕಿದಂತೆ ಎಂದು ಶಾಸಕ ಜಮೀರ್ ಅಹ್ಮದ್ (Zameer Ahmed) ಹೇಳಿದ್ದಾರೆ. ಜಿಲ್ಲೆಯ ಆಳಂದ ಪಟ್ಟಣದಲ್ಲಿ ಕಾಂಗ್ರೆಸ್ (Congress)​ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು ಕರ್ನಾಟಕದಲ್ಲಿ ಹಿಂದೂ, ಮುಸ್ಲಿಮರು ಸಹೋದರರಂತೆ ಇದ್ದಾರೆ. ಬಿಜೆಪಿ ಹಿಂದೂ, ಮುಸ್ಲಿಂ ಭೇದಭಾವ ಸೃಷ್ಟಿಸಿ ಮತ ಪಡೆಯುತ್ತಿದೆ ಎಂದರು.

ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅಲ್ಪಸಂಖ್ಯಾತರಿಗೆ ಏನೂ ಮಾಡಲಿಲ್ಲ. ಹೆಚ್​.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅಲ್ಪಸಂಖ್ಯಾತರ ಅನುದಾನ ಕಡಿಮೆ ಮಾಡಿದ್ದರು. ಮುಸ್ಲಿಂರಿಗೆ ಕಾಂಗ್ರೆಸ್ ಎಲ್ಲಾ ನೀಡಿದೆ ಎಂದು ವಾಗ್ದಾಳಿ ಮಾಡಿದರು.

ಸಿ.ಎಂ.ಇಬ್ರಾಹಿಂ ಖಾಲಿ ಬಸ್​​​ಗೆ (ಜೆಡಿಎಸ್​) ಹೋಗಿದ್ದಾರೆ

ಹೆಚ್​ಡಿ ಕುಮಾರಸ್ವಾಮಿ ತಾವೇ ದೊಡ್ಡ ನಾಯಕ ಅಂತಾ ಅಂದುಕೊಂಡಿದ್ದಾರೆ. ಆದರೆ ಈ ಭಾರಿ ಜೆಡಿಎಸ್ 15 ರಿಂದ 16 ಸ್ಥಾನ ಗೆದ್ದರೆ ಅದೇ ದೊಡ್ಡದು. ಈ ಹಿಂದೆ ಸಿದ್ದರಾಮಯ್ಯ ಹಿಂದೆ ಸಿ.ಎಂ.ಇಬ್ರಾಹಿಂ ಓಡಾಡುತ್ತಿದ್ದರು. ಆಗ ಸಿ.ಎಂ.ಇಬ್ರಾಹಿಂ ಜೆಡಿಎಸ್​ ಖಾಲಿ ಬಸ್​​ ಅಂತಾ ಹೇಳುತ್ತಿದ್ದರು. ಆದರೆ ಈಗ ಸಿ.ಎಂ.ಇಬ್ರಾಹಿಂ ಖಾಲಿ ಬಸ್​​​ಗೆ ಹೋಗಿದ್ದಾರೆ. ಸಿದ್ದರಾಮಯ್ಯ ಅನ್ನೋ ಇಂಜಿನ್ ಕಾಂಗ್ರೆಸ್​ನಲ್ಲಿದೆ. ಸತ್ತಾಗ ಹೇಗೆ ನಾಲ್ಕು ಜನರು ಹೊತ್ತುಕೊಂಡು ಹೋಗುತ್ತಾರೋ, ಹಾಗೆ ಆ ಖಾಲಿ ಬಸ್ ಅನ್ನು ತಳ್ಳಿಕೊಂಡು ಹೋಗುವಂತಾಗಿದೆ ಎಂದು ಜೆಡಿಎಸ್​ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ವಿರುದ್ಧ ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:38 pm, Tue, 7 February 23

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್