AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯವರು ದುಡ್ಡು ಕೊಟ್ಟು ಜೆಡಿಎಸ್ ಅಭ್ಯರ್ಥಿಯನ್ನು ನಿಲ್ಲಿಸುತ್ತಿದ್ದಾರೆ: ಜಮೀರ್ ಅಹ್ಮದ್

ಬಿಜೆಪಿಯವರು ದುಡ್ಡು ಕೊಟ್ಟು ಜೆಡಿಎಸ್ ಅಭ್ಯರ್ಥಿಯನ್ನು ನಿಲ್ಲಿಸುತ್ತಿದ್ದಾರೆ. ಬಿಜೆಪಿಗೆ ಅನುಕೂಲ ಮಾಡಲು ಜೆಡಿಎಸ್​​, ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ. ಜೆಡಿಎಸ್​​ಗೆ ಮತ ಹಾಕಿದರೆ ಬಿಜೆಪಿಗೆ ಹಾಕಿದಂತೆ ಎಂದು ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ.

TV9 Web
| Edited By: |

Updated on:Feb 07, 2023 | 3:41 PM

Share

ಕಲಬುರಗಿ: ಬಿಜೆಪಿಯವರು (BJP) ದುಡ್ಡು ಕೊಟ್ಟು ಜೆಡಿಎಸ್ (JDS) ಅಭ್ಯರ್ಥಿಯನ್ನು ನಿಲ್ಲಿಸುತ್ತಿದ್ದಾರೆ. ಬಿಜೆಪಿಗೆ ಅನುಕೂಲ ಮಾಡಲು ಜೆಡಿಎಸ್​​, ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ. ಜೆಡಿಎಸ್​​ಗೆ ಮತ ಹಾಕಿದರೆ ಬಿಜೆಪಿಗೆ ಹಾಕಿದಂತೆ ಎಂದು ಶಾಸಕ ಜಮೀರ್ ಅಹ್ಮದ್ (Zameer Ahmed) ಹೇಳಿದ್ದಾರೆ. ಜಿಲ್ಲೆಯ ಆಳಂದ ಪಟ್ಟಣದಲ್ಲಿ ಕಾಂಗ್ರೆಸ್ (Congress)​ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು ಕರ್ನಾಟಕದಲ್ಲಿ ಹಿಂದೂ, ಮುಸ್ಲಿಮರು ಸಹೋದರರಂತೆ ಇದ್ದಾರೆ. ಬಿಜೆಪಿ ಹಿಂದೂ, ಮುಸ್ಲಿಂ ಭೇದಭಾವ ಸೃಷ್ಟಿಸಿ ಮತ ಪಡೆಯುತ್ತಿದೆ ಎಂದರು.

ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅಲ್ಪಸಂಖ್ಯಾತರಿಗೆ ಏನೂ ಮಾಡಲಿಲ್ಲ. ಹೆಚ್​.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅಲ್ಪಸಂಖ್ಯಾತರ ಅನುದಾನ ಕಡಿಮೆ ಮಾಡಿದ್ದರು. ಮುಸ್ಲಿಂರಿಗೆ ಕಾಂಗ್ರೆಸ್ ಎಲ್ಲಾ ನೀಡಿದೆ ಎಂದು ವಾಗ್ದಾಳಿ ಮಾಡಿದರು.

ಸಿ.ಎಂ.ಇಬ್ರಾಹಿಂ ಖಾಲಿ ಬಸ್​​​ಗೆ (ಜೆಡಿಎಸ್​) ಹೋಗಿದ್ದಾರೆ

ಹೆಚ್​ಡಿ ಕುಮಾರಸ್ವಾಮಿ ತಾವೇ ದೊಡ್ಡ ನಾಯಕ ಅಂತಾ ಅಂದುಕೊಂಡಿದ್ದಾರೆ. ಆದರೆ ಈ ಭಾರಿ ಜೆಡಿಎಸ್ 15 ರಿಂದ 16 ಸ್ಥಾನ ಗೆದ್ದರೆ ಅದೇ ದೊಡ್ಡದು. ಈ ಹಿಂದೆ ಸಿದ್ದರಾಮಯ್ಯ ಹಿಂದೆ ಸಿ.ಎಂ.ಇಬ್ರಾಹಿಂ ಓಡಾಡುತ್ತಿದ್ದರು. ಆಗ ಸಿ.ಎಂ.ಇಬ್ರಾಹಿಂ ಜೆಡಿಎಸ್​ ಖಾಲಿ ಬಸ್​​ ಅಂತಾ ಹೇಳುತ್ತಿದ್ದರು. ಆದರೆ ಈಗ ಸಿ.ಎಂ.ಇಬ್ರಾಹಿಂ ಖಾಲಿ ಬಸ್​​​ಗೆ ಹೋಗಿದ್ದಾರೆ. ಸಿದ್ದರಾಮಯ್ಯ ಅನ್ನೋ ಇಂಜಿನ್ ಕಾಂಗ್ರೆಸ್​ನಲ್ಲಿದೆ. ಸತ್ತಾಗ ಹೇಗೆ ನಾಲ್ಕು ಜನರು ಹೊತ್ತುಕೊಂಡು ಹೋಗುತ್ತಾರೋ, ಹಾಗೆ ಆ ಖಾಲಿ ಬಸ್ ಅನ್ನು ತಳ್ಳಿಕೊಂಡು ಹೋಗುವಂತಾಗಿದೆ ಎಂದು ಜೆಡಿಎಸ್​ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ವಿರುದ್ಧ ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:38 pm, Tue, 7 February 23

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ