AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯವರು ದುಡ್ಡು ಕೊಟ್ಟು ಜೆಡಿಎಸ್ ಅಭ್ಯರ್ಥಿಯನ್ನು ನಿಲ್ಲಿಸುತ್ತಿದ್ದಾರೆ: ಜಮೀರ್ ಅಹ್ಮದ್

ಬಿಜೆಪಿಯವರು ದುಡ್ಡು ಕೊಟ್ಟು ಜೆಡಿಎಸ್ ಅಭ್ಯರ್ಥಿಯನ್ನು ನಿಲ್ಲಿಸುತ್ತಿದ್ದಾರೆ. ಬಿಜೆಪಿಗೆ ಅನುಕೂಲ ಮಾಡಲು ಜೆಡಿಎಸ್​​, ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ. ಜೆಡಿಎಸ್​​ಗೆ ಮತ ಹಾಕಿದರೆ ಬಿಜೆಪಿಗೆ ಹಾಕಿದಂತೆ ಎಂದು ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ.

TV9 Web
| Edited By: ವಿವೇಕ ಬಿರಾದಾರ|

Updated on:Feb 07, 2023 | 3:41 PM

Share

ಕಲಬುರಗಿ: ಬಿಜೆಪಿಯವರು (BJP) ದುಡ್ಡು ಕೊಟ್ಟು ಜೆಡಿಎಸ್ (JDS) ಅಭ್ಯರ್ಥಿಯನ್ನು ನಿಲ್ಲಿಸುತ್ತಿದ್ದಾರೆ. ಬಿಜೆಪಿಗೆ ಅನುಕೂಲ ಮಾಡಲು ಜೆಡಿಎಸ್​​, ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ. ಜೆಡಿಎಸ್​​ಗೆ ಮತ ಹಾಕಿದರೆ ಬಿಜೆಪಿಗೆ ಹಾಕಿದಂತೆ ಎಂದು ಶಾಸಕ ಜಮೀರ್ ಅಹ್ಮದ್ (Zameer Ahmed) ಹೇಳಿದ್ದಾರೆ. ಜಿಲ್ಲೆಯ ಆಳಂದ ಪಟ್ಟಣದಲ್ಲಿ ಕಾಂಗ್ರೆಸ್ (Congress)​ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು ಕರ್ನಾಟಕದಲ್ಲಿ ಹಿಂದೂ, ಮುಸ್ಲಿಮರು ಸಹೋದರರಂತೆ ಇದ್ದಾರೆ. ಬಿಜೆಪಿ ಹಿಂದೂ, ಮುಸ್ಲಿಂ ಭೇದಭಾವ ಸೃಷ್ಟಿಸಿ ಮತ ಪಡೆಯುತ್ತಿದೆ ಎಂದರು.

ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅಲ್ಪಸಂಖ್ಯಾತರಿಗೆ ಏನೂ ಮಾಡಲಿಲ್ಲ. ಹೆಚ್​.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅಲ್ಪಸಂಖ್ಯಾತರ ಅನುದಾನ ಕಡಿಮೆ ಮಾಡಿದ್ದರು. ಮುಸ್ಲಿಂರಿಗೆ ಕಾಂಗ್ರೆಸ್ ಎಲ್ಲಾ ನೀಡಿದೆ ಎಂದು ವಾಗ್ದಾಳಿ ಮಾಡಿದರು.

ಸಿ.ಎಂ.ಇಬ್ರಾಹಿಂ ಖಾಲಿ ಬಸ್​​​ಗೆ (ಜೆಡಿಎಸ್​) ಹೋಗಿದ್ದಾರೆ

ಹೆಚ್​ಡಿ ಕುಮಾರಸ್ವಾಮಿ ತಾವೇ ದೊಡ್ಡ ನಾಯಕ ಅಂತಾ ಅಂದುಕೊಂಡಿದ್ದಾರೆ. ಆದರೆ ಈ ಭಾರಿ ಜೆಡಿಎಸ್ 15 ರಿಂದ 16 ಸ್ಥಾನ ಗೆದ್ದರೆ ಅದೇ ದೊಡ್ಡದು. ಈ ಹಿಂದೆ ಸಿದ್ದರಾಮಯ್ಯ ಹಿಂದೆ ಸಿ.ಎಂ.ಇಬ್ರಾಹಿಂ ಓಡಾಡುತ್ತಿದ್ದರು. ಆಗ ಸಿ.ಎಂ.ಇಬ್ರಾಹಿಂ ಜೆಡಿಎಸ್​ ಖಾಲಿ ಬಸ್​​ ಅಂತಾ ಹೇಳುತ್ತಿದ್ದರು. ಆದರೆ ಈಗ ಸಿ.ಎಂ.ಇಬ್ರಾಹಿಂ ಖಾಲಿ ಬಸ್​​​ಗೆ ಹೋಗಿದ್ದಾರೆ. ಸಿದ್ದರಾಮಯ್ಯ ಅನ್ನೋ ಇಂಜಿನ್ ಕಾಂಗ್ರೆಸ್​ನಲ್ಲಿದೆ. ಸತ್ತಾಗ ಹೇಗೆ ನಾಲ್ಕು ಜನರು ಹೊತ್ತುಕೊಂಡು ಹೋಗುತ್ತಾರೋ, ಹಾಗೆ ಆ ಖಾಲಿ ಬಸ್ ಅನ್ನು ತಳ್ಳಿಕೊಂಡು ಹೋಗುವಂತಾಗಿದೆ ಎಂದು ಜೆಡಿಎಸ್​ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ವಿರುದ್ಧ ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:38 pm, Tue, 7 February 23

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?