AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗ್ತಿಲ್ಲ: ರಾಜೀನಾಮೆ ಬೆನ್ನಲ್ಲೇ ಬಿಆರ್ ಪಾಟೀಲ್ ಅಸಮಾಧಾನ

ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಶಾಸಕ ಬಿಆರ್ ಪಾಟೀಲ್ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಗ್ಯಾರೆಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಗಳಿಗೆ ಅನುದಾನ ಸಿಗುತ್ತಿಲ್ಲ ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರು ಹೇಳಿದ್ದೇನೆಂಬುದರ ವಿವರ ಇಲ್ಲಿದೆ.

ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗ್ತಿಲ್ಲ: ರಾಜೀನಾಮೆ ಬೆನ್ನಲ್ಲೇ ಬಿಆರ್ ಪಾಟೀಲ್ ಅಸಮಾಧಾನ
ಬಿಆರ್ ಪಾಟೀಲ್ (ಸಂಗ್ರಹ ಚಿತ್ರ)
ದತ್ತಾತ್ರೇಯ ಪಾಟೀಲ್​
| Edited By: |

Updated on: Feb 02, 2025 | 11:07 AM

Share

ಕಲಬುರಗಿ, ಫೆಬ್ರವರಿ 2: ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ. ಸುಮ್ಮನೇ ರಾಜೀನಾಮೆ ಕೊಟ್ಟಿಲ್ಲ. ಕೆಲವು ಸಮಸ್ಯೆಗಳಿವೆ ಎಂದು ಶಾಸಕ ಬಿಆರ್​ ಪಾಟೀಲ್ ಹೇಳಿದರು. ಕಲಬುರಗಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಸ್ಥಾನಕ್ಕೆ ನಾನು ರಾಜಿನಾಮೆ ನೀಡಿದ್ದು ವಿಶೇಷ ಬೆಳವಣಿಗೆಯಲ್ಲ. ಯಾವುತ್ತೋ ರಾಜೀನಾಮೆ ನೀಡಬೇಕಿತ್ತು. ನಿನ್ನೆ ರಾಜೀನಾಮೆ ನೀಡಿದ್ದೇನೆ ಎಂದರು.

ನಾನು ಸಿಎಂ ಸಿದ್ದರಾಮಯ್ಯಗೆ 2ನೇ ಬಾರಿಗೆ ಪತ್ರ ಬರೆದಿದ್ದೇನೆ. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಒತ್ತಡದಲ್ಲಿದ್ದಾರೆ. ಕೊನೇವರೆಗೂ ನಿಮ್ಮ ಸ್ನೇಹಿತನಾಗಿ ಉಳಿಯುತ್ತೇನೆ ಅಂದಿದ್ದಾರೆ ಎಂದು ಬಿಆರ್ ಪಾಟೀಲ್ ತಿಳಿಸಿದರು.

ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗ್ತಿಲ್ಲ. ಹಾಗೆಂದು ನನಗೆ ಯಾವುದೇ ಅಸಮಾಧಾನ ಇಲ್ಲ. ಪತ್ರದಲ್ಲಿ ಸಿಎಂ ಸಿದ್ದರಾಮಯ್ಯಗೆ ಎಲ್ಲವನ್ನೂ ನಾನು ತಿಳಿಸಿದ್ದೇನೆ. ಸಮಸ್ಯೆಗಳನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸುವುದಿಲ್ಲ ಎಂದು ಅವರು ಹೇಳಿದರು.

ಬಿಆರ್ ಪಾಟೀಲ್ ದಿಢೀರ್ ರಾಜೀನಾಮೆ ನಿರ್ಧಾರ ಅಚ್ಚರಿಗೆ ಕಾರಣವಾಗಿತ್ತು. ಏಕಾಏಕಿ ಏಕೆ ರಾಜೀನಾಮೆ ನೀಡಿದ್ದಾರೆ ಎಂಬ ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನಲ್ಲೇ ಅವರು ಕಲಬುರಗಿಯಲ್ಲಿ ಅಸಮಾಧಾನದ ಮಾತುಗಳನ್ನಾಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​​ನಲ್ಲಿ ಮಹತ್ವದ ಬೆಳವಣಿಗೆ: ಸಿಎಂ ರಾಜಕೀಯ ಸಲಹೆಗಾರ ಬಿಆರ್ ಪಾಟೀಲ್ ರಾಜೀನಾಮೆ

ಬಿಆರ್ ಪಾಟೀಲ್ ಆಳಂದ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಬಯಸಿದ್ದರು. ಸಚಿವ ಸ್ಥಾನ ಸಿಗದೇ ಇರುವ ಕಾರಣಕ್ಕಾಗಿ ಹೆಚ್ಚಿನ ಅನುದಾನ ಸಿಗಬಹುದು ಎಂದು ನಿರೀಕ್ಷೆಯಲ್ಲಿದ್ದರು. ಆದರೆ, ಕಳೆದ ಬಜೆಟ್‌ನಲ್ಲಿ ಆಳಂದ ಕ್ಷೇತ್ರಕ್ಕೆ ವಿಶೇಷ ಪ್ಯಾಕೇಜ್ ನೀಡದೆ ಇರುವುದಕ್ಕೆ ಬೇಸರಗೊಂಡಿದ್ದರು. ಈ ಬಾರಿ ರಾಜೀನಾಮೆ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ ಎಂದು ಕೆಲವು ಮೂಲಗಳು ವಿಶ್ಲೇಷಿಸಿವೆ. ಇನ್ನು ಕೆಲವು ಮೂಲಗಳು, ಈಗ ರಾಜೀನಾಮೆ ಮೂಲಕ ಒತ್ತಡ ಹಾಕಿ ಮುಂದಿನ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನಿರೀಕ್ಷಿಸುತ್ತಿರುವ ಸಾಧ್ಯತೆ ಇದೆ ಎಂದೂ ಹೇಳಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್