AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ರಸ್ತೆ ಮಧ್ಯೆ ಲಾರಿ ನಿಲ್ಲಿಸಿದ್ದನ್ನು ಪ್ರಶ್ನಿಸಿದಕ್ಕೆ ಯುವಕರ ಮೇಲೆ ಹಲ್ಲೆ

ಕಲಬುರಗಿ ಜಿಲ್ಲೆಯ ಸೇಡಂ‌ ಪಟ್ಟಣದ ಕೋಡ್ಲಾ ಕ್ರಾಸ್ ಬಳಿ ರಸ್ತೆ ಮಧ್ಯೆ ಲಾರಿ ನಿಲ್ಲಿಸಿದ್ದನ್ನು ಯುವಕರು ಪ್ರಶ್ನೆ ಮಾಡಿದ್ದಕ್ಕೆ, ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಲಾಗಿದೆ. ಘಟನೆ ಸಂಬಂಧ ಸೇಡಂ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ನಾಲ್ವರನ್ನು ಬಂಧಿಸಲಾಗಿದೆ.

ದತ್ತಾತ್ರೇಯ ಪಾಟೀಲ್​
| Edited By: ವಿವೇಕ ಬಿರಾದಾರ|

Updated on:Aug 10, 2024 | 12:49 PM

Share

ಕಲಬುರಗಿ, ಆಗಸ್ಟ್​ 10: ರಸ್ತೆ ಮಧ್ಯೆ ಲಾರಿ ನಿಲ್ಲಿಸಿದ್ದನ್ನು ಪ್ರಶ್ನಿಸಿದಕ್ಕೆ ಯುವಕರ ಮೇಲೆ ಹಲ್ಲೆ ಮಾಡಿರುವ ಘಟನೆ ಸೇಡಂ‌ (Sedam) ಪಟ್ಟಣದ ಕೋಡ್ಲಾ ಕ್ರಾಸ್ ಬಳಿ ನಡೆದಿದೆ. ರಘು ರಡ್ಡಿ ಮತ್ತು ರಾಹುಲ್​ ರೆಡ್ಡಿ ಹಲ್ಲೆಗೊಳಗಾದವರು. ಮೆಹಬೂಬ್‌, ಸ್ನೇಹಿತರಾದ ಸೈಯದ್, ಸಲ್ಮಾನ್, ಶೇಖ್‌ ಹಲ್ಲೆ ಮಾಡಿದ ಆರೋಪಿಗಳು. ರಘು ರೆಡ್ಡಿ ಹಾಗೂ ರಾಹುಲ್‌ ರೆಡ್ಡಿ ಗ್ಯಾರೇಜ್ ನಡೆಸುತ್ತಿದ್ದಾರೆ.

ಆರೋಪಿ ಮೆಹಬೂಬ್‌ ಪಟೇಲ್‌ ರಸ್ತೆ ಮಧ್ಯೆ ಲಾರಿ ನಿಲ್ಲಿಸಿದ್ದನು. ರಾಹುಲ್ ರೆಡ್ಡಿ ಬೈಕ್ ಮೇಲೆ ಹೋಗುವಾಗ ಲಾರಿಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದಾನೆ. ಬಳಿಕ ರಾಹುಲ್​ ರೆಡ್ಡಿ ಲಾರಿಯನ್ನು ರಸ್ತೆ ಮಧ್ಯದಲ್ಲಿ ಏಕೆ ನಿಲ್ಲಿಸಿರುವೆ ಎಂದು ಮೇಹಬೂಬ್​ ಪಟೇಲ್​ನನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಮೇಹಬೂಬ್ ಪಟೇಲ್ “ನಾನು ಲಾರಿ ಎಲ್ಲಿ ಬೇಕಾದರೂ ನಿಲ್ಲಿಸುತ್ತೇನೆ ನಿನ್ಯಾವನೋ ಕೇಳವನು” ಅಂತ ಅವಾಜ್ ಹಾಗಿದ್ದಾನೆ. ಬಳಿಕ ರಾಹುಲ್​ ಅವರಿಗೆ ಮೇಹಬೂಬ್ ಪಟೇಲ್ ಅವಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.

ಇದನ್ನೂ ಓದಿ: ಕಲಬುರಗಿಯಲ್ಲಿ ಬಾಲಕನನ್ನ ಕೂಡಿಹಾಕಿ ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ; ಐವರು ವಶಕ್ಕೆ

ಇಬ್ಬರ ಮಧ್ಯೆ ಗಲಾಟೆ ವಿಚಾರ ತಿಳಿದು ರಾಹುಲ್ ಸಹೋದರ ರಘು ಸ್ಥಳಕ್ಕೆ ಬಂದಿದ್ದಾನೆ. ನಂತರ ಮೇಹಬೂಬ್ ಪಟೇಲ್ ಸ್ನೇಹಿತರಾದ ಸೈಯದ್ ಸುಲ್ತಾನ್, ಸಲ್ಮಾನ್ ಪಟೇಲ್, ಮೇಹಬೂಬ್ ಪಟೇಲ್, ಶೇಖ್ ಸಮೀರ್ ಸ್ಥಳಕ್ಕೆ ಬಂದು ಸಾರ್ವಜನಿಕವಾಗಿ ಏಕಾ ಎಕಿ ಸಹೋದರ ಮೇಲೆ ಹಲ್ಲೆ ಮಾಡಿದ್ದಾರೆ. ಯುವಕರ ಮೇಲೆ ಹಲ್ಲೆ ಮಾಡಿದ ವಿಡಿಯೋ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಗಾಯಾಳು ರಘು ರೆಡ್ಡಿಯನ್ನು ಕಲಬುರಗಿಯಲ್ಲಿ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಸೇಡಂ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳಾದ ಸೈಯದ್ ಸುಲ್ತಾನ್, ಸಲ್ಮಾನ್ ಪಟೇಲ್‌, ಲಾರಿ ಚಾಲಕ ಮೇಹಬೂಬ್, ಸಮೀರ್​ನನ್ನು ಬಂಧಿಸಿದ್ದಾರೆ. ಎ1 ಆರೋಪಿ ಸೈಯದ್ ಸಮೀರ್ ಸೇರಿದಂತೆ ಇನ್ನೂ ಹಲವರು ಪರಾರಿಯಾಗಿದ್ದಾರೆ.

ಲಾರಿ ಡಿಕ್ಕಿ ಓರ್ವ ವಿದ್ಯಾರ್ಥಿಗೆ ಗಂಭೀರ ಗಾಯ

ಕುಂದಾಪುರ: ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಸ್​​ನಲ್ಲಿದ್ದ ಓರ್ವ ವಿದ್ಯಾರ್ಥಿ ಗಂಭೀರಯಾವಾಗಿದೆ. ಇನ್ನೂಳಿದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ತಲ್ಲೂರು ಪ್ರವಾಸಿ ಹೋಟೇಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಘಟನೆ ನಡೆದಿದೆ. ಬೈಂದೂರುನಿಂದ ಕುಂದಾಪುರ ದ ಕಡೆಗೆ ಬರುತ್ತಿದ್ದ ಬಸ್​ಗೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕುಂದಾಪುರ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರಸಾದ್​ಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:47 pm, Sat, 10 August 24

Follow Us
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!