AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ನೀಟ್ ಪರೀಕ್ಷೆಯಲ್ಲೂ ಜನಿವಾರ ತೆಗೆಸಿದ ಅಧಿಕಾರಿಗಳು

ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ನಡೆದ ನೀಟ್ ಪರೀಕ್ಷೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿ ಶ್ರೀಪಾದ್ ಪಾಟೀಲ್ ಅವರ ಜನಿವಾರವನ್ನು ಅಧಿಕಾರಿಗಳು ತೆಗೆಸಿದ್ದಾರೆ. ಈ ಘಟನೆಯಿಂದ ಬ್ರಾಹ್ಮಣ ಸಮಾಜ ಆಕ್ರೋಶಗೊಂಡಿದ್ದು, ಪರೀಕ್ಷಾ ಕೇಂದ್ರದ ಮುಂದೆ ಪ್ರತಿಭಟನೆ ನಡೆಸಿದೆ. ಪರೀಕ್ಷಾ ನಿಯಮಾವಳಿಗಳನ್ನು ಪುನರ್ ಪರಿಶೀಲಿಸುವಂತೆ ಒತ್ತಾಯಿಸುತ್ತಿದ್ದಾರೆ.

ಕಲಬುರಗಿ: ನೀಟ್ ಪರೀಕ್ಷೆಯಲ್ಲೂ ಜನಿವಾರ ತೆಗೆಸಿದ ಅಧಿಕಾರಿಗಳು
ಸಾಂದರ್ಭಿಕ ಚಿತ್ರ
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ವಿವೇಕ ಬಿರಾದಾರ

Updated on:May 04, 2025 | 4:24 PM

ಕಲಬುರಗಿ, ಮೇ 04: ಇತ್ತೀಚಿಗೆ ನಡೆದ ಸಿಇಟಿ ಪರೀಕ್ಷೆ (CET Exam) ಬರೆಯಲು ಬಂದಿದ್ದ ಬ್ರಾಹ್ಮಣ ವಿದ್ಯಾರ್ಥಿಗಳ (Brmhan Students) ಜನಿವಾರ (Janivar) ತೆಗೆಸಲಾಗಿತ್ತು. ಈ ಪ್ರಕರಣ ಮಾಸುವ ಮುನ್ನವೇ ನೀಟ್ (NEET) ಪರೀಕ್ಷೆಯಲ್ಲೂ ಅಧಿಕಾರಿಗಳು ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದಾರೆ. ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ನಡೆದ ನೀಟ್​ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿ ಶ್ರೀಪಾದ್ ಪಾಟೀಲ್‌ ಅವರ ಜನಿವಾರವನ್ನು ಅಧಿಕಾರಿಗಳು ತೆಗೆಸಿ, ಪರೀಕ್ಷೆ ಬರೆಯಲು ಅವಕಾಶ ನೀಡಿದ್ದಾರೆ.

ಪರೀಕ್ಷಾ ಕೇಂದ್ರದ ಒಳಗೆ ಹೋಗುವಾಗ ಶ್ರೀಪಾದ್ ಪಾಟೀಲ್​ ಅವರಿಗೆ ಜನಿವಾರ ತೆಗೆಯುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಸೂಚನೆಯಂತೆ ಶ್ರೀಪಾದ್ ಪಾಟೀಲ್‌ ಅವರು ಜನಿವಾರ ತೆಗೆದು ಪರೀಕ್ಷಾ ಕೇಂದ್ರಕ್ಕೆ ತೆರಳಿ, ಪರೀಕ್ಷೆ ಬರೆದಿದ್ದಾರೆ. ಈ ಘಟನೆಯನ್ನು ಖಂಡಿಸಿ ಪರೀಕ್ಷಾ ಕೇಂದ್ರದ ‌ಮುಂದೆ ಬ್ರಾಹ್ಮಣ ಸಮಾಜ ಪ್ರತಿಭಟನೆ ನಡೆಸಿತು. ಜನಿವಾರ ತೆಗೆಸಿದ ಅಧಿಕಾರಿಯನ್ನು ಅಮಾನತು ಮಾಡುವಂತೆ ಬ್ರಾಹ್ಮಣ ಸಮುದಾಯ ಒತ್ತಾಯಿಸಿದೆ.

ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಲಾಗಿತ್ತು

ಇತ್ತೀಚಿಗೆ ನಡೆದ ಸಿಇಟಿ ಪರೀಕ್ಷೆಗೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಶಿವಮೊಗ್ಗ, ಬೀದರ್ ಮತ್ತು ಧಾರವಾಡ ಪರೀಕ್ಷಾ ಕೇಂದ್ರಗಳಲ್ಲಿ ತೆಗೆಸಲಾಗಿತ್ತು. ಈ ಪ್ರಕರಣ ರಾಜ್ಯಾದ್ಯಂತ ಭಾರೀ ಚರ್ಚೆಗೆ ಮತ್ತು ಆಕ್ರೋಶಕ್ಕೆ ಕಾರಣವಾಗಿತ್ತು. ಜನಿವಾರ ಹಾಕಿದ್ದಾರೆಂಬ ಕಾರಣಕ್ಕೆ ಪರೀಕ್ಷೆ ಬರೆಯಲು ಅವಕಾಶ ನೀಡದೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಕಷ್ಟ ತಂದಿದ್ದಕ್ಕೆ ವಿರೋಧ ವ್ಯಕ್ತವಾಗಿತ್ತು.

ಇದನ್ನೂ ಓದಿ
Image
ಬಿಜೆಪಿ ಭದ್ರಕೋಟೆಯೇ ಡಿಕೆ ಶಿವಕುಮಾರ್ ಟಾರ್ಗೆಟ್: ಸಾಫ್ಟ್​ ಹಿಂದುತ್ವ ಮಂತ್ರ
Image
ಕರ್ನಾಟಕ ಸಿಇಟಿ ಪರೀಕ್ಷೆ, ಜನಿವಾರ ವಿವಾದ: ನಿಜಕ್ಕೂ ಈವರೆಗೆ ನಡೆದಿದ್ದೇನು?
Image
ಜನಿವಾರ ತೆಗೆಸಿದ್ದೇ ಆದರೆ ಅತಿರೇಕ, ಕಠಿಣ ಕ್ರಮ ಕೈಗೊಳ್ತೇವೆ: ಸಚಿವ ಸುಧಾಕರ್
Image
CET ಪರೀಕ್ಷೆ ಬರೆಯಲು ಬಂದ ಅಭ್ಯರ್ಥಿಗಳ ಜನಿವಾರ ತೆಗೆಸಿದ ಅಧಿಕಾರಿಗಳು

ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಆಗಮಿಸಿದ್ದ ವಿದ್ಯಾರ್ಥಿಯ ಜನಿವಾರ ಮತ್ತು ಕೈಗೆ ಕಟ್ಟಿದ್ದ ಕಾಶಿ ದಾರವನ್ನು ತೆಗೆಸಿ ಅಧಿಕಾರಿಗಳು ಕಸದ ಬುಟ್ಟಿಗೆ ಎಸೆದಿದ್ದರು. ಬೀದರ್‌ನಲ್ಲಿ ಜನಿವಾರ ಹಾಕಿದ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿರಲಿಲ್ಲ. ಅಧಿಕಾರಿಗಳ ಈ ಕ್ರಮದ ವಿರುದ್ಧ ಬ್ರಾಹ್ಮಣ ಮಹಾಸಭಾ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: ಸಿಇಟಿ ಅಭ್ಯರ್ಥಿಗಳ ಜನಿವಾರ ತೆಗೆಸಿದ ಪ್ರಕರಣ; ಅಧಿಕಾರಿಗಳದ್ದೇ ತಪ್ಪೆಂದು ವರದಿ ಸಲ್ಲಿಸಿದ ಡಿಸಿ

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ದೂರು

ಜನಿವಾರ ತೆಗೆಯದ್ದಕ್ಕೆ ಪರೀಕ್ಷೆಗೆ ಅವಕಾಶ ನೀಡದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ದೂರು ದಾಖಲಿಸಿಕೊಳ್ಳಲಾಗಿದೆ. ಈ ಘಟನೆ ಬಗ್ಗೆ ಸ್ವಯಂಪ್ರೇರಿತ ದೂರು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಬೀದರ್​ನ ಖಾಸಗಿ ಕಾಲೇಜಿನಲ್ಲಿ ನಿನ್ನೆ ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಳ್ಳಲಾಗಿದೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:09 pm, Sun, 4 May 25

ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್