AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಯುವಕ ಆತ್ಮಹತ್ಯೆ: ಪತ್ನಿ ಕಿರುಕುಳ ಆರೋಪ

ಕಳೆದ ಆರು ತಿಂಗಳು ಹಿಂದೆ ಅಷ್ಟೇ ಮದುವೆಯಾಗಿದ್ದ ನವವಿವಾಹಿತ ಯುವಕ ಸಾವನ್ನಪ್ಪಿದ್ದಾನೆ. ಹಲವು ಕನಸುಗಳೊಂದಿಗೆ ಮದುವೆಯಾಗಿದ್ದ ಯುವಕ ಕೇವಲ ಆರೇ ತಿಂಗಳಲ್ಲಿ ದುರಂತ ಅಂತ್ಯಕಂಡಿದ್ದು, ಈ ಸಾವಿನ ಹಿಂದೆ ಪತ್ನಿಯ ಕಿರುಕುಳ ಆರೋಪ ಕೇಳಿಬಂದಿದೆ. ಹಾಗಾದ್ರೆ, ಆತ್ಮಹತ್ಯೆಗೆ ಕಾರಣವೇನು? ಯುವಕನ ಕುಟುಂಬಸ್ಥರು ಮಾಡಿರುವ ಆರೋಪವೇನು ಎನ್ನುವ ವಿವರ ಇಲ್ಲಿದೆ.

6 ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಯುವಕ ಆತ್ಮಹತ್ಯೆ: ಪತ್ನಿ ಕಿರುಕುಳ ಆರೋಪ
Rakesh Kalaburagi
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Mar 03, 2025 | 5:20 PM

Share

ಕಲಬುರಗಿ, (ಮಾರ್ಚ್​ 03): ಪತ್ನಿಯ (Wife) ಕಿರುಕುಳಕ್ಕೆ ಬೇಸತ್ತು ಪತಿ (Husband) ನೇಣಿಗೆ ಶರಣಾದ ಘಟನೆ ಕಲಬುರಗಿಯ (Kalaburagi) ಮಹಾದೇವ ನಗರದಲ್ಲಿ ನಡೆದಿದೆ. ಕಲಬುರಗಿಯ ಮಹದೇವನಗರದಲ್ಲಿ ರಾಕೇಶ್(30) ಆತ್ಮಹತ್ಯೆಗೆ ಶರಣಾದ ಯುವಕ. ಕಳೆದ 6 ತಿಂಗಳ ಹಿಂದೆ ಅಷ್ಟೇ ರಾಕೇಶ್​​ ಮೇಘಾ ಎನ್ನುವಾಕೆಯನ್ನು ಮದುವೆಯಾಗಿದ್ದ. ಬಳಿಕ ರಾಕೇಶ್​ಗೆ ಮನೆಗೆಲಸ ಸೇರಿ ಇತರೆ ವಿಷಯಗಳಿಗೆ ಪತ್ನಿ ಕಿರುಕುಳ ಕೊಡಲಾರಂಭಿಸಿದ್ದಾಳೆ. ಅಲ್ಲದೇ ನನ್ನ ಮಾತು ಕೇಳದಿದ್ರೆ ಪೊಲೀಸರಿಗೆ ದೂರು ನೀಡುವುದಾಗಿ ಬೆದರಿಕೆ ಹಾಕುತ್ತಿದ್ದಳು. ಇದರಿಂದ ಬೇಸತ್ತು ಪತಿ ರಾಕೇಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಕಳೆದ 6 ತಿಂಗಳ ಹಿಂದೆ ಹಿರಿಯರ ಸಮ್ಮುಖದಲ್ಲಿ ರಾಕೇಶ್ ಮದುವೆಯಾಗಿತ್ತು. ಆದರೆ ಮದುವೆ ಬಳಿಕ ಮನೆ ಕೆಲಸ ಸೇರಿ ಇತರೆ ವಿಷಯಗಳಿಗೆ ರಾಕೇಶ್‌ಗೆ ಪತ್ನಿ ನಿತ್ಯ ಕಿರುಕುಳ ಕೊಡುತ್ತಿದ್ದಳು. ಒಂದು ವೇಳೆ ಮಾತು ಕೇಳದೇ ಇದ್ದರೆ ಪೊಲೀಸರಿಗೆ ದೂರು ಕೊಡುವುದಾಗಿ ಪದೇ ಪದೇ ಬೆದರಿಕೆ ಹಾಕುತ್ತಿದ್ದಳು. ಇದೇ ಕಾರಣಕ್ಕೆ ಕಿರುಕುಳ ತಾಳಲಾರದೇ ನೇಣು ಬಿಗಿದುಕೊಂಡ ರಾಕೇಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಸಂಬಂಧ ಪತ್ನಿ ಮೇಘಾ ಸೇರಿ ಹಲವರ ವಿರುದ್ಧ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ:  ಲೈಂಗಿಕವಾಗಿ ಬಳಸಿಕೊಂಡು ಮಹಿಳಾ ಅಧಿಕಾರಿ ಮೋಸ: ಮಂಗಳೂರಿನಲ್ಲಿ ಯುವಕ ಆತ್ಮಹತ್ಯೆ

ರಾಕೇಶ್​ನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ರಾಕೇಶ್ ಆತ್ಮಹತ್ಯೆಗೆ ನಿಖರ ಕಾರಣವೇನು ಎನ್ನುವುದನ್ನು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಬೇಕಿದೆ.  ಏನೇ ಹೇಳಿ ಮದುವೆಯಾದ ಆರೇ ತಿಂಗಳಿಗೆ ಯುವಕ ಸಾವಿನ ಹಾದಿ ತುಳಿದಿರುವುದು ದುರಂತ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:27 pm, Mon, 3 March 25

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ