AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಂ ಕಿಸಾನ್ ಯೋಜನೆ ಆರ್ಥಿಕ ಸೌಲಭ್ಯಕ್ಕಾಗಿ ಬಯೋಮೆಟ್ರಿಕ್ E KYC ಮಾಡಿಸುವುದು ಕಡ್ಡಾಯ -ಆಗಸ್ಟ್ 31 ಅಂತಿಮ ಗಡುವು

ರೈತರು ನಿಗಧಿತ ಅವಧಿಯಲ್ಲಿ “ಗ್ರಾಮ ಒನ್ ” ಅಥವಾ “ನಾಗರಿಕ ಸೇವಾ ಕೇಂದ್ರಗಳ ಮೂಲಕ ಕೆ.ವೈ.ಸಿ ಮಾಡಿಕೊಳ್ಳದಿದ್ದಲ್ಲಿ ಅಂತಹ ರೈತರಿಗೆ ಆರ್ಥಿಕ ಸೌಲಭ್ಯ ದೊರೆಯುವುದಿಲ್ಲ ಎಂದು ಕಲಬುರಗಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ರೈತರನ್ನು ಎಚ್ಚರಿಸಿದ್ದಾರೆ.

ಪಿಎಂ ಕಿಸಾನ್ ಯೋಜನೆ ಆರ್ಥಿಕ ಸೌಲಭ್ಯಕ್ಕಾಗಿ ಬಯೋಮೆಟ್ರಿಕ್ E KYC ಮಾಡಿಸುವುದು ಕಡ್ಡಾಯ -ಆಗಸ್ಟ್ 31 ಅಂತಿಮ ಗಡುವು
ಪಿಎಂ ಕಿಸಾನ್ ಯೋಜನೆ ಆರ್ಥಿಕ ಸೌಲಭ್ಯಕ್ಕಾಗಿ ಬಯೋಮೆಟ್ರಿಕ್ E KYC ಮಾಡಿಸುವುದು ಕಡ್ಡಾಯ -ಆಗಸ್ಟ್ 31 ಅಂತಿಮ ಗಡುವು
TV9 Web
| Updated By: ಸಾಧು ಶ್ರೀನಾಥ್​|

Updated on: Aug 24, 2022 | 10:01 PM

Share

ಕಲಬುರಗಿ: ಪಿ.ಎಂ.-ಕಿಸಾನ್ ಯೋಜನೆಯಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಆರ್ಥಿಕ ಸೌಲಭ್ಯ (PM Kisan Samman Yojana installment) ಪಡೆಯಲು ಬಯೋಮೆಟ್ರಿಕ್ ಆಧಾರಿತ ಇ-ಕೆ.ವೈ.ಸಿ (E KYC) ಮಾಡುವುದು ಕಡ್ಡಾಯವಾಗಿದೆ. ಆಗಸ್ಟ್ 31ರೊಳಗೆ ಕೆ.ವೈ.ಸಿ. ಮಾಡಿಸುವಂತೆ ಜಿಲ್ಲೆಯ ರೈತ ಬಾಂಧವರಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಮನವಿ ಮಾಡಿದ್ದಾರೆ (Narendra Modi).

ಪಿ.ಎಂ. ಕಿಸಾನ್ ಯೋಜನೆಯಡಿ ಜಿಲ್ಲೆಯಲ್ಲಿ ನೋಂದಣಿಯಾದ 2,68,015 ರೈತರ ಪೈಕಿ 99,545 ರೈತರು ಮಾತ್ರ ನೋಂದಣಿ ಮಾಡಿಕೊಂಡಿದ್ದಾರೆ. ಉಳಿದ ರೈತರು ನಿಗಧಿತ ಅವಧಿಯಲ್ಲಿ “ಗ್ರಾಮ ಒನ್ ” ಅಥವಾ “ನಾಗರಿಕ ಸೇವಾ ಕೇಂದ್ರಗಳ ಮೂಲಕ ಕೆ.ವೈ.ಸಿ ಮಾಡಿಕೊಳ್ಳದಿದ್ದಲ್ಲಿ ಅಂತಹ ರೈತರಿಗೆ ಆರ್ಥಿಕ ಸೌಲಭ್ಯ ದೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು ಕಳೆದ ವರ್ಷ ಈ ಯೋಜನೆಯಡಿ ರೈತರಿಗೆ 772 ಕೋಟಿ ರೂ. ಆರ್ಥಿಕ ನೆರವು ನೀಡಲಾಗಿದೆ ಎಂದರು.

ಪ್ರಸಕ್ತ 2022-23ನೇ ಸಾಲಿಗೆ ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ 2,14,749 ಜನ ರೈತರು ದಾಖಲೆ ಪ್ರಮಾಣದಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಸ್ಥಳೀಯ ನಿರ್ದಿಷ್ಟ ವಿಕೋಪದಡಿ 40,527 ರೈತರು ದೂರು ನೀಡಿರುವ ಹಿನ್ನೆಲೆಯಲ್ಲಿ 24,551 ರೈತರ ಹೊಲದಲ್ಲಿ ಜಂಟಿ ಸಮೀಕ್ಷೆ ನಡೆಸಿದ್ದು, 16,476 ರೈತರ ಬೆಳೆಗಳು ಸಮೀಕ್ಷೆಗೆ ಬಾಕಿ ಇವೆ.

ಮಳೆ ಬಿದ್ದ ನಂತರ 72 ಗಂಟೆ ಒಳಗಾಗಿ ರೈತರು ಟೋಲ್ ಫ್ರೀ ಸಂಖ್ಯೆ 100-200-5142ಗೆ ಕರೆ ಮಾಡಿ ದೂರು ನೀಡಿದಲ್ಲಿ ವಿಮಾ ಕಂಪನಿಯವರು ಸಮೀಕ್ಷೆಗೆ ಬರುತ್ತಾರೆ. ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಜಿಲ್ಲಾ ಕೇಂದ್ರದಲ್ಲಿ ಕಾಲ್ ಸೆಂಟರ್ ತೆರೆಯಲಾಗುವುದು, ಕಳೆದ ವರ್ಷ ಈ ವಿಮೆ ಯೋಜನೆಯಡಿ ಜಿಲ್ಲೆಯ 9 ಸಾವಿರ ಜನರಿಗೆ ಪರಿಹಾರ ಕಲ್ಪಿಸಿದ ಎಂದು ಡಿ.ಸಿ. ಯಶವಂತ ಎ. ಗುರುಕರ್ ತಿಳಿಸಿದರು.

ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು