AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ಹೆಚ್ಚಾದ ಪೋಕ್ಸೊ ಪ್ರಕರಣಗಳು; ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚು

ಕಲಬುರಗಿಯಲ್ಲಿ ಪೋಕ್ಸೊ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಕಳೆದ ವರ್ಷ 81 ಪ್ರಕರಣಗಳು ದಾಖಲಾಗಿದ್ದವು. ಈ ವರ್ಷ ಕೇವಲ ಆಗಸ್ಟ್​ ತಿಂಗಳಲ್ಲೇ 90 ಪ್ರಕರಣಗಳು ದಾಖಲಾಗಿವೆ. ಇದು ಆತಂಕ ಹೆಚ್ಚು ಮಾಡಿದೆ. ಅಧಿಕಾರಿಗಳು ಈ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಕಲಬುರಗಿಯಲ್ಲಿ ಹೆಚ್ಚಾದ ಪೋಕ್ಸೊ ಪ್ರಕರಣಗಳು; ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚು
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: Oct 02, 2024 | 1:13 PM

Share

ಕಲಬುರಗಿ, ಅ.02: ಕಳೆದ ಕೆಲ ವರ್ಷಗಳಿಂದ ಕಲಬುರಗಿ ಜಿಲ್ಲೆಯಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ(Pocso). ಅಧಿಕೃತ ದಾಖಲೆಗಳ ಪ್ರಕಾರ, 2022-23ರ ಅವಧಿಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ 81 ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣಗಳು ಪ್ರಸಕ್ತ ವರ್ಷದಲ್ಲಿ ಹೆಚ್ಚಾಗಿವೆ. 2023-2024ರಲ್ಲಿ 90 ಪ್ರಕರಣಗಳು ಬೆಳಕಿಗೆ ಬಂದಿವೆ. ಆಗಸ್ಟ್ 2024ರ ಅಂತ್ಯದ ವೇಳೆಗೆ, 60 ಪ್ರಕರಣಗಳು ಈಗಾಗಲೇ ದಾಖಲಾಗಿವೆ. ಇದು ಆತಂಕ ಹೆಚ್ಚು ಮಾಡಿದೆ.

ಇನ್ನು, ಅಧಿಕಾರಿಗಳು ಈ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇಂತಹ ಘಟನೆಗಳನ್ನು ತಡೆಯಲು ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವನ್ನು ನಿಯಂತ್ರಿಸಲು ಪೋಕ್ಸೋ ಕಾಯ್ದೆಯನ್ನು ತರಲಾಗಿದ್ದು, ಈ ಕಾಯ್ದೆಯಡಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದಲ್ಲಿ ಭಾಗಿಯಾಗಿರುವವರಿಗೆ ಶಿಕ್ಷೆಯಾಗಲಿದೆ.

ಹಲವು ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಿದ್ದರೂ ಜಿಲ್ಲೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಅನೇಕ ಸಂದರ್ಭಗಳಲ್ಲಿ, ಕುಟುಂಬ ಸದಸ್ಯರು ಮತ್ತು ನೆರೆಹೊರೆಯವರಿಂದಲೇ ಮಕ್ಕಳು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ವರದಿಗಳೇ ಹೆಚ್ಚು.

ಇದನ್ನೂ ಓದಿ: ಬೆಂಗಳೂರು ಹನುಮಂತನಗರದಲ್ಲಿ ಲಾಂಗ್, ಬ್ಯಾಟ್ ಹಿಡಿದು ಪುಡಿ ರೌಡಿಗಳ ಅಟ್ಟಹಾಸ

ಘಟನೆ ಸಂಬಂಧ ಕಲಬುರಗಿ ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್‌ಡಿ ಮಾತನಾಡಿ, ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಪೊಲೀಸರು, ಎನ್‌ಜಿಒಗಳೊಂದಿಗೆ ಸೇರಿ ಶಾಲಾ-ಕಾಲೇಜುಗಳಲ್ಲಿ ಮಕ್ಕಳಿಗೆ ಜಾಗೃತಿ ಮೂಡಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಅಂಗನವಾಡಿ ಕಾರ್ಯಕರ್ತೆಯರು ಸಹ ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಕುಮಾರ ರಾಥೋಡ್ ಮಾತನಾಡಿ, ಶಾಲಾ-ಕಾಲೇಜುಗಳಲ್ಲಿ ಮಕ್ಕಳಲ್ಲಿ ಜಾಗೃತಿ ಮೂಡಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅಧಿಕಾರಿಗಳ ಜೊತೆ ಪಾಲಕರು ಕೈಜೋಡಿಸಬೇಕಾದ ಅಗತ್ಯ ಇದೆ ಎಂದು ತಿಳಿಸಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?