AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ದನದ ಚರ್ಮ ಸಾಗಾಟ ಮಾಡುತ್ತಿದ್ದ ಲಾರಿ ಜಪ್ತಿ; 9 ಟನ್ ಗೋವು, ಎಮ್ಮೆ, ಕುರಿಗಳ ಚರ್ಮ ವಶ

ನಂದಿ ಎನಿಮಲ್ ವೆಲ್‌ಫೆರ್ ಸೊಸೈಟಿ ಅಧ್ಯಕ್ಷ ಕೇಶವ್‌ ಮೋಟಗಿ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು, ಅಕ್ರಮವಾಗಿ ಸಾಗಿಸುತ್ತಿದ್ದ ದನದ ಚರ್ಮವನ್ನು ವಶಪಡಿಸಿಕೊಂಡಿದ್ದಾರೆ. ಸದ್ಯ ಲಾರಿ ಹಾಗೂ ಚಾಲಕ, ನಿರ್ವಾಹಕನನ್ನು‌ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಲಬುರಗಿ: ದನದ ಚರ್ಮ ಸಾಗಾಟ ಮಾಡುತ್ತಿದ್ದ ಲಾರಿ ಜಪ್ತಿ; 9 ಟನ್ ಗೋವು, ಎಮ್ಮೆ, ಕುರಿಗಳ ಚರ್ಮ ವಶ
ಅಕ್ರಮವಾಗಿ ಸಾಗಿಸುತ್ತಿದ್ದ ದನದ ಚರ್ಮ
TV9 Web
| Updated By: preethi shettigar|

Updated on:Oct 19, 2021 | 9:04 AM

Share

ಕಲಬುರಗಿ: ದನದ ಚರ್ಮ ಸಾಗಾಟ ಮಾಡುತ್ತಿದ್ದ ಲಾರಿ ಜಪ್ತಿ ಮಾಡಿದ ಪೊಲೀಸರು 9 ಟನ್ ಗೋವು, ಎಮ್ಮೆ, ಕುರಿಗಳ ಚರ್ಮ ವಶಕ್ಕೆ ಪಡೆದಿದ್ದಾರೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಗ್ರಾಮದ ಬಳಿ ಪೊಲೀಸರು ಲಾರಿ ಜಪ್ತಿ ಮಾಡಿದ್ದಾರೆ. ನರೋಣಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ನಂದಿ ಎನಿಮಲ್ ವೆಲ್‌ಫೆರ್ ಸೊಸೈಟಿ ಅಧ್ಯಕ್ಷ ಕೇಶವ್‌ ಮೋಟಗಿ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು, ಅಕ್ರಮವಾಗಿ ಸಾಗಿಸುತ್ತಿದ್ದ ದನದ ಚರ್ಮವನ್ನು ವಶಪಡಿಸಿಕೊಂಡಿದ್ದಾರೆ. ಸದ್ಯ ಲಾರಿ ಹಾಗೂ ಚಾಲಕ, ನಿರ್ವಾಹಕನನ್ನು‌ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಲಬುರಗಿ ಜಿಲ್ಲೆಯಿಂದ ಮಹಾರಾಷ್ಟ್ರಕ್ಕೆ ಹೊರಟಿದ್ದ ಲಾರಿಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಮಂಡ್ಯ: ಹಸು ಕಳ್ಳತನ ಆರೋಪ; ವ್ಯಕ್ತಿಯನ್ನು ಕಟ್ಟಿಹಾಕಿ ಮೆರವಣಿಗೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದುಗ್ಗನಹಳ್ಳಿಯಲ್ಲಿ ಹಸು ಕಳ್ಳತನ ಮಾಡುತ್ತಾರೆ ಎಂದು ಹಸು ಜತೆ ಸುರೇಶ್ ಎಂಬ ವ್ಯಕ್ತಿಯನ್ನು ಹಗ್ಗದಿಂದ ಕಟ್ಟಿಹಾಕಿ ಮೆರವಣಿಗೆ ಮಾಡಿದ್ದಾರೆ. ದುಗ್ಗನಹಳ್ಳಿಯ ರಾಜು, ಆತನ ಸಹಚರರು ಸೇರಿ ಮೆರವಣಿಗೆ ಮಾಡಿಸಿದ್ದಾರೆ. ಹಸುವಿನ ಜೊತೆಯಲ್ಲಿ ಒಂದೂವರೆ ಕಿ.ಮೀ ದೂರ ಮೆರವಣಿಗೆ ನಡೆಸಿದ್ದು, ಅಮಾನವೀಯವಾಗಿ ನಡೆದುಕೊಂಡಿದ್ದಾರೆ.

ರಾಜುವಿನ ಬಳಿ ಕಳೆದ ಎರಡುವರೆ ತಿಂಗಳ ಹಿಂದೆ 44 ಸಾವಿರ ರೂ. ನೀಡಿ ಹಸು ಖರೀದಿಸಿದ್ದ ಸುರೇಶ್. ಈ ವೇಳೆ ರಾಜು ಈ ಹಸು 15 ರಿಂದ 20 ಲೀಟರ್ ಹಾಲು ನೀಡುತ್ತದೆ ಎಂದು ಹೇಳಿ ಸುರೇಶ್ ನನ್ನ ನಂಬಿಸಿದ್ದರು. ಆದರೆ ಆ ಹಸು 2 ರಿಂದ 3 ಲೀಟರ್​ ಅಷ್ಟೇ ಹಾಲು ನೀಡುತ್ತಿತ್ತು. ಈ ಬಗ್ಗೆ ರಾಜುವನ್ನು ಸುರೇಶ್ ಪ್ರಶ್ನಿಸಿದ್ದಾರೆ. ಆಗ ಮತ್ತೊಂದು ಬೇರೆ ಗರ್ಭಿಣಿ ಹಸು ನೀಡುವುದಾಗಿ ಹೇಳಿ ನಂಬಿಸಿ 14 ಸಾವಿರ ಹಣ ಪಡೆದು ಗರ್ಭಿಣಿ ಅಲ್ಲದ ಹಸು ಕೊಡಿಸಿದ್ದಾರೆ. ಇದರಿಂದ ಕಂಗಾಲಾದ ಸುರೇಶ್ ಮತ್ತೆ ರಾಜುವನ್ನು ಪ್ರಶ್ನಿಸಿದ್ದಾರೆ. ಆ ವೇಳೆ ಊರಿಗೆ ಮತ್ತೊಂದು ಹಸು ಕೊಡುವುದಾಗಿ ಕರೆಸಿದ್ದ ರಾಜು. ಅದರಂತೆ ಇದೇ ತಿಂಗಳ 12 ರಂದು ಊರಿಗೆ ಬಂದ ಸುರೇಶ್​ಗೆ ಮನೆ ಮುಂದೆ ಕಟ್ಟಿಹಾಕಿದ್ದ ಹಸುವನ್ನು ಹಿಡಿದುಕೊಂಡು ಬರುವಂತೆ ಹೇಳಲಾಗಿತ್ತು.

ರಾಜುವಿನ‌ ಸೂಚನೆಯಂತೆ ಆತನ ಮನೆ ಮುಂದೆ ಕಟ್ಟಿಹಾಕಿದ್ದ ಹಸುವನ್ನು ಹಿಡಿದುಕೊಂಡು ನಾಲೆ ಏರಿಯ ಮೇಲೆ ಸುರೇಶ್ ಹೊರಟಿದ್ದಾರೆ. ಈ ವೇಳೆ ಹಸು ಕಳ್ಳತನ‌ ಮಾಡ್ಕೊಂಡು ಹೋಗ್ತಿದ್ದಾನೆ ಎಂದು ಕತೆ ಕಟ್ಟಿದ್ದ ರಾಜು. ಜನರನ್ನು ನಂಬಿಸಿ ಸುರೇಶ್ ಕೈ- ಕಾಲು ಕಟ್ಟಿಹಾಕಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಮಳವಳ್ಳಿ ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Duplicate Fertilizer: ಮಣ್ಣಿಗೆ ರೆಡ್ ಆಕ್ಸೈಡ್​ ಬಣ್ಣ ಬೆರೆಸಿ ನಕಲಿ ಗೊಬ್ಬರ ತಯಾರಿ – 85 ಮೂಟೆ ಜಪ್ತಿ

ಕೊಡಗು: ಮತಾಂತರಕ್ಕೆ ಯತ್ನಿಸಿದ್ದ ಆರೋಪದಲ್ಲಿ ದಿಡ್ಡಳ್ಳಿ ಹೋರಾಟಗಾರ್ತಿ ಮುತ್ತಮ್ಮ ಪೊಲೀಸರ ವಶಕ್ಕೆ

Published On - 8:39 am, Tue, 19 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ