AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಕಾನ್ಸ್​​ಟೇಬಲ್ ಪರೀಕ್ಷೆಯಲ್ಲಿ ಅಕ್ರಮಕ್ಕೆ ಯತ್ನ; 3 ಅಭ್ಯರ್ಥಿಗಳು ಸೇರಿ 11 ಜನರ ಬಂಧನ

ಅಭ್ಯರ್ಥಿಗಳು ಬ್ಲೂಟೂತ್ ಮೂಲಕ ಉತ್ತರ ಬರೆಯಲು ಪ್ಲ್ಯಾನ್​ ಮಾಡಿದ್ದರು. ಈ ಸಂಬಂಧ ಅಭ್ಯರ್ಥಿಗಳಾದ ರಾಜಕುಮಾರ್, ಪೀರಪ್ಪ, ಮಾಳಪ್ಪ ಬಂಧಿತರಾಗಿದ್ದಾರೆ. ಬಂಧಿತರು ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನಿವಾಸಿಗಳು ಎಂದು ತಿಳಿದುಬಂದಿದೆ.

ಕಲಬುರಗಿ: ಕಾನ್ಸ್​​ಟೇಬಲ್ ಪರೀಕ್ಷೆಯಲ್ಲಿ ಅಕ್ರಮಕ್ಕೆ ಯತ್ನ; 3 ಅಭ್ಯರ್ಥಿಗಳು ಸೇರಿ 11 ಜನರ ಬಂಧನ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Oct 25, 2021 | 2:42 PM

Share

ಕಲಬುರಗಿ: ಕಾನ್ಸ್​ಟೇಬಲ್ ಪರೀಕ್ಷೆಯಲ್ಲಿ ಅಕ್ರಮಕ್ಕೆ ಮುಂದಾಗಿದ್ದ ಮೂವರು ಅಭ್ಯರ್ಥಿಗಳು ಸೇರಿ ಒಟ್ಟು 11 ಜನರನ್ನು ಬಂಧಿಸಲಾಗಿದೆ. ಕಲಬುರಗಿಯಲ್ಲಿ ಮೂವರು ಅಭ್ಯರ್ಥಿಗಳು ಸೇರಿ 11 ಜನರು ಸೆರೆಯಾಗಿದ್ದಾರೆ. ಅಭ್ಯರ್ಥಿಗಳು ಬ್ಲೂಟೂತ್ ಮೂಲಕ ಉತ್ತರ ಬರೆಯಲು ಪ್ಲ್ಯಾನ್​ ಮಾಡಿದ್ದರು. ಈ ಸಂಬಂಧ ಅಭ್ಯರ್ಥಿಗಳಾದ ರಾಜಕುಮಾರ್, ಪೀರಪ್ಪ, ಮಾಳಪ್ಪ ಬಂಧಿತರಾಗಿದ್ದಾರೆ. ಬಂಧಿತರು ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನಿವಾಸಿಗಳು ಎಂದು ತಿಳಿದುಬಂದಿದೆ.

ಅಭ್ಯರ್ಥಿಗಳು ಬನಿಯನ್​ನಲ್ಲಿ ಡಿವೈಸ್ ಇಟ್ಕೊಂಡು ಪರೀಕ್ಷೆಗೆ ತೆರಳಲು ಸಿದ್ಧತೆ ಮಾಡಿಕೊಂಡಿದ್ದರು. ನಗರದ ಲಾಡ್ಜ್​​ನಲ್ಲಿ ಕುಳಿತು ಸ್ಕೆಚ್ ಹಾಕುತ್ತಿದ್ದ ಗ್ಯಾಂಗ್ ಇದೀಗ ಸೆರೆ ಸಿಕ್ಕಿದೆ. ಒಂದು ಅಭ್ಯರ್ಥಿಯ ಡಿವೈಸ್‌ ಬನಿಯನ್‌ಗೆ 5 ಲಕ್ಷ ರೂಪಾಯಿ ನಿಗದಿಪಡಿಸಲಾಗಿತ್ತು. ಕಲಬುರಗಿ ಅಪರಾಧ ಪತ್ತೆ ವಿಭಾಗದ ಪೊಲೀಸರಿಂದ ಬಂಧನವಾಗಿದೆ. ದಂಧೆಯ ಕಿಂಗ್‌ಪಿನ್‌ಗಾಗಿ ಪೊಲೀಸರಿಂದ ಶೋಧ ಕಾರ್ಯ ಮುಂದುವರಿದಿದೆ. ಅಕ್ಟೋಬರ್ 24 ರಂದು ಸಿವಿಲ್ ಪೊಲೀಸ್ ಕಾನ್ಸ್​ಟೇಬಲ್ ಪರೀಕ್ಷೆ ನಡೆದಿತ್ತು. ಖಚಿತ ಮಾಹಿತಿ ಮೇರೆಗೆ ಪರೀಕ್ಷೆಗೂ ಮುನ್ನ, ಅಂದರೆ ಅಕ್ಟೋಬರ್ 23 ರಂದು ಪೊಲೀಸರು ದಾಳಿ ನಡೆಸಿ ದಂಧೆ ಬಯಲು ಮಾಡಿದ್ದಾರೆ.

ಬೆಳಗಾವಿ: ಕಾನ್ಸ್​ಟೇಬಲ್ ಪರೀಕ್ಷೆಯಲ್ಲಿ ನಕಲು ಮಾಡಲು ಯತ್ನ; ಅಭ್ಯರ್ಥಿಗಳು ಇಬ್ಬರು ಸೇರಿ 14 ಜನ ಸೆರೆ ಕಾನ್ಸ್‌ಟೇಬಲ್ ಪರೀಕ್ಷೆಯಲ್ಲಿ ನಕಲು ಮಾಡಲು ಯತ್ನಿಸಿದ ಘಟನೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಅಭ್ಯರ್ಥಿಗಳಿಬ್ಬರು ಸೇರಿ 14 ಜನ ಸೆರೆಯಾಗಿದ್ದರು. ರಾಮತೀರ್ಥ ನಗರದ ಎಸ್‌.ಎಸ್. ಡೆಕೋರೆಟರ್ ಹಾಗೂ ಇವೆಂಟ್ ಪ್ಲ್ಯಾನರ್ ಕಚೇರಿ ಮೇಲೆ ದಾಳಿ ನಡೆಸಿ ಬಂಧಿಸಲಾಗಿತ್ತು. ಬ್ಲ್ಯೂಟೂತ್‌ ಮೂಲಕ ಪರೀಕ್ಷೆಯಲ್ಲಿ ನಕಲು ಮಾಡಲು ಯತ್ನಿಸಿದ್ದರು ಎಂದು ತಿಳಿದುಬಂದಿತ್ತು.

ಈ ಸಂಬಂಧ 33 ಮೊಬೈಲ್, 9 ಮಾಸ್ಟರ್ ಕಾರ್ಡ್, 19 ಬ್ಲ್ಯೂಟೂತ್‌, 1 ಟ್ಯಾಬ್, ಲ್ಯಾಪ್ ಟಾಪ್, ಪ್ರಿಂಟರ್, ಕಾರು ಹಾಗೂ 3 ಬೈಕ್ ಜಪ್ತಿ ಮಾಡಲಾಗಿತ್ತು. ವನಿತಾ ವಿದ್ಯಾಲಯದಲ್ಲಿ ಓರ್ವ ಮಹಿಳಾ ಅಭ್ಯರ್ಥಿ ಬಂಧನವಾಗಿತ್ತು. ಸರ್ದಾರ್ ಪಿಯು ಕಾಲೇಜಿನಲ್ಲಿ ಓರ್ವ ಅಭ್ಯರ್ಥಿ ಬಂಧನವಾಗಿತ್ತು. ಖಚಿತ ಮಾಹಿತಿ ಮೇರೆಗೆ ಸಿಇಎನ್ ಪೊಲೀಸರು ಅಭ್ಯರ್ಥಿಗಳನ್ನು ಬಂಧಿಸಿದ್ದರು. ಬೆಳಗಾವಿ ನಗರದ ಮಾಳಮಾರುತಿ, ಖಡೇಬಜಾರ್ ಠಾಣೆ ಕ್ಯಾಂಪ್ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣ ದಾಖಲು ಮಾಡಲಾಗಿತ್ತು.

ಇದನ್ನೂ ಓದಿ: ಕಾನ್ಸ್​ಟೇಬಲ್ ಪರೀಕ್ಷೆಯಲ್ಲಿ ನಕಲು ಮಾಡಲು ಯತ್ನ; ಅಭ್ಯರ್ಥಿಗಳು ಇಬ್ಬರು ಸೇರಿ 14 ಜನ ಸೆರೆ

ಇದನ್ನೂ ಓದಿ: ಇಂದು ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ; ಪೊಲೀಸ್ ಇಲಾಖೆಯಿಂದ ಬಯೋಮೆಟ್ರಿಕ್ ಬಳಕೆ

Follow Us
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು