AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಲಾಡ್ಲೆ ಮಶಾಕ್ ದರ್ಗಾ ರಾಘವ ಚೈತನ್ಯ ಶಿವಲಿಂಗ ದೇವಸ್ಥಾನಕ್ಕೆ ಶಿವರಾತ್ರಿಯಂದು ಅಡಿಗಲ್ಲು: ಪ್ರಮೋದ್ ಮುತಾಲಿಕ್

Ladle Mashak Aland: ಕಲಬುರಗಿಯ ಆಳಂದ ಪಟ್ಟಣದಲ್ಲಿರುವ ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ರಾಘವ ಚೈತನ್ಯ ಶಿವಲಿಂಗದ ದೇವಸ್ಥಾನಕ್ಕೆ ಶಿವರಾತ್ರಿಯ ದಿನ ಅಡಿಗಲ್ಲು ಹಾಕುವುದಾಗಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಇದಕ್ಕೆ ಸರ್ಕಾರವೇ ರಕ್ಷಣೆ ಕೊಡಬೇಕು, ಪರಿಸ್ಥಿತಿ ನಿಯಂತ್ರಣದಲ್ಲಿಡುವ ಹೊಣೆ ಸರ್ಕಾರದ್ದೇ ಎಂದು ಅವರು ಹೇಳಿದ್ದಾರೆ.

ಕಲಬುರಗಿ ಲಾಡ್ಲೆ ಮಶಾಕ್ ದರ್ಗಾ ರಾಘವ ಚೈತನ್ಯ ಶಿವಲಿಂಗ ದೇವಸ್ಥಾನಕ್ಕೆ ಶಿವರಾತ್ರಿಯಂದು ಅಡಿಗಲ್ಲು: ಪ್ರಮೋದ್ ಮುತಾಲಿಕ್
ಪ್ರಮೋದ್ ಮುತಾಲಿಕ್
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Feb 11, 2024 | 12:10 PM

Share

ಕಲಬುರಗಿ, ಫೆಬ್ರವರಿ 11: ಆಳಂದ ಪಟ್ಟಣದಲ್ಲಿ ಇರುವ ಲಾಡ್ಲೆ ಮಶಾಕ್ ದರ್ಗಾದಲ್ಲಿರುವ (Ladle Mashak Aland) ರಾಘವ ಚೈತನ್ಯ ಶಿವಲಿಂಗದ ದೇವಸ್ಥಾನಕ್ಕೆ ಶಿವರಾತ್ರಿಯಂದು (Maha Shivratri) ಅಡಿಗಲ್ಲು ಹಾಕುತ್ತೇವೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ (Pramod Muthalik) ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ರಾಘವ ಚೈತನ್ಯ ಅವರು ಈಶ್ವರಲಿಂಗ ಪ್ರತಿಷ್ಠಾಪನೆ ಮಾಡಿದ ಆ ಸ್ಥಳ ಅದು. ಅದನ್ನು ಅತಿಕ್ರಮಣ ಮಾಡಿಕೊಂಡಿದ್ದು ಮುಸ್ಲಿಮರು. ಈಗ ದರ್ಗಾ ಮಾಡಿ ಉರುಸ್ ಮಾಡುತ್ತಿದ್ದಾರೆ. ನೂರಾರು ವರ್ಷದ ಹಿಂದಿನ ಪವಿತ್ರ ಕ್ಷೇತ್ರವಿದು. ಪೂಜೆ ಸಲ್ಲಿಸಲು ಕಳೆದ ವರ್ಷವೇ ಕೋರ್ಟ್ ಅನುಮತಿ ಕೊಟ್ಟಿದೆ ಎಂದರು.

ಅಲ್ಲಿ ಪೂಜೆ ಮಾಡುವುದು ನಮ್ಮ ಹಕ್ಕು. ಶಿವರಾತ್ರಿ ದಿನ ಆ ಸ್ಥಳದಲ್ಲಿ ಸಾವಿರಾರು ಜನ ಅಲ್ಲ, ಲಕ್ಷಾಂತರ ಜನ ಬಂದು ಪೂಜೆ ಮಾಡುತ್ತೇವೆ. ರಕ್ಷಣೆ ನೀಡುವುದು ಸರ್ಕಾರದ ಕೆಲಸ. ಸರ್ಕಾರ ಅದರ ಕರ್ತವ್ಯ ನಿರ್ವಹಿಸಲಿ, ನಾವು ನಮ್ಮ ಕರ್ತವ್ಯ ನಿರ್ವಹಿಸುತ್ತೇವೆ ಎಂದು ಅವರು ಹೇಳಿದರು.

ಆ ಸ್ಥಳದಲ್ಲಿ ಈಶ್ವರ ಲಿಂಗ ಇದ್ದ ಮೇಲೆ ಜೀರ್ಣೋದ್ಧಾರ, ದೇವಸ್ಥಾನ ನಿರ್ಮಾಣ ಮಾಡುವುದು ನಮ್ಮ ಕರ್ತವ್ಯ. ಶಿವರಾತ್ರಿ ದಿನ ಗುದ್ದಲಿ ಪೂಜೆಯಿಂದ ಪ್ರಾರಂಭ ಮಾಡುತ್ತೇವೆ. ಯಾವುದೇ ರೀತಿಯ ಕಾನೂನು ಬಾಹಿರವಾಗಿ ಮಾಡುವುದಿಲ್ಲ. ದೇವಸ್ಥಾನ ಅಲ್ಲಿ ಕಟ್ಟುವುದು ನಿಶ್ಚಿತ ಎಂದು ಮುತಾಲಿಕ್ ಹೇಳಿದ್ದಾರೆ.

ಸಂಸದ ಡಿಕೆ ಸುರೇಶ್​​ಗೆ ಗುಂಡಿಟ್ಟು ಕೊಲ್ಲಬೇಕು ಎಂಬ ಮಾಜಿ ಸಚಿವ ಈಶ್ವರಪ್ಪ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸುರೇಶ್​ ನೀಡಿರುವ ಹೇಳಿಕೆ ಕೂಡ ಖಂಡನೀಯ. ದೇಶಕ್ಕೆ ಸ್ವಾತಂತ್ರ್ಯ ಸಿಗಲು ಎರಡು ನೂರು ವರ್ಷಗಳ ಪರಿಶ್ರಮ ಇದೆ. ಅದಕ್ಕಾಗಿ ರಕ್ತ ಸುರಿದಿದ್ದೇವೆ. ತ್ಯಾಗ, ಬಲಿದಾನದಿಂದ ಕಟ್ಟಿದ ಅಖಂಡ ಭಾರತವನ್ನು ನಾವು ದಕ್ಷಿಣ ಭಾರತ ಮಾಡುತ್ತೇವೆ ಎನ್ನುತ್ತಾರೆ. ಈ ರೀತಿಯ ಹೇಳಿಕೆ ದೇಶ ದ್ರೋಹದ ಹೇಳಿಕೆ. ಭಾಷೆ, ಆರ್ಥಿಕತೆ, ಜಾತಿ ಹೆಸರಿನಲ್ಲಿ ದೇಶ ತುಂಡು ಮಾಡುವುದು ಅಂದರೆ ಏನು ಎಂದು ಪ್ರಶ್ನಿಸಿದರು.

ಕಾಂಗ್ರೆಸ್​​ನವರು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದರಲ್ಲ, ಯಾಕೆ ಮಾಡಿದ್ದರು? ದೇಶ ಒಡೆಯುವುದಕ್ಕಾ? ಈಗಾಗಲೇ ದೇಶ ಒಡೆದು ಪಾಕಿಸ್ತಾನ ಅಂತ ಮಾಡಿದ್ದಾರೆ. ಈ ವಿಚಾರದಲ್ಲಿ ನೋವು ತಡೆದುಕೊಳ್ಳಲು ಆಗದೆ ಸಿಟ್ಟಿನಿಂದ ಈಶ್ವರಪ್ಪ ಅವರು ಆ ರೀತಿ ಮಾತನಾಡಿದ್ದಾರೆ. ದೇಶ ದ್ರೋಹ ಹೇಳಿಕೆ ನೀಡುವವರನ್ನು ಗುಂಡಿಕ್ಕುವ ಕಾನೂನು ರಚನೆ ಮಾಡುವಂತೆ ಹೇಳಿದ್ದಾರೆ ಎಂದು ಈಶ್ವರಪ್ಪ ಹೇಳಿಕೆಯನ್ನು ಪ್ರಮೋದ್ ಮುತಾಲಿಕ್ ಬೆಂಬಲಿಸಿದರು.

ಇದನ್ನೂ ಓದಿ: ಕಲಬುರಗಿ ಮೆಡಿಕಲ್ ಕಾಲೇಜಿನಲ್ಲಿ ಕೋಟ್ಯಂತರ ಶಿಷ್ಯವೇತನ ಗೋಲ್ ಮಾಲ್, ಆಡಿಯೋದಲ್ಲಿ ಆಡಳಿತ ಮಂಡಳಿ ಕಳ್ಳಾಟ ಬಯಲು

ಈಶ್ವರಪ್ಪ ವಿರುದ್ಧ ದೂರು ದಾಖಲು ವಿಚಾರವಾಗಿ ಪ್ರತಿಕ್ರಿಯಿಸಿ, ಈ ರಾಜಕಾರಣಿಗಳಿಗೆ ಒಂದೇ ಅಸ್ತ್ರ ಇರುವುದು, ಅದು ಪೊಲೀಸ್ ಠಾಣೆ ಮತ್ತು ಹೆದರಿಸುವುದು. ಗೂಂಡಾ ಆ್ಯಕ್ಟ್, ರೌಡಿ ಸೀಡರ್ ಹಾಕೋದೆ ಇವರ ಉದ್ಯೋಗ. ಪೊಲೀಸರ ಮೂಲಕ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಹಿಂದೂಗಳ ಟ್ಯಾಕ್ಸ್ ಹಿಂದುಗಳಿಗೆ ಹಾಗೂ ಮುಸ್ಲಿಮರ ಟ್ಯಾಕ್ಸ್ ಮುಸ್ಲಿಮರಿಗೆ ಹೋಗಬೇಕು ಎಂಬ ಹೇಳಿಕೆ ಸರಿ ಅಲ್ಲ. ಅದು ಮೂರ್ಖತನದ ಹೇಳಿಕೆ ಎಂದು ಮುತಾಲಿಕ್ ಅಭಿಪ್ರಾಯ ಪಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!