AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​​ಲೈನ್​​ ರಮ್ಮಿ ಬ್ಯಾನ್​ ಮಾಡುವಂತೆ ಒತ್ತಾಯಿಸಿ ಕಲಬುರಗಿಯಲ್ಲಿ ಪ್ರತಿಭಟನೆ

ರಮ್ಮಿ ಗೇಮ್ ಜೂಜಿನ ಗೀಳಿಗೆ ಬಿದ್ದು ನೂರಾರು ಯುವಕರು ಬೀದಿಗೆ ಬರುತ್ತಿದ್ದಾರೆ. ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡು ಜೀವತೊರೆಯುತ್ತಿದ್ದಾರೆ. ಹೀಗಾಗಿ ಆನ್ ಲೈನ್ ರಮ್ಮಿ ಗೇಮ್ ಬ್ಯಾನ್ ಮಾಡಬೇಕೆಂದು ಇಂದು ‘ನಮ್ಮ ಕರ್ನಾಟಕ ಸೇನೆ’ಯಿಂದ ಕಲಬುರಗಿ (Kalaburagi)ಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಆನ್​​ಲೈನ್​​ ರಮ್ಮಿ ಬ್ಯಾನ್​ ಮಾಡುವಂತೆ ಒತ್ತಾಯಿಸಿ ಕಲಬುರಗಿಯಲ್ಲಿ ಪ್ರತಿಭಟನೆ
ಆನ್​​ಲೈನ್​​ ರಮ್ಮಿ ಬ್ಯಾನ್​ ಮಾಡುವಂತೆ ಒತ್ತಾಯಿಸಿ ಕಲಬುರಗಿಯಲ್ಲಿ ಪ್ರತಿಭಟನೆ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Oct 16, 2024 | 4:36 PM

Share

ಕಲಬುರಗಿ, ಅ.16: A23 ಆನ್​ಲೈನ್ ರಮ್ಮಿ ಗೇಮ್​ನಿಂದ ದಿನನಿತ್ಯ ನೂರಾರು ಯುವಕರು ಬೀದಿಗೆ ಬರುತ್ತಿದ್ದಾರೆ. ಹೀಗಾಗಿ ಆನ್ ಲೈನ್ ರಮ್ಮಿ ಗೇಮ್ ಬ್ಯಾನ್ ಮಾಡಬೇಕೆಂದು ‘ನಮ್ಮ ಕರ್ನಾಟಕ ಸೇನೆ’ಯಿಂದ ಕಲಬುರಗಿ(Kalaburagi)ಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ಮೂಲಕ ಆಗಮಿಸಿದ ನಮ್ಮ ಕರ್ನಾಟಕ ಸೇನೆ ಕಾರ್ಯಕರ್ತರು ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ತಕ್ಷಣವೇ ರಾಜ್ಯದಲ್ಲಿ ಆನ್ ಲೈನ್ ರಮ್ಮಿ ಬ್ಯಾನ್ ಮಾಡಬೇಕು. ಇದರಿಂದ ಪ್ರತಿನಿತ್ಯ ನೂರಾರು ಯುವಕರು ರಮ್ಮಿ ಗೇಮ್ ಜೂಜಿನ ಗೀಳಿಗೆ ಬಿದ್ದು ಬೀದಿಗೆ ಬರುತ್ತಿದ್ದಾರೆ. ರಮ್ಮಿ ಗೇಮ್ ವ್ಯಾಮೋಹಕ್ಕೋಳಗಾಗಿ ಯುವಕರು ಹಾದಿ ತಪ್ಪುತ್ತಿದ್ದು, ಲಕ್ಷಾಂತರ ರೂಪಾಯಿ ಸಾಲ ಶೂಲ ಮಾಡುತ್ತಿದ್ದಾರೆ ಎಂದರು.

ಇದನ್ನೂ ಓದಿ:ಬೆಂಗಳೂರಿನಲ್ಲಿ ಆನ್​​ಲೈನ್​​ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: 6 ಆರೋಪಿಗಳ ಬಂಧನ

ಅದರಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಯಾದಗಿರಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಈ ರಮ್ಮಿ ಗೇಮ್ ಹಾವಳಿ ಹೆಚ್ಚಾಗಿದ್ದು, ಯುವಕರು ಕೆಲಸ ಕಾರ್ಯ ಬಿಟ್ಟು ಜೂಜಾಟದ ಕಡೆ ಮುಖ ಮಾಡುತ್ತಿದ್ದಾರೆ. ಅಲ್ಲದೇ ಲಕ್ಷಾಂತರ ರೂಪಾಯಿ ಸಾಲ ಮಾಡಿ ಮನೆ ಮಠ ಬಿಟ್ಟು ತಿರುಗುತ್ತಿದ್ದಾರಂತೆ. ಈ ಬಗ್ಗೆ ಈಗಾಗಲೇ ಅನೇಕ ಪೊಲೀಸ್ ಠಾಣೆಗಳಲ್ಲಿ ದೂರು ಸಹ ದಾಖಲಾಗಿದೆ. ಆದರೂ ಸಹ ಸರ್ಕಾರವಾಗಲಿ, ಗೃಹ ಇಲಾಖೆಯಾಗಲಿ ಆನ್ ಲೈನ್ ರಮ್ಮಿ ಗೇಮ್​ಗೆ ಕಡಿವಾಣ ಹಾಕುವುದಕ್ಕೆ ಮುಂದಾಗುತ್ತಿಲ್ಲ.

ಇದರಿಂದ ಲಕ್ಷಾಂತರ ಯುವಕರ ಭವಿಷ್ಯ ಹಾಳಾಗುತ್ತಿದೆ. ಹೀಗಾಗಿ ತಕ್ಷಣವೇ ರಾಜ್ಯ ಸರ್ಕಾರ ಆನ್​ಲೈನ್ ರಮ್ಮಿ ಗೇಮ್​ನ್ನು ರಾಜ್ಯದಲ್ಲಿ ನಿಷೇಧ ಮಾಡಬೇಕು ಎಂದು ಒತ್ತಾಯಿಸಿದರು. ‘ನಮ್ಮ ಕರ್ನಾಟಕ ಸೇನೆ’ ಕಲಬುರಗಿ ಘಟಕದಿಂದ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ ನೂರಾರು ಕನ್ನಡ ಪರ ಸಂಘಟನಯ ಕಾರ್ಯಕರ್ತರು, ರಮ್ಮಿ ಬ್ಯಾನ್ ಮಾಡುವಂತೆ ಒತ್ತಾಯಿಸಿದರು. ಸರ್ಕಾರ ತಕ್ಷಣವೇ ಮದ್ಯಪ್ರವೇಶಿಸಿ ಆನ್ ಲೈನ್ ಗೇಮ್ ಬ್ಯಾನ್ ಮಾಡಬೇಕು, ಇಲ್ಲದಿದ್ದರೇ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ