AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​​ಲೈನ್​​ ರಮ್ಮಿ ಬ್ಯಾನ್​ ಮಾಡುವಂತೆ ಒತ್ತಾಯಿಸಿ ಕಲಬುರಗಿಯಲ್ಲಿ ಪ್ರತಿಭಟನೆ

ರಮ್ಮಿ ಗೇಮ್ ಜೂಜಿನ ಗೀಳಿಗೆ ಬಿದ್ದು ನೂರಾರು ಯುವಕರು ಬೀದಿಗೆ ಬರುತ್ತಿದ್ದಾರೆ. ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡು ಜೀವತೊರೆಯುತ್ತಿದ್ದಾರೆ. ಹೀಗಾಗಿ ಆನ್ ಲೈನ್ ರಮ್ಮಿ ಗೇಮ್ ಬ್ಯಾನ್ ಮಾಡಬೇಕೆಂದು ಇಂದು ‘ನಮ್ಮ ಕರ್ನಾಟಕ ಸೇನೆ’ಯಿಂದ ಕಲಬುರಗಿ (Kalaburagi)ಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಆನ್​​ಲೈನ್​​ ರಮ್ಮಿ ಬ್ಯಾನ್​ ಮಾಡುವಂತೆ ಒತ್ತಾಯಿಸಿ ಕಲಬುರಗಿಯಲ್ಲಿ ಪ್ರತಿಭಟನೆ
ಆನ್​​ಲೈನ್​​ ರಮ್ಮಿ ಬ್ಯಾನ್​ ಮಾಡುವಂತೆ ಒತ್ತಾಯಿಸಿ ಕಲಬುರಗಿಯಲ್ಲಿ ಪ್ರತಿಭಟನೆ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Oct 16, 2024 | 4:36 PM

Share

ಕಲಬುರಗಿ, ಅ.16: A23 ಆನ್​ಲೈನ್ ರಮ್ಮಿ ಗೇಮ್​ನಿಂದ ದಿನನಿತ್ಯ ನೂರಾರು ಯುವಕರು ಬೀದಿಗೆ ಬರುತ್ತಿದ್ದಾರೆ. ಹೀಗಾಗಿ ಆನ್ ಲೈನ್ ರಮ್ಮಿ ಗೇಮ್ ಬ್ಯಾನ್ ಮಾಡಬೇಕೆಂದು ‘ನಮ್ಮ ಕರ್ನಾಟಕ ಸೇನೆ’ಯಿಂದ ಕಲಬುರಗಿ(Kalaburagi)ಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ಮೂಲಕ ಆಗಮಿಸಿದ ನಮ್ಮ ಕರ್ನಾಟಕ ಸೇನೆ ಕಾರ್ಯಕರ್ತರು ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ತಕ್ಷಣವೇ ರಾಜ್ಯದಲ್ಲಿ ಆನ್ ಲೈನ್ ರಮ್ಮಿ ಬ್ಯಾನ್ ಮಾಡಬೇಕು. ಇದರಿಂದ ಪ್ರತಿನಿತ್ಯ ನೂರಾರು ಯುವಕರು ರಮ್ಮಿ ಗೇಮ್ ಜೂಜಿನ ಗೀಳಿಗೆ ಬಿದ್ದು ಬೀದಿಗೆ ಬರುತ್ತಿದ್ದಾರೆ. ರಮ್ಮಿ ಗೇಮ್ ವ್ಯಾಮೋಹಕ್ಕೋಳಗಾಗಿ ಯುವಕರು ಹಾದಿ ತಪ್ಪುತ್ತಿದ್ದು, ಲಕ್ಷಾಂತರ ರೂಪಾಯಿ ಸಾಲ ಶೂಲ ಮಾಡುತ್ತಿದ್ದಾರೆ ಎಂದರು.

ಇದನ್ನೂ ಓದಿ:ಬೆಂಗಳೂರಿನಲ್ಲಿ ಆನ್​​ಲೈನ್​​ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: 6 ಆರೋಪಿಗಳ ಬಂಧನ

ಅದರಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಯಾದಗಿರಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಈ ರಮ್ಮಿ ಗೇಮ್ ಹಾವಳಿ ಹೆಚ್ಚಾಗಿದ್ದು, ಯುವಕರು ಕೆಲಸ ಕಾರ್ಯ ಬಿಟ್ಟು ಜೂಜಾಟದ ಕಡೆ ಮುಖ ಮಾಡುತ್ತಿದ್ದಾರೆ. ಅಲ್ಲದೇ ಲಕ್ಷಾಂತರ ರೂಪಾಯಿ ಸಾಲ ಮಾಡಿ ಮನೆ ಮಠ ಬಿಟ್ಟು ತಿರುಗುತ್ತಿದ್ದಾರಂತೆ. ಈ ಬಗ್ಗೆ ಈಗಾಗಲೇ ಅನೇಕ ಪೊಲೀಸ್ ಠಾಣೆಗಳಲ್ಲಿ ದೂರು ಸಹ ದಾಖಲಾಗಿದೆ. ಆದರೂ ಸಹ ಸರ್ಕಾರವಾಗಲಿ, ಗೃಹ ಇಲಾಖೆಯಾಗಲಿ ಆನ್ ಲೈನ್ ರಮ್ಮಿ ಗೇಮ್​ಗೆ ಕಡಿವಾಣ ಹಾಕುವುದಕ್ಕೆ ಮುಂದಾಗುತ್ತಿಲ್ಲ.

ಇದರಿಂದ ಲಕ್ಷಾಂತರ ಯುವಕರ ಭವಿಷ್ಯ ಹಾಳಾಗುತ್ತಿದೆ. ಹೀಗಾಗಿ ತಕ್ಷಣವೇ ರಾಜ್ಯ ಸರ್ಕಾರ ಆನ್​ಲೈನ್ ರಮ್ಮಿ ಗೇಮ್​ನ್ನು ರಾಜ್ಯದಲ್ಲಿ ನಿಷೇಧ ಮಾಡಬೇಕು ಎಂದು ಒತ್ತಾಯಿಸಿದರು. ‘ನಮ್ಮ ಕರ್ನಾಟಕ ಸೇನೆ’ ಕಲಬುರಗಿ ಘಟಕದಿಂದ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ ನೂರಾರು ಕನ್ನಡ ಪರ ಸಂಘಟನಯ ಕಾರ್ಯಕರ್ತರು, ರಮ್ಮಿ ಬ್ಯಾನ್ ಮಾಡುವಂತೆ ಒತ್ತಾಯಿಸಿದರು. ಸರ್ಕಾರ ತಕ್ಷಣವೇ ಮದ್ಯಪ್ರವೇಶಿಸಿ ಆನ್ ಲೈನ್ ಗೇಮ್ ಬ್ಯಾನ್ ಮಾಡಬೇಕು, ಇಲ್ಲದಿದ್ದರೇ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್