AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​​ಲೈನ್​​ ರಮ್ಮಿ ಬ್ಯಾನ್​ ಮಾಡುವಂತೆ ಒತ್ತಾಯಿಸಿ ಕಲಬುರಗಿಯಲ್ಲಿ ಪ್ರತಿಭಟನೆ

ರಮ್ಮಿ ಗೇಮ್ ಜೂಜಿನ ಗೀಳಿಗೆ ಬಿದ್ದು ನೂರಾರು ಯುವಕರು ಬೀದಿಗೆ ಬರುತ್ತಿದ್ದಾರೆ. ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡು ಜೀವತೊರೆಯುತ್ತಿದ್ದಾರೆ. ಹೀಗಾಗಿ ಆನ್ ಲೈನ್ ರಮ್ಮಿ ಗೇಮ್ ಬ್ಯಾನ್ ಮಾಡಬೇಕೆಂದು ಇಂದು ‘ನಮ್ಮ ಕರ್ನಾಟಕ ಸೇನೆ’ಯಿಂದ ಕಲಬುರಗಿ (Kalaburagi)ಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಆನ್​​ಲೈನ್​​ ರಮ್ಮಿ ಬ್ಯಾನ್​ ಮಾಡುವಂತೆ ಒತ್ತಾಯಿಸಿ ಕಲಬುರಗಿಯಲ್ಲಿ ಪ್ರತಿಭಟನೆ
ಆನ್​​ಲೈನ್​​ ರಮ್ಮಿ ಬ್ಯಾನ್​ ಮಾಡುವಂತೆ ಒತ್ತಾಯಿಸಿ ಕಲಬುರಗಿಯಲ್ಲಿ ಪ್ರತಿಭಟನೆ
ದತ್ತಾತ್ರೇಯ ಪಾಟೀಲ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 16, 2024 | 4:36 PM

Share

ಕಲಬುರಗಿ, ಅ.16: A23 ಆನ್​ಲೈನ್ ರಮ್ಮಿ ಗೇಮ್​ನಿಂದ ದಿನನಿತ್ಯ ನೂರಾರು ಯುವಕರು ಬೀದಿಗೆ ಬರುತ್ತಿದ್ದಾರೆ. ಹೀಗಾಗಿ ಆನ್ ಲೈನ್ ರಮ್ಮಿ ಗೇಮ್ ಬ್ಯಾನ್ ಮಾಡಬೇಕೆಂದು ‘ನಮ್ಮ ಕರ್ನಾಟಕ ಸೇನೆ’ಯಿಂದ ಕಲಬುರಗಿ(Kalaburagi)ಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ಮೂಲಕ ಆಗಮಿಸಿದ ನಮ್ಮ ಕರ್ನಾಟಕ ಸೇನೆ ಕಾರ್ಯಕರ್ತರು ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ತಕ್ಷಣವೇ ರಾಜ್ಯದಲ್ಲಿ ಆನ್ ಲೈನ್ ರಮ್ಮಿ ಬ್ಯಾನ್ ಮಾಡಬೇಕು. ಇದರಿಂದ ಪ್ರತಿನಿತ್ಯ ನೂರಾರು ಯುವಕರು ರಮ್ಮಿ ಗೇಮ್ ಜೂಜಿನ ಗೀಳಿಗೆ ಬಿದ್ದು ಬೀದಿಗೆ ಬರುತ್ತಿದ್ದಾರೆ. ರಮ್ಮಿ ಗೇಮ್ ವ್ಯಾಮೋಹಕ್ಕೋಳಗಾಗಿ ಯುವಕರು ಹಾದಿ ತಪ್ಪುತ್ತಿದ್ದು, ಲಕ್ಷಾಂತರ ರೂಪಾಯಿ ಸಾಲ ಶೂಲ ಮಾಡುತ್ತಿದ್ದಾರೆ ಎಂದರು.

ಇದನ್ನೂ ಓದಿ:ಬೆಂಗಳೂರಿನಲ್ಲಿ ಆನ್​​ಲೈನ್​​ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: 6 ಆರೋಪಿಗಳ ಬಂಧನ

ಅದರಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಯಾದಗಿರಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಈ ರಮ್ಮಿ ಗೇಮ್ ಹಾವಳಿ ಹೆಚ್ಚಾಗಿದ್ದು, ಯುವಕರು ಕೆಲಸ ಕಾರ್ಯ ಬಿಟ್ಟು ಜೂಜಾಟದ ಕಡೆ ಮುಖ ಮಾಡುತ್ತಿದ್ದಾರೆ. ಅಲ್ಲದೇ ಲಕ್ಷಾಂತರ ರೂಪಾಯಿ ಸಾಲ ಮಾಡಿ ಮನೆ ಮಠ ಬಿಟ್ಟು ತಿರುಗುತ್ತಿದ್ದಾರಂತೆ. ಈ ಬಗ್ಗೆ ಈಗಾಗಲೇ ಅನೇಕ ಪೊಲೀಸ್ ಠಾಣೆಗಳಲ್ಲಿ ದೂರು ಸಹ ದಾಖಲಾಗಿದೆ. ಆದರೂ ಸಹ ಸರ್ಕಾರವಾಗಲಿ, ಗೃಹ ಇಲಾಖೆಯಾಗಲಿ ಆನ್ ಲೈನ್ ರಮ್ಮಿ ಗೇಮ್​ಗೆ ಕಡಿವಾಣ ಹಾಕುವುದಕ್ಕೆ ಮುಂದಾಗುತ್ತಿಲ್ಲ.

ಇದರಿಂದ ಲಕ್ಷಾಂತರ ಯುವಕರ ಭವಿಷ್ಯ ಹಾಳಾಗುತ್ತಿದೆ. ಹೀಗಾಗಿ ತಕ್ಷಣವೇ ರಾಜ್ಯ ಸರ್ಕಾರ ಆನ್​ಲೈನ್ ರಮ್ಮಿ ಗೇಮ್​ನ್ನು ರಾಜ್ಯದಲ್ಲಿ ನಿಷೇಧ ಮಾಡಬೇಕು ಎಂದು ಒತ್ತಾಯಿಸಿದರು. ‘ನಮ್ಮ ಕರ್ನಾಟಕ ಸೇನೆ’ ಕಲಬುರಗಿ ಘಟಕದಿಂದ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ ನೂರಾರು ಕನ್ನಡ ಪರ ಸಂಘಟನಯ ಕಾರ್ಯಕರ್ತರು, ರಮ್ಮಿ ಬ್ಯಾನ್ ಮಾಡುವಂತೆ ಒತ್ತಾಯಿಸಿದರು. ಸರ್ಕಾರ ತಕ್ಷಣವೇ ಮದ್ಯಪ್ರವೇಶಿಸಿ ಆನ್ ಲೈನ್ ಗೇಮ್ ಬ್ಯಾನ್ ಮಾಡಬೇಕು, ಇಲ್ಲದಿದ್ದರೇ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್