AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI ಪರೀಕ್ಷೆ ದಿನ ಕಾಲೇಜು ಆವರಣದ ಹೂವಿನ ಕುಂಡದಲ್ಲಿ ಎಲೆಕ್ಟ್ರಾನಿಕ್ ಡಿವೈಸ್ ಇಟ್ಟಿದ್ದ ಅಭ್ಯರ್ಥಿ ಪ್ರಭು! ಸಿಐಡಿ ವಿಚಾರಣೆಯಲ್ಲಿ ಮಾಹಿತಿ ಲಭ್ಯ

ಪರೀಕ್ಷೆ ದಿನ ಗೇಟ್​ನಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಿರುತ್ತಾರೆ ಎಂದು ತಿಳಿದಿದ್ದ ಪ್ರಭು, ಹಿಂದಿನ ದಿನವೇ ಕಾಲೇಜು ಆವರಣಕ್ಕೆ ಬಂದಿದ್ದ. ಪರೀಕ್ಷಾ ಕೇಂದ್ರದ ಆವರಣದಲ್ಲಿ ಎಲೆಕ್ಟ್ರಾನಿಕ್ ಡಿವೈಸ್ ಬಚ್ಚಿಟ್ಟಿದ್ದ.

PSI ಪರೀಕ್ಷೆ ದಿನ ಕಾಲೇಜು ಆವರಣದ ಹೂವಿನ ಕುಂಡದಲ್ಲಿ ಎಲೆಕ್ಟ್ರಾನಿಕ್ ಡಿವೈಸ್ ಇಟ್ಟಿದ್ದ ಅಭ್ಯರ್ಥಿ ಪ್ರಭು! ಸಿಐಡಿ ವಿಚಾರಣೆಯಲ್ಲಿ ಮಾಹಿತಿ ಲಭ್ಯ
ಆರೋಪಿ ಪ್ರಭು ಜೊತೆ ಪೊಲೀಸರು ಎಂಎಸ್ ಇರಾನಿ ಕಾಲೇಜಿಗೆ ಆಗಮಿಸಿದ್ದಾರೆ
TV9 Web
| Edited By: sandhya thejappa|

Updated on:May 03, 2022 | 3:47 PM

Share

ಕಲಬುರಗಿ: ಎಂಎಸ್ ಇರಾನಿ ಕಾಲೇಜ್ನಲ್ಲಿ ಪಿಎಸ್ಐ ಪರೀಕ್ಷೆ (PSI Exam) ಬರೆದಿದ್ದ ಅಭ್ಯರ್ಥಿ ಪ್ರಭು, ಪರೀಕ್ಷೆ ಬರೆಯಲು ಎಲೆಕ್ಟ್ರಾನಿಕ್ ಡಿವೈಸ್ (Electronic Device) ಬಳಸಿದ್ದ ಎಂದು ಸಿಐಡಿ ವಿಚಾರಣೆ ವೇಳೆ ಮಾಹಿತಿ ಸಿಕ್ಕಿದೆ. ಪ್ರಭು ತಂದೆ ಶರಣಪ್ಪ, ರುದ್ರಗೌಡ ಪಾಟೀಲ್ನ ಆಡಿಟರ್ ಚಂದ್ರಕಾಂತ್ ಕುಲಕರ್ಣಿಗೆ ಸುಮಾರು 50 ಲಕ್ಷ ರೂಪಾಯಿ ನೀಡಿದ್ದ. ಮಗನಿಗಾಗಿ ಸಾಲ ಮಾಡಿ ಕೊಟ್ಟಿದ್ದ ಎನ್ನುವ ಸಂಗತಿಗಳು ಸಿಐಡಿ ಅಧಿಕಾರಿಗಳು ಕಲೆ ಹಾಕಿದ್ದಾರೆ. ಇನ್ನು ಒಂದು ದಿನ ಮೊದಲೇ ಪ್ರಭು ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ್ದನಂತೆ. ಈ ವೇಳೆ ಕಾಲೇಜು ಆವರಣದ ಹೂವಿನ ಕುಂಡದಲ್ಲಿ ಡಿವೈಸ್ ಇಟ್ಟಿದ್ದ ಎಂದು ತಿಳಿದುಬಂದಿದೆ.

ಪರೀಕ್ಷೆ ದಿನ ಗೇಟ್​ನಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಿರುತ್ತಾರೆ ಎಂದು ತಿಳಿದಿದ್ದ ಪ್ರಭು, ಹಿಂದಿನ ದಿನವೇ ಕಾಲೇಜು ಆವರಣಕ್ಕೆ ಬಂದಿದ್ದ. ಪರೀಕ್ಷಾ ಕೇಂದ್ರದ ಆವರಣದಲ್ಲಿ ಎಲೆಕ್ಟ್ರಾನಿಕ್ ಡಿವೈಸ್ ಬಚ್ಚಿಟ್ಟಿದ್ದ. ಪರೀಕ್ಷೆ ಮುಗಿದ ಬಳಿಕ ಡಿವೈಸ್ ತೆಗೆದುಕೊಂಡು ಹೋಗಿದ್ದ. ಎಂಎಸ್ಐ ಕಾಲೇಜ್ಗೆ ಆರೋಪಿ ಪ್ರಭುನನ್ನು ಪೊಲೀಸರು ಕರೆ ತಂದು ಸ್ಥಳ ಮಹಜರು ಮಾಡಿದರು.

ಎಂಟು ಅಭ್ಯರ್ಥಿಗಳು ಆಯ್ಕೆ: ಎಂಎಸ್ ಇರಾನಿ ಪದವಿ ಕಾಲೇಜಿನಲ್ಲಿ ಪರೀಕ್ಷೆ ಬರೆದವರ ಪೈಕಿ 8 ಜನ ಆಯ್ಕೆಯಾಗಿದ್ದರು. ಪಿಎಸ್​ಐ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ 8 ಜನರ ಹೆಸರಿತ್ತು. 8 ಅಭ್ಯರ್ಥಿಗಳ ಪೈಕಿ ಪ್ರಭುನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಉಳಿದ 7 ಅಭ್ಯರ್ಥಿಗಳ ಪರಿಶೀಲನೆಗೆ ಮುಂದಾಗಿದ್ದಾರೆ. ಉಳಿದ 7 ಅಭ್ಯರ್ಥಿಗಳು ಪ್ರಾಮಾಣಿಕವಾಗಿ ಪರೀಕ್ಷೆ ಬರೆದಿದ್ದಾರಾ? ಅಥವಾ ಅಕ್ರಮವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿದ್ದಾರಾ? ಈ ಎಲ್ಲದರ ಬಗ್ಗೆ ತನಿಖೆ ನಡೆಸಲಿದ್ದಾರೆ.

ಜ್ಞಾನಜ್ಯೋತಿ ಇಂಗ್ಲಿಷ್ ಶಾಲೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿ ಇಬ್ಬರು ಡಿವೈಎಸ್​ಪಿ, ಓರ್ವ ಸಿಪಿಐನ ವಿಚಾರಣೆ ನಡೆಸಲಾಗಿದೆ. ಪರೀಕ್ಷೆ ದಿನ ಮೂವರು ಪೊಲೀಸ್ ಅಧಿಕಾರಿಗಳು ಕರ್ತವ್ಯದಲ್ಲಿದ್ದರು. ವಾರದ ಹಿಂದೆಯೇ ಸಿಐಡಿ ಅಧಿಕಾರಿಗಳನ್ನು ವಿಚಾರಣೆ ನಡೆಸಿದ್ದಾರೆ. ಜೊತೆಗೆ ಅವರ ಮೊಬೈಲ್​ಗಳನ್ನ ವಶಕ್ಕೆ ಪಡೆದಿದ್ದಾರೆ. ಅಕ್ರಮದಲ್ಲಿ ಪೊಲೀಸರು ಭಾಗಿಯಾಗಿದ್ದಾರಾ ಎನ್ನುವ ಬಗ್ಗೆ ತನಿಖೆ ಮುಂದುವರಿದಿದೆ.

ಇದನ್ನೂ ಓದಿ

ಡೆನ್ಮಾರ್ಕ್​ ತಲುಪಿದ ಪ್ರಧಾನಿ ನರೇಂದ್ರ ಮೋದಿ; ಹೊರಡುವುದಕ್ಕೂ ಮೊದಲು ಜರ್ಮನಿ ಸರ್ಕಾರಕ್ಕೆ ಕೃತಜ್ಞತೆ

Viral Video: 37,000 ಅಡಿ ಎತ್ತರದಲ್ಲಿ ವಿಮಾನದಲ್ಲೇ ಮದುವೆಯಾದ ಜೋಡಿ; ವೈರಲ್ ವಿಡಿಯೋ ಇಲ್ಲಿದೆ

Published On - 3:31 pm, Tue, 3 May 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ