AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI Recruitment Scam: ದೇಶದ್ರೋಹಿ ದಾವೂದ್ ಇಬ್ರಾಹಿಂಗೆ ಜಾರಿ ಮಾಡಿದಂತೆ ದಿವ್ಯಾ ಹಾಗರಗಿಗೂ ಅರೆಸ್ಟ್​ ವಾರಂಟ್ ಜಾರಿ!

PSI Recruitment Scam: ಆರೋಪಿಗಳಿಗೆ ಸಿಐಡಿ ಪೊಲೀಸರು ವಾರಂಟ್ ಕೋರಿದ್ದರು. ದಿವ್ಯಾ ಹಾಗರಗಿ, ಮಂಜುನಾಥ ಮೇಳಕುಂದಿ, ಅರ್ಚನಾ, ಕಾಶಿನಾಥ್, ರವೀಂದ್ರ, ಶಾಂತಿಬಾಯಿಗೆ ವಾರಂಟ್​ ಜಾರಿ ಮಾಡಲಾಗಿದೆ. 1 ವಾರದೊಳಗೆ ಸಿಐಡಿ ಮುಂದೆ ಶರಣಾಗುವಂತೆ ವಾರಂಟ್​ ನಲ್ಲಿ ಸೂಚನೆ ನೀಡಲಾಗಿದೆ.

PSI Recruitment Scam: ದೇಶದ್ರೋಹಿ ದಾವೂದ್ ಇಬ್ರಾಹಿಂಗೆ ಜಾರಿ ಮಾಡಿದಂತೆ ದಿವ್ಯಾ ಹಾಗರಗಿಗೂ ಅರೆಸ್ಟ್​ ವಾರಂಟ್ ಜಾರಿ!
ಆರೋಪಿ ದಿವ್ಯಾ ಹಾಗರಗಿ ನಾಪತ್ತೆ -ದಾವೂದ್ ಇಬ್ರಾಹಿಂಗೆ ಜಾರಿ ಮಾಡಿದಂತೆ ದಿವ್ಯಾಗೂ ಅರೆಸ್ಟ್​ ವಾರಂಟ್ ಜಾರಿ!
TV9 Web
| Edited By: ಸಾಧು ಶ್ರೀನಾಥ್​|

Updated on:Apr 26, 2022 | 6:29 PM

Share

ಕಲಬುರಗಿ: ರಾಜ್ಯ ಪೊಲೀಸ್​ ಇಲಾಖೆಯಲ್ಲಿ ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದಿರುವ (PSI Recruitment Scam) ಅಕ್ರಮಗಳನ್ನು ಕಂಡು, ಇಂತಹ ಅಪರಾಧವೆಸಗಿರುವವರು ನಿಜಕ್ಕೂ ದೇಶದ್ರೋಹಿಗಳೇ ಸರಿ ಎಂದು ರೋಸಿಹೋದ ಜನ ಅದಾಗಲೇ ತೀರ್ಮಾನಿಸಿಯಾಗಿದೆ. ಈ ಮಧ್ಯೆ, ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು (CID) ಸಹ ಈ ಆರೋಪಿಗಳ ವಿರುದ್ಧ ದೇಶಭ್ರಷ್ಟ ದಾವೂದ್ ಇಬ್ರಾಹಿಂ 1993ರಲ್ಲಿ ಎಸಗಿದ್ದ ಮುಂಬೈ ಸ್ಫೋಟ ಪ್ರಕರಣವನ್ನು ಉಲ್ಲೇಖಿಸಿದ್ದಾರೆ. ಆ ಪ್ರಕರಣದಲ್ಲಿ ದೇಶದ್ರೋಹಿ ದಾವೂದ್ ಇಬ್ರಾಹಿಂನ ವಿರುದ್ಧ ಅರೆಸ್ಟ್​ ವಾರಂಟ್​ ಜಾರಿ (Arrest Warrant) ಮಾಡಲಾಗಿದೆ. ಅದರಂತೆ, ಪರಾರಿಯಾಗಿರುವ ದಿವ್ಯಾ ಹಾಗರಗಿ (Divya Hagaragi) ಸೇರಿದಂತೆ ಒಟ್ಟು ಆರು ಆರೋಪಿಗಳ ವಿರುದ್ಧ ಅರೆಸ್ಟ್ ವಾರಂಟ್ ಹೊರಡಿಸಿದ್ದಾರೆ!

ಹೌದು, ಕರ್ನಾಟಕ ಪೊಲೀಸ್​ ಇಲಾಖೆಯಲ್ಲಿ 545 ಪೊಲೀಸ್​ ಸಬ್​ ಇನ್ಸ್​ ಪೆಕ್ಟರ್​ (ಪಿಎಸ್​ಐ -PSI) ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ವಿಚಾರ ದಿವ್ಯಾ ಹಾಗರಗಿ ಸೇರಿದಂತೆ 6 ಮಂದಿ ಆರೋಪಿಗಳಿಗೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಅರೆಸ್ಟ್ ವಾರಂಟ್ ಜಾರಿ ಮಾಡಿದ್ದಾರೆ. ಕಲಬುರಗಿ 3ನೇ JMFC ಕೋರ್ಟ್​​ನಿಂದ ವಾರಂಟ್ ಜಾರಿ ಮಾಡಲಾಗಿದೆ. ಮುಂಬೈ ದಾಳಿ ವೇಳೆ 1993 (Mumbai Blast Case) ದಾವೂದ್​ಗೂ ಅರೆಸ್ಟ್​ ವಾರಂಟ್ ಜಾರಿ ಮಾಡಲಾಗಿತ್ತು. ದಾವುದ್​​ ಇಬ್ರಾಹಿಂಗೂ (Dawood Ibrahim) ಕೋರ್ಟ್​​​​ ವಾರಂಟ್​​ ಜಾರಿ ಮಾಡಿದ್ದನ್ನು ಉಲ್ಲೇಖಿಸಿ, ಈ ಪ್ರಕರಣದಲ್ಲಿಯೂ ಆರೋಪಿಗಳಿಗೆ ಸಿಐಡಿ ಪೊಲೀಸರು ವಾರಂಟ್ ಕೋರಿದ್ದರು. ದಿವ್ಯಾ ಹಾಗರಗಿ, ಮಂಜುನಾಥ ಮೇಳಕುಂದಿ, ಅರ್ಚನಾ, ಕಾಶಿನಾಥ್, ರವೀಂದ್ರ, ಶಾಂತಿಬಾಯಿಗೆ ವಾರಂಟ್​ ಜಾರಿ ಮಾಡಲಾಗಿದೆ. 1 ವಾರದೊಳಗೆ ಸಿಐಡಿ ಮುಂದೆ ಶರಣಾಗುವಂತೆ ವಾರಂಟ್​ ನಲ್ಲಿ ಸೂಚನೆ ನೀಡಲಾಗಿದೆ.

ತನಿಖೆಯ ಅವಧಿಯಲ್ಲಿಯೇ ಆರೋಪಿಗಳಿಗೆ ಅರೆಸ್ಟ್ ವಾರೆಂಟ್: ಪಿ.ಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ದಿವ್ಯಾ ಸೇರಿ 6 ಜನ ಆರೋಪಿಗಳಿಗೆ ತನಿಖೆ ಅವಧಿಯಲ್ಲಿಯೇ ಆರೋಪಿಗೆ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿದೆ. ಕರ್ನಾಟಕದ ಅಪರಾಧ ಪ್ರಕರಣಗಳಲ್ಲಿ ಅಪರೂಪವಾದ ಪ್ರಕರಣ ಇದಾಗಿದೆ. ಮುಂಬೈ ಬ್ಲಾಸ್ಟ್ ಸಂದರ್ಭದಲ್ಲಿ ದಾವುದ್ ಇಬ್ರಾಹಿಂ ಗೆ ಕೋರ್ಟ್​ ಅರೆಸ್ಟ್ ವಾರೆಂಟ್ ನೀಡಿತ್ತು ಎಂದು ಆ ಪ್ರಕರಣ ಉಲ್ಲೇಖಿಸಿ, ಆರೋಪಿಗಳ ವಿರುದ್ಧಸಿಐಡಿ ಪೊಲೀಸರು ಅರೆಸ್ಟ್ ವಾರೆಂಟ್ ಕೋರಿದ್ದರು. ಕಲಬುರಗಿಯ 3ನೇ JMFC ಕೋರ್ಟ್​ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಆರೂ ಜನರಿಗೆ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ.

ಇದನ್ನೂ ಓದಿ: PSI Recruitment Scam: ಆರೋಪಿ ದಿವ್ಯಾ ಹಾಗರಗಿ ಕಾಣಿಸಿಕೊಂಡರು ಬಿಜೆಪಿ ಟ್ವೀಟ್​​ನಲ್ಲಿ! ಜೊತೆಗೆ ಯಾರಿದ್ದಾರೆ ನೋಡಿ!

ಇದನ್ನೂ ಓದಿ: ಅನ್ನ ಭಾಗ್ಯ, ತಾಳಿ ಭಾಗ್ಯ ಜನರನ್ನ ದರಿದ್ರ ಮಾಡುತ್ತದೆ; ಅದನ್ನ ಬಂದ್ ಮಾಡಿ: ಸಿಎಂ ಬೊಮ್ಮಾಯಿಗೆ ಶಾಸಕ ಯತ್ನಾಳ್ ಒತ್ತಾಯ

Published On - 6:21 pm, Tue, 26 April 22

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ