AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI Recruitment Scam: ಜೈಲಿನಿಂದ ಹೊರಬಂದ ಬೆನ್ನಲ್ಲೇ ಜಾಮೀನು ಷರತ್ತು ಉಲ್ಲಂಘನೆ: ಕಿಂಗ್​ಪಿನ್​ ರುದ್ರಗೌಡ ಪಾಟೀಲ್​ ಮನೆಗೆ ಸಿಐಡಿ ಭೇಟಿ

545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಯಲ್ಲಿ ಹಗರಣಕ್ಕೆ ಸಂಬಂಧಿಸಿದಂತೆ ಕಿಂಗ್​ಪಿನ್​ ರುದ್ರಗೌಡ ಪಾಟೀಲ್​ ಮನೆಗೆ ಸಿಐಡಿ ಅಧಿಕಾರಿಗಳು ಭೇಟಿ ನೀಡಿದ್ದಾರೆ.

PSI Recruitment Scam: ಜೈಲಿನಿಂದ ಹೊರಬಂದ ಬೆನ್ನಲ್ಲೇ ಜಾಮೀನು ಷರತ್ತು ಉಲ್ಲಂಘನೆ: ಕಿಂಗ್​ಪಿನ್​ ರುದ್ರಗೌಡ ಪಾಟೀಲ್​ ಮನೆಗೆ ಸಿಐಡಿ ಭೇಟಿ
PSI Recruitment Scam (ಪ್ರಾತಿನಿಧಿಕ ಚಿತ್ರ)
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Dec 20, 2022 | 4:39 PM

Share

ಕಲಬುರಗಿ: 545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಯಲ್ಲಿ ಹಗರಣಕ್ಕೆ (PSI Recruitment Scam) ಸಂಬಂಧಿಸಿದಂತೆ ಜಿಲ್ಲೆಯ ಅಕ್ಕಮಹಾದೇವಿ ಕಾಲೋನಿಯಲ್ಲಿರುವ ಕಿಂಗ್​ಪಿನ್​ ರುದ್ರಗೌಡ ಪಾಟೀಲ್​ ಮನೆಗೆ ಸಿಐಡಿ ಅಧಿಕಾರಿಗಳು ಭೇಟಿ ನೀಡಿದ್ದಾರೆ. 2 ದಿನಗಳ ಹಿಂದೆ ಷರತ್ತುಬದ್ಧ ಜಾಮೀನಿನ ಮೇಲೆ ರುದ್ರಗೌಡ ಪಾಟೀಲ್ ಹೊರಬಂದಿದ್ದರು. ಜೈಲಿನಿಂದ ಹೊರಬಂದ ಬೆನ್ನಲ್ಲೇ ಜಾಮೀನು ಷರತ್ತು ಉಲ್ಲಂಘನೆ ಮಾಡಲಾಗಿದೆ. ಹಾಗಾಗಿ ರುದ್ರಗೌಡ ಪಾಟೀಲ್​ ಮನೆಗೆ ಸಿಐಡಿ ಪೊಲೀಸರು ಭೇಟಿ ನೀಡಿದ್ದಾರೆ. ಜೊತೆಗೆ ರುದ್ರಗೌಡ ಪಾಟೀಲ್​ ಕುಟುಂಬಸ್ಥರಿಗೆ ನೋಟಿಸ್ ಜಾರಿಮಾಡಿದ್ದಾರೆ. ಕೋರ್ಟ್ ನಿಗದಿತ ವಿಳಾಸದ ಮನೆಯಲ್ಲಿರಬೇಕೆಂದು ಷರತ್ತು ವಿಧಿಸಿತ್ತು. ಕೋರ್ಟ್, ತನಿಖಾಧಿಕಾರಿಗೆ ನೀಡಿರುವ ಮೊಬೈಲ್​ ನಂಬರ್​ನಲ್ಲಿ ಲಭ್ಯವಾಗಿದೆ. ಜಾಮೀನಿನ ಮೇಲೆ ಹೊರಬಂದ ನಂತರ ಸಾಕ್ಷ್ಯನಾಶ ಮಾಡಬಾರದು. ಮೊಬೈಲ್ ನಂಬರ್, ವಿಳಾಸ ಬದಲಿಸಿದರೆ ಗಮನಕ್ಕೆ ತರಬೇಕು ಎಂದು ಕಲಬುರಗಿ ಹೈಕೋರ್ಟ್ ರುದ್ರಗೌಡ ಪಾಟೀಲ್​ಗೆ ಷರತ್ತು ವಿಧಿಸಿತ್ತು.

ಆದರೆ ತನಿಖಾಧಿಕಾರಿ ನೀಡಿದ್ದ ವಿಳಾಸಕ್ಕೆ ತೆರಳಿದ್ದಾಗ ಲಾಕ್ ಆಗಿತ್ತು. ರುದ್ರಗೌಡ ಪಾಟೀಲ್ ನೀಡಿದ್ದ ಮೊಬೈಲ್​ ನಂಬರ್ ಸ್ವಿಚ್​ ಆಫ್​ ಆಗಿತ್ತು. ನಿನ್ನೆ ಸಂಜೆ 4ಕ್ಕೆ ವಿಚಾರಣೆಗೆ ಹಾಜರಾಗಲು ತನಿಖಾಧಿಕಾರಿ ಸೂಚಿಸಿದ್ದು, ಆದರೆ ರುದ್ರಗೌಡ ಪಾಟೀಲ್ ವಿಚಾರಣೆಗೆ ಗೈರಾಗಿದ್ದರು. ಹಾಗಾಗಿ ಇಂದು ಅಕ್ಕಮಹಾದೇವಿ ಕಾಲೋನಿ ನಿವಾಸಕ್ಕೆ ಸಿಐಡಿ ಭೇಟಿ ನೀಡಿದ್ದರು.

ಇದನ್ನೂ ಓದಿ: PSI Scam Case: ಜಾಮೀನು ಪಡೆದು ಜೈಲಿನಿಂದ ಬಂದ ಮಹಾಂತೇಶ್ ಪಾಟೀಲ್​ಗೆ ಕಾಂಗ್ರೆಸ್ ನಾಯಕರಿಂದ ಸತ್ಕಾರ  

ಇಬ್ಬರು ಪ್ರಮುಖ ಆರೋಪಿಗಳಿಗೆ ಜಾಮೀನು ಮಂಜೂರು

545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಯಲ್ಲಿ ಹಗರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ಕಿಂಗ್ ಪಿನ್​​ ರುದ್ರಗೌಡ ಪಾಟೀಲ್ ಮತ್ತು ಮಹಾಂತೇಶ್ ಪಾಟೀಲ್​ಗೆ ಕಲಬುರಗಿ ಹೈಕೋರ್ಟ್​ ಪೀಠದಿಂದ ಜಾಮೀನು ಮಂಜೂರು ಮಾಡಲಾಗಿದೆ. ಜಿಲ್ಲೆಯ ಚೌಕ್ ಠಾಣೆಯಲ್ಲಿ ದಾಖಲಾಗಿದ್ದ ಕೇಸ್​ನಲ್ಲಿ ಜಾಮೀನು ನೀಡಲಾಗಿದೆ. ಪ್ರಕರಣದಲ್ಲಿ ಕಿಂಗ್ ಪಿನ್ ರುದ್ರಗೌಡ ಪಾಟೀಲ್​ನ್ನು ಈ ಹಿಂದೆ ಅರೆಸ್ಟ್ ಮಾಡಲಾಗಿತ್ತು. ಸಹಚರರಿಬ್ಬರಿಗ ರುದ್ರಗೌಡ ಜೊತೆ ಮಧ್ಯವರ್ತಿಗಳಾಗಿ ಕೆಲಸ ಮಾಡುತ್ತಿದ್ದ. ಬಂಧಿತ ಆರೋಪಿಗಳು ಬ್ಲೂಟೂತ್ಗಳನ್ನು ಸರಬರಾಜು ಮಾಡುತ್ತಿದ್ದರು. ಜೊತೆಗೆ, ರುದ್ರಗೌಡ ಪಾಟೀಲ್ ಜೊತೆ ಸೇರಿ ಅಭ್ಯರ್ಥಿಗಳ ಜೊತೆ ಡೀಲ್ ಮಾಡುತ್ತಿದ್ದರು. ಅಕ್ರಮವಾಗಿ ಪರೀಕ್ಷೆ ಬರೆಯಲು ಸಿದ್ದರಿದ್ದವರನ್ನು ಹುಡುಕಿ ರುದ್ರಗೌಡ ಪಾಟೀಲ್​ಗೆ ಭೇಟಿ ಮಾಡಿಸುತ್ತಿದ್ದರು.

ಇದನ್ನೂ ಓದಿ: PSI Recruitment Scam: ಅಮೃತ್ ಪಾಲ್ ವಿರುದ್ಧ ಪ್ರಾಸಿಕ್ಯೂಷನ್​ಗೆ ಸರ್ಕಾರ ಅನುಮತಿ

ಎಸ್​ಐ ಹಗರಣದ ಪ್ರಮುಖ ಆರೋಪಿಗೆ ಜಾಮೀನು

ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಆರೋಪಿಗೆ ಹಾಗೂ ಪರೀಕ್ಷೆಯಲ್ಲಿ ಮೊದಲ ರ‍್ಯಾಂಕ್ ಪಡೆದ ಅಭ್ಯರ್ಥಿಗೆ ನ್ಯಾಯಾಲಯವು ಇತ್ತೀಚೆಗೆ ಜಾಮೀನು ಮಂಜೂರು ಮಾಡಿದೆ. ಪಿಎಸ್​ಐ ಹಗರಣದ ಎ1 ಜಾಗೃತ್ ಹಾಗೂ ಮಹಿಳಾ ಕೋಟಾದಲ್ಲಿ ಪ್ರಥಮ ರ‍್ಯಾಂಕ್‌ ಪಡೆದಿದ್ದ ರಚನಾಗೆ ಜಾಮೀನು ಸಿಕ್ಕಿದೆ. ಆರೋಪಿಗಳ ಪರ ವಕೀಲ ಶ್ಯಾಮ್​ಸುಂದರ್​ ಅವರು ವಾದ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:38 pm, Tue, 20 December 22

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ