PSI Recruitment Scam: ಜೈಲಿನಿಂದ ಹೊರಬಂದ ಬೆನ್ನಲ್ಲೇ ಜಾಮೀನು ಷರತ್ತು ಉಲ್ಲಂಘನೆ: ಕಿಂಗ್​ಪಿನ್​ ರುದ್ರಗೌಡ ಪಾಟೀಲ್​ ಮನೆಗೆ ಸಿಐಡಿ ಭೇಟಿ

545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಯಲ್ಲಿ ಹಗರಣಕ್ಕೆ ಸಂಬಂಧಿಸಿದಂತೆ ಕಿಂಗ್​ಪಿನ್​ ರುದ್ರಗೌಡ ಪಾಟೀಲ್​ ಮನೆಗೆ ಸಿಐಡಿ ಅಧಿಕಾರಿಗಳು ಭೇಟಿ ನೀಡಿದ್ದಾರೆ.

PSI Recruitment Scam: ಜೈಲಿನಿಂದ ಹೊರಬಂದ ಬೆನ್ನಲ್ಲೇ ಜಾಮೀನು ಷರತ್ತು ಉಲ್ಲಂಘನೆ: ಕಿಂಗ್​ಪಿನ್​ ರುದ್ರಗೌಡ ಪಾಟೀಲ್​ ಮನೆಗೆ ಸಿಐಡಿ ಭೇಟಿ
PSI Recruitment Scam (ಪ್ರಾತಿನಿಧಿಕ ಚಿತ್ರ)
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Dec 20, 2022 | 4:39 PM

ಕಲಬುರಗಿ: 545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಯಲ್ಲಿ ಹಗರಣಕ್ಕೆ (PSI Recruitment Scam) ಸಂಬಂಧಿಸಿದಂತೆ ಜಿಲ್ಲೆಯ ಅಕ್ಕಮಹಾದೇವಿ ಕಾಲೋನಿಯಲ್ಲಿರುವ ಕಿಂಗ್​ಪಿನ್​ ರುದ್ರಗೌಡ ಪಾಟೀಲ್​ ಮನೆಗೆ ಸಿಐಡಿ ಅಧಿಕಾರಿಗಳು ಭೇಟಿ ನೀಡಿದ್ದಾರೆ. 2 ದಿನಗಳ ಹಿಂದೆ ಷರತ್ತುಬದ್ಧ ಜಾಮೀನಿನ ಮೇಲೆ ರುದ್ರಗೌಡ ಪಾಟೀಲ್ ಹೊರಬಂದಿದ್ದರು. ಜೈಲಿನಿಂದ ಹೊರಬಂದ ಬೆನ್ನಲ್ಲೇ ಜಾಮೀನು ಷರತ್ತು ಉಲ್ಲಂಘನೆ ಮಾಡಲಾಗಿದೆ. ಹಾಗಾಗಿ ರುದ್ರಗೌಡ ಪಾಟೀಲ್​ ಮನೆಗೆ ಸಿಐಡಿ ಪೊಲೀಸರು ಭೇಟಿ ನೀಡಿದ್ದಾರೆ. ಜೊತೆಗೆ ರುದ್ರಗೌಡ ಪಾಟೀಲ್​ ಕುಟುಂಬಸ್ಥರಿಗೆ ನೋಟಿಸ್ ಜಾರಿಮಾಡಿದ್ದಾರೆ. ಕೋರ್ಟ್ ನಿಗದಿತ ವಿಳಾಸದ ಮನೆಯಲ್ಲಿರಬೇಕೆಂದು ಷರತ್ತು ವಿಧಿಸಿತ್ತು. ಕೋರ್ಟ್, ತನಿಖಾಧಿಕಾರಿಗೆ ನೀಡಿರುವ ಮೊಬೈಲ್​ ನಂಬರ್​ನಲ್ಲಿ ಲಭ್ಯವಾಗಿದೆ. ಜಾಮೀನಿನ ಮೇಲೆ ಹೊರಬಂದ ನಂತರ ಸಾಕ್ಷ್ಯನಾಶ ಮಾಡಬಾರದು. ಮೊಬೈಲ್ ನಂಬರ್, ವಿಳಾಸ ಬದಲಿಸಿದರೆ ಗಮನಕ್ಕೆ ತರಬೇಕು ಎಂದು ಕಲಬುರಗಿ ಹೈಕೋರ್ಟ್ ರುದ್ರಗೌಡ ಪಾಟೀಲ್​ಗೆ ಷರತ್ತು ವಿಧಿಸಿತ್ತು.

ಆದರೆ ತನಿಖಾಧಿಕಾರಿ ನೀಡಿದ್ದ ವಿಳಾಸಕ್ಕೆ ತೆರಳಿದ್ದಾಗ ಲಾಕ್ ಆಗಿತ್ತು. ರುದ್ರಗೌಡ ಪಾಟೀಲ್ ನೀಡಿದ್ದ ಮೊಬೈಲ್​ ನಂಬರ್ ಸ್ವಿಚ್​ ಆಫ್​ ಆಗಿತ್ತು. ನಿನ್ನೆ ಸಂಜೆ 4ಕ್ಕೆ ವಿಚಾರಣೆಗೆ ಹಾಜರಾಗಲು ತನಿಖಾಧಿಕಾರಿ ಸೂಚಿಸಿದ್ದು, ಆದರೆ ರುದ್ರಗೌಡ ಪಾಟೀಲ್ ವಿಚಾರಣೆಗೆ ಗೈರಾಗಿದ್ದರು. ಹಾಗಾಗಿ ಇಂದು ಅಕ್ಕಮಹಾದೇವಿ ಕಾಲೋನಿ ನಿವಾಸಕ್ಕೆ ಸಿಐಡಿ ಭೇಟಿ ನೀಡಿದ್ದರು.

ಇದನ್ನೂ ಓದಿ: PSI Scam Case: ಜಾಮೀನು ಪಡೆದು ಜೈಲಿನಿಂದ ಬಂದ ಮಹಾಂತೇಶ್ ಪಾಟೀಲ್​ಗೆ ಕಾಂಗ್ರೆಸ್ ನಾಯಕರಿಂದ ಸತ್ಕಾರ  

ಇಬ್ಬರು ಪ್ರಮುಖ ಆರೋಪಿಗಳಿಗೆ ಜಾಮೀನು ಮಂಜೂರು

545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಯಲ್ಲಿ ಹಗರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ಕಿಂಗ್ ಪಿನ್​​ ರುದ್ರಗೌಡ ಪಾಟೀಲ್ ಮತ್ತು ಮಹಾಂತೇಶ್ ಪಾಟೀಲ್​ಗೆ ಕಲಬುರಗಿ ಹೈಕೋರ್ಟ್​ ಪೀಠದಿಂದ ಜಾಮೀನು ಮಂಜೂರು ಮಾಡಲಾಗಿದೆ. ಜಿಲ್ಲೆಯ ಚೌಕ್ ಠಾಣೆಯಲ್ಲಿ ದಾಖಲಾಗಿದ್ದ ಕೇಸ್​ನಲ್ಲಿ ಜಾಮೀನು ನೀಡಲಾಗಿದೆ. ಪ್ರಕರಣದಲ್ಲಿ ಕಿಂಗ್ ಪಿನ್ ರುದ್ರಗೌಡ ಪಾಟೀಲ್​ನ್ನು ಈ ಹಿಂದೆ ಅರೆಸ್ಟ್ ಮಾಡಲಾಗಿತ್ತು. ಸಹಚರರಿಬ್ಬರಿಗ ರುದ್ರಗೌಡ ಜೊತೆ ಮಧ್ಯವರ್ತಿಗಳಾಗಿ ಕೆಲಸ ಮಾಡುತ್ತಿದ್ದ. ಬಂಧಿತ ಆರೋಪಿಗಳು ಬ್ಲೂಟೂತ್ಗಳನ್ನು ಸರಬರಾಜು ಮಾಡುತ್ತಿದ್ದರು. ಜೊತೆಗೆ, ರುದ್ರಗೌಡ ಪಾಟೀಲ್ ಜೊತೆ ಸೇರಿ ಅಭ್ಯರ್ಥಿಗಳ ಜೊತೆ ಡೀಲ್ ಮಾಡುತ್ತಿದ್ದರು. ಅಕ್ರಮವಾಗಿ ಪರೀಕ್ಷೆ ಬರೆಯಲು ಸಿದ್ದರಿದ್ದವರನ್ನು ಹುಡುಕಿ ರುದ್ರಗೌಡ ಪಾಟೀಲ್​ಗೆ ಭೇಟಿ ಮಾಡಿಸುತ್ತಿದ್ದರು.

ಇದನ್ನೂ ಓದಿ: PSI Recruitment Scam: ಅಮೃತ್ ಪಾಲ್ ವಿರುದ್ಧ ಪ್ರಾಸಿಕ್ಯೂಷನ್​ಗೆ ಸರ್ಕಾರ ಅನುಮತಿ

ಎಸ್​ಐ ಹಗರಣದ ಪ್ರಮುಖ ಆರೋಪಿಗೆ ಜಾಮೀನು

ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಆರೋಪಿಗೆ ಹಾಗೂ ಪರೀಕ್ಷೆಯಲ್ಲಿ ಮೊದಲ ರ‍್ಯಾಂಕ್ ಪಡೆದ ಅಭ್ಯರ್ಥಿಗೆ ನ್ಯಾಯಾಲಯವು ಇತ್ತೀಚೆಗೆ ಜಾಮೀನು ಮಂಜೂರು ಮಾಡಿದೆ. ಪಿಎಸ್​ಐ ಹಗರಣದ ಎ1 ಜಾಗೃತ್ ಹಾಗೂ ಮಹಿಳಾ ಕೋಟಾದಲ್ಲಿ ಪ್ರಥಮ ರ‍್ಯಾಂಕ್‌ ಪಡೆದಿದ್ದ ರಚನಾಗೆ ಜಾಮೀನು ಸಿಕ್ಕಿದೆ. ಆರೋಪಿಗಳ ಪರ ವಕೀಲ ಶ್ಯಾಮ್​ಸುಂದರ್​ ಅವರು ವಾದ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:38 pm, Tue, 20 December 22

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ