AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI Scam: ಪಿಎಸ್​ಐ ನೇಮಕಾತಿ ಅಕ್ರಮ -ಜ್ಯೋತಿ ಅರೆಸ್ಟ್, ಬಂಧಿತರ ಸಂಖ್ಯೆ 17, ಕಿಂಗ್​​ಪಿನ್​ ರುದ್ರಗೌಡನ ಆರೋಗ್ಯ ಏರುಪೇರು

ಪಿಎಸ್​ಐ ಹುದ್ದೆಗಳಿಗೆ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಸಿಐಡಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಈ ಮಧ್ಯೆ ಕಿಂಗ್​​ಪಿನ್​ ರುದ್ರಗೌಡ ಪಾಟೀಲನ​​​​​​​ ಆರೋಗ್ಯ ಏರುಪೇರಾಗಿದೆ. ಸಿಐಡಿ ವಿಚಾರಣೆ ವೇಳೆ ವಾಂತಿ ಮಾಡಿಕೊಂಡ ರುದ್ರಗೌಡನನ್ನು ಜಿಮ್ಸ್​ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ.

PSI Scam: ಪಿಎಸ್​ಐ ನೇಮಕಾತಿ ಅಕ್ರಮ -ಜ್ಯೋತಿ ಅರೆಸ್ಟ್, ಬಂಧಿತರ ಸಂಖ್ಯೆ 17, ಕಿಂಗ್​​ಪಿನ್​ ರುದ್ರಗೌಡನ ಆರೋಗ್ಯ ಏರುಪೇರು
ಸಾಂಕೇತಿಕ ಚಿತ್ರ
TV9 Web
| Edited By: ಸಾಧು ಶ್ರೀನಾಥ್​|

Updated on:Apr 28, 2022 | 7:53 PM

Share

ಕಲಬರುಗಿ: 545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಸಿಐಡಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಈ ಮಧ್ಯೆ ಕಿಂಗ್​​ಪಿನ್​ ರುದ್ರಗೌಡ ಪಾಟೀಲನ​​​​​​​ ಆರೋಗ್ಯ ಏರುಪೇರಾಗಿದೆ. ಸಿಐಡಿ ವಿಚಾರಣೆ ವೇಳೆ ವಾಂತಿ ಮಾಡಿಕೊಂಡ ರುದ್ರಗೌಡನನ್ನು (kingpin rudragowda patil health) ಜಿಮ್ಸ್​ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ. ಇಂದು ಬಂಧನಕ್ಕೀಡಾದ ಜ್ಯೋತಿ ಪಾಟೀಲ್, ಶಹಬಾದ್ ನಗರಸಭೆಯಲ್ಲಿ SDA ಆಗಿದ್ದಾಳೆ. ಬೆಂಗಳೂರಿನ ಆರ್‌ಡಿಪಿಆರ್‌ನಲ್ಲಿ ಕೆಲಸ ಮಾಡುತ್ತಿದ್ದ ಜ್ಯೋತಿ ಎರಡು ತಿಂಗಳ ಹಿಂದಷ್ಟೇ ಶಹಬಾದ್ ನಗರಸಭೆಗೆ ವರ್ಗಾವಣೆಯಾಗಿದ್ದಾಳೆ. ವರ್ಗಾವಣೆ ಬಳಿಕ ಜ್ಯೋತಿ, ಕಲಬರುಗಿಯಲ್ಲಿ ವಾಸವಿದ್ದಾಳೆ (PSI Recruitment Scam).

ಪರಾರಿಯಾಗಿರುವ ಆರೋಪಿ ಅಭ್ಯರ್ಥಿ ಶಾಂತಿಬಾಯಿ! ಕಲಬರುಗಿಯಲ್ಲಿ ವಾಸವಿದ್ದ ಜ್ಯೋತಿ ಪಾಟೀಲ್ ಎಂಬ ಆರೋಪಿಯನ್ನು ಬಂಧಿಸುವ ಮೂಲಕ PSI ಅಕ್ರಮ ನೇಮಕಾತಿ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 17ಕ್ಕೆ ಏರಿದೆ. ಇದರೊಂದಿಗೆ ಪ್ರಕರಣದಲ್ಲಿ ಮೊದಲ ಬಾರಿಗೆ ಓರ್ವ ಮಹಿಳೆಯನ್ನು ಬಂಧಿಸಿದಂತಾಗಿದೆ. ಆದರೆ ಮತ್ತೊಬ್ಬ ಹೈ ಪ್ರೊಫೈಲ್ ದಿವ್ಯಾ ಹಾಗರಗಿ ಸಿಐಡಿ ಪೊಲೀಸರಿಗೆ ಇನ್ನೂ ಚಳ್ಳೆಹಣ್ಣುಗಳನ್ನು ಢಾಳಾಗಿ ತಿನ್ನಿಸುತ್ತುಲೇ ಇದ್ದಾಳೆ.

ಅಭ್ಯರ್ಥಿಯೊಬ್ಬಳನ್ನು ಕಿಂಗ್‌ಪಿನ್‌ ಜೊತೆ ಡೀಲ್ ಮಾಡಿಸಿದ್ದ ಆರೋಪ ಜ್ಯೋತಿ ಮೇಲಿದೆ. ಜ್ಯೋತಿ, ಅಭ್ಯರ್ಥಿ ಶಾಂತಿಬಾಯಿಯನ್ನು ಕಿಂಗ್ ಪಿನ್ ಮಂಜುನಾಥ ಮೇಳಕುಂದಿಗೆ ಪರಿಚಯಿಸಿದ್ದಳು. ಗಮನಾರ್ಹ ಸಂಗತಿಯೆಂದರೆ ಅಭ್ಯರ್ಥಿ ಶಾಂತಿಬಾಯಿ ಇದೇ ಪಿಎಸ್‌ಐ ಪರೀಕ್ಷೆ ಬರೆದು, ಆಯ್ಕೆಯಾಗಿದ್ದಾಳೆ! ಆದರೆ ಆರೋಪಿ ಅಭ್ಯರ್ಥಿ ಶಾಂತಿಬಾಯಿ ತಲೆಮರೆಸಿಕೊಂಡಿದ್ದಾಳೆ.

ರುದ್ರಗೌಡನಿಗೆ ವಾಂತಿ, ನಿತ್ರಾಣ: 545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣದ ಕಿಂಗ್​​ಪಿನ್ ಎನ್ನಲಾದ ರುದ್ರಗೌಡ ಪಾಟೀಲ್​​​ನ ​ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ. ಸಿಐಡಿ ವಿಚಾರಣೆ ವೇಳೆ ವಾಂತಿ ಮಾಡಿಕೊಂಡಿದ್ದಾನೆ, ರುದ್ರಗೌಡ. ರುದ್ರಗೌಡನನ್ನು ತಕ್ಷಣ ಕಲಬುರಗಿ ಜಿಮ್ಸ್​ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವಾಂತಿ ಬಳಿಕ ತೀವ್ರ ನಿತ್ರಾಣಗೊಂಡಿರುವ ರುದ್ರಗೌಡನಿಗೆ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವನು ಸಿಐಡಿ ಕಸ್ಟಡಿಯಲ್ಲಿದ್ದಾನೆ.

Also Read: Acid Attack: ಆ್ಯಸಿಡ್ ದಾಳಿಗೆ ಪ್ರೇಮ ವೈಫಲ್ಯ, ಸೆಕ್ಸ್ ನಿರಾಕರಣೆ ಕಾರಣ -ಸುಪ್ರೀಂ ಕೋರ್ಟ್ ಏನು ಹೇಳುತ್ತದೆ?

Also Read: JDS ಅಧಿಕಾರಕ್ಕೆ ಬಾರದಿದ್ದರೆ ವಿಸರ್ಜನೆ ಮಾಡುವ ಮಾತನ್ನು ಒತ್ತಿ ಒತ್ತಿ ಹೇಳಿದ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ

Published On - 7:51 pm, Thu, 28 April 22

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್