AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Hagaragi: ದಿವ್ಯಾ ದಂಪತಿಗೆ ಜೈಲುಭಾಗ್ಯ, ಜಡ್ಜ್​​ ಮುಂದೆ ಸಿಐಡಿ ಅಧಿಕಾರಿ ವಿರುದ್ಧ ಆರೋಪಗಳ ಸುರಿಮಳೆ ಮಾಡಿದ ಇತರೆ ಆರೋಪಿಗಳು!

PSI Recruitment scam: ದಿವ್ಯಾ ಹಾಗರಗಿಯನ್ನು ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಪಿಎಸ್​ಐ ಪರೀಕ್ಷಾ ಅಕ್ರಮ ಆರೋಪದಡಿ ದಿವ್ಯಾ ಪತಿ ರಾಜೇಶ್ ಈಗಾಗಲೇ ಕಲಬುರಗಿ ಜೈಲು ಸೇರಿದ್ದಾನೆ. ಹಾಗಾಗಿ ಪತಿ-ಪತ್ನಿ ಇಬ್ಬರೂ ಜೈಲಲ್ಲಿರಬೇಕಾದ ಸ್ಥಿತಿ ಬಂದೊದಗಿದೆ.

Divya Hagaragi: ದಿವ್ಯಾ ದಂಪತಿಗೆ ಜೈಲುಭಾಗ್ಯ, ಜಡ್ಜ್​​ ಮುಂದೆ ಸಿಐಡಿ ಅಧಿಕಾರಿ ವಿರುದ್ಧ ಆರೋಪಗಳ ಸುರಿಮಳೆ ಮಾಡಿದ ಇತರೆ ಆರೋಪಿಗಳು!
ದಿವ್ಯಾ ದಂಪತಿಗೆ ಜೈಲುಭಾಗ್ಯ, ಜಡ್ಜ್​​ ಮುಂದೆ ಸಿಐಡಿ ಅಧಿಕಾರಿ ವಿರುದ್ಧ ಆರೋಪಗಳ ಸುರಿಮಳೆ ಮಾಡಿದ ಇತರೆ ಆರೋಪಿಗಳು!
TV9 Web
| Edited By: ಸಾಧು ಶ್ರೀನಾಥ್​|

Updated on:May 09, 2022 | 8:26 PM

Share

ಬೆಂಗಳೂರು/ ಕಲಬುರ್ಗಿ: 545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿಯಲ್ಲಿ (PSI Recruitment scam) ಅಕ್ರಮ ಪ್ರಕರಣದಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್​ ಠಾಣೆ ಪೊಲೀಸರು ಬಂಧಿಸಿರುವ ಬಂಧಿತ 11 ಅಭ್ಯರ್ಥಿಗಳಿಗೆ 14 ದಿನ ನ್ಯಾಯಾಂಗ ಬಂಧನ ನೀಡಲಾಗಿದೆ. ಪ್ರಕರಣದ ಇಬ್ಬರು ಆರೋಪಿಗಳಿಗೆ 4 ದಿನ ಸಿಐಡಿ ಕಸ್ಟಡಿ ನೀಡಿ ಬೆಂಗಳೂರಿನ 19ನೇ ಎಸಿಎಂಎಂ ನ್ಯಾಯಾಲಯ​ ಆದೇಶ ಮಾಡಿದೆ. ಈ ಮಧ್ಯೆ, ಬೆಂಗಳೂರಿನ ಈ ಆರೋಪಿಗಳು ಜಡ್ಜ್​​ ಮುಂದೆ ತನಿಖಾಧಿಕಾರಿಗಳ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ. ಸಿಐಡಿ ಕಸ್ಟಡಿ ಅಂತ್ಯವಾದ ಹಿನ್ನೆಲೆ ಆರೋಪಿಗಳನ್ನು ಇಂದು 19 ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಖಾಲಿ ಪೇಪರ್​ ಮೇಲೆ ಸಿಐಡಿ ಸಹಿ ಪಡೆದಿದ್ದಾಗಿ ಆರೋಪ ಮಾಡಿರುವ ಆರೋಪಿಗಳು ವಿಚಾರಣೆಯ ವೇಳೆ ಅವಾಚ್ಯವಾಗಿ ತಮ್ಮನ್ನು ನಿಂದಿಸಿರುವುದಾಗಿ ಜಡ್ಜ್​ ಮುಂದೆ ಅಲವತ್ತುಕೊಂಡಿದ್ದಾರೆ. OMR ಮತ್ತು ಕಾರ್ಬನ್ ಕಾಪಿಯಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್​ ಠಾಣೆ ಪೊಲೀಸರು ಇವರನ್ನು ಬಂಧಿಸಿದ್ದರು.

ದಿವ್ಯಾ-ರಾಜೇಶ್ ಹಾಗರಗಿ ದಂಪತಿಗೆ ಜೈಲುಭಾಗ್ಯ: ಇನ್ನು ಅತ್ತ ಕಲಬುರಗಿಯಲ್ಲಿ ಬಿಜೆಪಿ ನಾಯಕಿ, ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿಯನ್ನು (Kalaburgi Divya Hagaragi) ನ್ಯಾಯಾಂಗ ವಶಕ್ಕೆ ನೀಡಿ ಕಲಬುರಗಿ 3ನೇ ಜೆಎಂಎಫ್​ಸಿ ನ್ಯಾಯಾಲಯ ಆದೇಶಿಸಿದೆ. ದಿವ್ಯಾ ಹಾಗರಗಿ 11 ದಿನಗಳ ಸಿಐಡಿ ಕಸ್ಟಡಿ ಇಂದಿಗೆ ಅಂತ್ಯವಾದ ಬಳಿಕ, ಜಡ್ಜ್​​​ ಮುಂದೆ ಹಾಜರುಪಡಿಸಿದ್ದ ಸಿಐಡಿ ತನಿಖಾಧಿಕಾರಿಗಳು ದಿವ್ಯಾಳನ್ನ ಹಾರುಪಡಿಸಿದ್ದರು. ತತ್ಫಲವಾಗಿ ದಿವ್ಯಾ ಹಾಗರಗಿಯನ್ನು ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಪಿಎಸ್​ಐ ಪರೀಕ್ಷಾ ಅಕ್ರಮ ಆರೋಪದಡಿ ದಿವ್ಯಾ ಪತಿ ರಾಜೇಶ್ ಈಗಾಗಲೇ (ಏಪ್ರಿಲ್ 18 ರಿಂದ) ಕಲಬುರಗಿ ಜೈಲು ಸೇರಿದ್ದಾನೆ. ಹಾಗಾಗಿ ಪತಿ-ಪತ್ನಿ ಇಬ್ಬರೂ ಜೈಲಲ್ಲಿರಬೇಕಾದ ಸ್ಥಿತಿ ಬಂದೊದಗಿದೆ.

ಪ್ರಕರಣದ ಕಿಂಗ್​ಪಿನ್ ‘ಕೈ’​ ಶಾಸಕ ಪ್ರಿಯಾಂಕ್​ ಖರ್ಗೆ ಬಂಟ: 545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಶಿವಮೊಗ್ಗದಲ್ಲಿ ಗೃಹ ಖಾತೆ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಪ್ರಕರಣದ ಕಿಂಗ್​ಪಿನ್ ‘ಕೈ’​ ಶಾಸಕ ಪ್ರಿಯಾಂಕ್​ ಖರ್ಗೆ ಬಂಟನಾಗಿದ್ದಾನೆ. ಈಗಾಗಲೇ ಆತನನ್ನ ಸಿಐಡಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಪರೀಕ್ಷಾ ಅಕ್ರಮದಲ್ಲಿ ಅನೇಕ ಅಧಿಕಾರಿಗಳು ಭಾಗಿ ಆಗಿದ್ದಾರೆ. ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳನ್ನು ಬಂಧಿಸಲಾಗುತ್ತಿದೆ. ಇದು ಪ್ರಾಮಾಣಿಕತೆ ತನಿಖೆಯ ಸಂಕೇತವಾಗಿದೆ. ಶೀಘ್ರದಲ್ಲೇ ತನಿಖೆ ಮುಗಿಸಿ ಮರು ಪರೀಕ್ಷೆ ನಡೆಸಲಾಗುತ್ತದೆ. ಮತ್ತೆ ಈ ರೀತಿ ಆಗದಂತೆ ಅಚ್ಚುಕಟ್ಟಾಗಿ ಪರೀಕ್ಷೆ ನಡೆಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: PSI Recruitment Scam: ಆರೋಪಿ ದಿವ್ಯಾ ಹಾಗರಗಿ ಕಾಣಿಸಿಕೊಂಡರು ಬಿಜೆಪಿ ಟ್ವೀಟ್​​ನಲ್ಲಿ! ಜೊತೆಗೆ ಯಾರಿದ್ದಾರೆ ನೋಡಿ!

ಇದನ್ನೂ ಓದಿ: ಅನ್ನ ಭಾಗ್ಯ, ತಾಳಿ ಭಾಗ್ಯ ಜನರನ್ನ ದರಿದ್ರ ಮಾಡುತ್ತದೆ; ಅದನ್ನ ಬಂದ್ ಮಾಡಿ: ಸಿಎಂ ಬೊಮ್ಮಾಯಿಗೆ ಶಾಸಕ ಯತ್ನಾಳ್ ಒತ್ತಾಯ

Published On - 8:21 pm, Mon, 9 May 22

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ