AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Hagaragi: ದಿವ್ಯಾ ದಂಪತಿಗೆ ಜೈಲುಭಾಗ್ಯ, ಜಡ್ಜ್​​ ಮುಂದೆ ಸಿಐಡಿ ಅಧಿಕಾರಿ ವಿರುದ್ಧ ಆರೋಪಗಳ ಸುರಿಮಳೆ ಮಾಡಿದ ಇತರೆ ಆರೋಪಿಗಳು!

PSI Recruitment scam: ದಿವ್ಯಾ ಹಾಗರಗಿಯನ್ನು ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಪಿಎಸ್​ಐ ಪರೀಕ್ಷಾ ಅಕ್ರಮ ಆರೋಪದಡಿ ದಿವ್ಯಾ ಪತಿ ರಾಜೇಶ್ ಈಗಾಗಲೇ ಕಲಬುರಗಿ ಜೈಲು ಸೇರಿದ್ದಾನೆ. ಹಾಗಾಗಿ ಪತಿ-ಪತ್ನಿ ಇಬ್ಬರೂ ಜೈಲಲ್ಲಿರಬೇಕಾದ ಸ್ಥಿತಿ ಬಂದೊದಗಿದೆ.

Divya Hagaragi: ದಿವ್ಯಾ ದಂಪತಿಗೆ ಜೈಲುಭಾಗ್ಯ, ಜಡ್ಜ್​​ ಮುಂದೆ ಸಿಐಡಿ ಅಧಿಕಾರಿ ವಿರುದ್ಧ ಆರೋಪಗಳ ಸುರಿಮಳೆ ಮಾಡಿದ ಇತರೆ ಆರೋಪಿಗಳು!
ದಿವ್ಯಾ ದಂಪತಿಗೆ ಜೈಲುಭಾಗ್ಯ, ಜಡ್ಜ್​​ ಮುಂದೆ ಸಿಐಡಿ ಅಧಿಕಾರಿ ವಿರುದ್ಧ ಆರೋಪಗಳ ಸುರಿಮಳೆ ಮಾಡಿದ ಇತರೆ ಆರೋಪಿಗಳು!
TV9 Web
| Edited By: |

Updated on:May 09, 2022 | 8:26 PM

Share

ಬೆಂಗಳೂರು/ ಕಲಬುರ್ಗಿ: 545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿಯಲ್ಲಿ (PSI Recruitment scam) ಅಕ್ರಮ ಪ್ರಕರಣದಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್​ ಠಾಣೆ ಪೊಲೀಸರು ಬಂಧಿಸಿರುವ ಬಂಧಿತ 11 ಅಭ್ಯರ್ಥಿಗಳಿಗೆ 14 ದಿನ ನ್ಯಾಯಾಂಗ ಬಂಧನ ನೀಡಲಾಗಿದೆ. ಪ್ರಕರಣದ ಇಬ್ಬರು ಆರೋಪಿಗಳಿಗೆ 4 ದಿನ ಸಿಐಡಿ ಕಸ್ಟಡಿ ನೀಡಿ ಬೆಂಗಳೂರಿನ 19ನೇ ಎಸಿಎಂಎಂ ನ್ಯಾಯಾಲಯ​ ಆದೇಶ ಮಾಡಿದೆ. ಈ ಮಧ್ಯೆ, ಬೆಂಗಳೂರಿನ ಈ ಆರೋಪಿಗಳು ಜಡ್ಜ್​​ ಮುಂದೆ ತನಿಖಾಧಿಕಾರಿಗಳ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ. ಸಿಐಡಿ ಕಸ್ಟಡಿ ಅಂತ್ಯವಾದ ಹಿನ್ನೆಲೆ ಆರೋಪಿಗಳನ್ನು ಇಂದು 19 ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಖಾಲಿ ಪೇಪರ್​ ಮೇಲೆ ಸಿಐಡಿ ಸಹಿ ಪಡೆದಿದ್ದಾಗಿ ಆರೋಪ ಮಾಡಿರುವ ಆರೋಪಿಗಳು ವಿಚಾರಣೆಯ ವೇಳೆ ಅವಾಚ್ಯವಾಗಿ ತಮ್ಮನ್ನು ನಿಂದಿಸಿರುವುದಾಗಿ ಜಡ್ಜ್​ ಮುಂದೆ ಅಲವತ್ತುಕೊಂಡಿದ್ದಾರೆ. OMR ಮತ್ತು ಕಾರ್ಬನ್ ಕಾಪಿಯಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್​ ಠಾಣೆ ಪೊಲೀಸರು ಇವರನ್ನು ಬಂಧಿಸಿದ್ದರು.

ದಿವ್ಯಾ-ರಾಜೇಶ್ ಹಾಗರಗಿ ದಂಪತಿಗೆ ಜೈಲುಭಾಗ್ಯ: ಇನ್ನು ಅತ್ತ ಕಲಬುರಗಿಯಲ್ಲಿ ಬಿಜೆಪಿ ನಾಯಕಿ, ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿಯನ್ನು (Kalaburgi Divya Hagaragi) ನ್ಯಾಯಾಂಗ ವಶಕ್ಕೆ ನೀಡಿ ಕಲಬುರಗಿ 3ನೇ ಜೆಎಂಎಫ್​ಸಿ ನ್ಯಾಯಾಲಯ ಆದೇಶಿಸಿದೆ. ದಿವ್ಯಾ ಹಾಗರಗಿ 11 ದಿನಗಳ ಸಿಐಡಿ ಕಸ್ಟಡಿ ಇಂದಿಗೆ ಅಂತ್ಯವಾದ ಬಳಿಕ, ಜಡ್ಜ್​​​ ಮುಂದೆ ಹಾಜರುಪಡಿಸಿದ್ದ ಸಿಐಡಿ ತನಿಖಾಧಿಕಾರಿಗಳು ದಿವ್ಯಾಳನ್ನ ಹಾರುಪಡಿಸಿದ್ದರು. ತತ್ಫಲವಾಗಿ ದಿವ್ಯಾ ಹಾಗರಗಿಯನ್ನು ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಪಿಎಸ್​ಐ ಪರೀಕ್ಷಾ ಅಕ್ರಮ ಆರೋಪದಡಿ ದಿವ್ಯಾ ಪತಿ ರಾಜೇಶ್ ಈಗಾಗಲೇ (ಏಪ್ರಿಲ್ 18 ರಿಂದ) ಕಲಬುರಗಿ ಜೈಲು ಸೇರಿದ್ದಾನೆ. ಹಾಗಾಗಿ ಪತಿ-ಪತ್ನಿ ಇಬ್ಬರೂ ಜೈಲಲ್ಲಿರಬೇಕಾದ ಸ್ಥಿತಿ ಬಂದೊದಗಿದೆ.

ಪ್ರಕರಣದ ಕಿಂಗ್​ಪಿನ್ ‘ಕೈ’​ ಶಾಸಕ ಪ್ರಿಯಾಂಕ್​ ಖರ್ಗೆ ಬಂಟ: 545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಶಿವಮೊಗ್ಗದಲ್ಲಿ ಗೃಹ ಖಾತೆ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಪ್ರಕರಣದ ಕಿಂಗ್​ಪಿನ್ ‘ಕೈ’​ ಶಾಸಕ ಪ್ರಿಯಾಂಕ್​ ಖರ್ಗೆ ಬಂಟನಾಗಿದ್ದಾನೆ. ಈಗಾಗಲೇ ಆತನನ್ನ ಸಿಐಡಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಪರೀಕ್ಷಾ ಅಕ್ರಮದಲ್ಲಿ ಅನೇಕ ಅಧಿಕಾರಿಗಳು ಭಾಗಿ ಆಗಿದ್ದಾರೆ. ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳನ್ನು ಬಂಧಿಸಲಾಗುತ್ತಿದೆ. ಇದು ಪ್ರಾಮಾಣಿಕತೆ ತನಿಖೆಯ ಸಂಕೇತವಾಗಿದೆ. ಶೀಘ್ರದಲ್ಲೇ ತನಿಖೆ ಮುಗಿಸಿ ಮರು ಪರೀಕ್ಷೆ ನಡೆಸಲಾಗುತ್ತದೆ. ಮತ್ತೆ ಈ ರೀತಿ ಆಗದಂತೆ ಅಚ್ಚುಕಟ್ಟಾಗಿ ಪರೀಕ್ಷೆ ನಡೆಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: PSI Recruitment Scam: ಆರೋಪಿ ದಿವ್ಯಾ ಹಾಗರಗಿ ಕಾಣಿಸಿಕೊಂಡರು ಬಿಜೆಪಿ ಟ್ವೀಟ್​​ನಲ್ಲಿ! ಜೊತೆಗೆ ಯಾರಿದ್ದಾರೆ ನೋಡಿ!

ಇದನ್ನೂ ಓದಿ: ಅನ್ನ ಭಾಗ್ಯ, ತಾಳಿ ಭಾಗ್ಯ ಜನರನ್ನ ದರಿದ್ರ ಮಾಡುತ್ತದೆ; ಅದನ್ನ ಬಂದ್ ಮಾಡಿ: ಸಿಎಂ ಬೊಮ್ಮಾಯಿಗೆ ಶಾಸಕ ಯತ್ನಾಳ್ ಒತ್ತಾಯ

Published On - 8:21 pm, Mon, 9 May 22

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ