AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI Recruitment Scam: ಕಿಂಗ್​ಪಿನ್ ರುದ್ರಗೌಡ ಪಾಟೀಲ್ ಕಲಬುರಗಿ ಜಿಲ್ಲಾ ಕೋರ್ಟ್​ಗೆ ಶರಣು​​: 14 ದಿನ ನ್ಯಾಯಾಂಗ ಬಂಧನ

ಪಿಎಸ್​ಐ ನೇಮಕಾತಿ ಹಗರಣದ ಕಿಂಗ್​ಪಿನ್​ ರುದ್ರಗೌಡ ಪಾಟೀಲ್ ಕಲಬುರಗಿ ಜಿಲ್ಲಾ ಕೋರ್ಟ್​ಗೆ ಶರಣಾಗಿದ್ದಾರೆ

PSI Recruitment Scam: ಕಿಂಗ್​ಪಿನ್ ರುದ್ರಗೌಡ ಪಾಟೀಲ್ ಕಲಬುರಗಿ ಜಿಲ್ಲಾ ಕೋರ್ಟ್​ಗೆ ಶರಣು​​: 14 ದಿನ ನ್ಯಾಯಾಂಗ ಬಂಧನ
ರುದ್ರಗೌಡ ಪಾಟೀಲ್Image Credit source: pipanews.com
TV9 Web
| Edited By: |

Updated on:Jan 23, 2023 | 6:13 PM

Share

ಕಲಬುರಗಿ: ಪಿಎಸ್​ಐ ನೇಮಕಾತಿ ಹಗರಣದ ಕಿಂಗ್​ಪಿನ್​ ರುದ್ರಗೌಡ ಪಾಟೀಲ್ ಕಲಬುರಗಿ ಜಿಲ್ಲಾ ಕೋರ್ಟ್​ಗೆ ಶರಣಾಗಿದ್ದಾರೆ. ರುದ್ರಗೌಡ ಪಾಟೀಲ್ ವಿರುದ್ಧ ಅಶೋಕನಗರ ಠಾಣೆಯಲ್ಲಿ ಜ.19ರಂದು ಸಿಐಡಿ PSI ಆನಂದ್​ ಠಾಣೆಯಲ್ಲಿ ಕೇಸ್​ ದಾಖಲಿಸಿದ್ದರು. ಸಿಐಡಿ ಪೊಲೀಸರು ವಶಕ್ಕೆ ಪಡೆಯಲು ತೆರಳಿದ್ದಾಗ ಪಾಟೀಲ್​ ಪರಾರಿ ಆಗಿದ್ದ. ಕಲಬುರಗಿಯ ಅಕ್ಕಮಹಾದೇವಿ ಕಾಲೋನಿ ನಿವಾಸದಿಂದ ಕಾಲ್ಕಿತ್ತಿದ್ದ. ಇಂದು ಕಲಬುರಗಿ ಕೋರ್ಟ್​ಗ ರುದ್ರಗೌಡ ಪಾಟೀಲ ಶರಣಾದ್ದಾನೆ. 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಕಲಬುರಗಿ 5ನೇ ಜೆಎಂಎಪ್​ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ರುದ್ರುಗೌಡ ಪಾಟೀಲ್​ನನ್ನು ಫೆ.6 ರವರೆಗೆ ನ್ಯಾಯಾಂಗ ವಶಕ್ಕೆ ನ್ಯಾಯಾಲಯ ಒಪ್ಪಿಸಿದೆ. ನ್ಯಾಯಮೂರ್ತಿ ದಸ್ತಗೀರಸಾಬ್ ಅಬ್ದುಲ್ ರಜಾಕ್ ಮುಲ್ಲಾ ಆದೇಶಿಸಿದ್ದಾರೆ.

ವಿಡಿಯೋ ವೈರಲ್​

ಇನ್ನು ಇತ್ತೀಚೆಗೆ ಪಿಎಸ್ಐ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರುದ್ರಗೌಡ ಪಾಟೀಲ್ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದರು. ಜ.20 ಸಿಐಡಿ ಅಧಿಕಾರಿಗಳು ಆರೋಪಿ ರುದ್ರಗೌಡ ಪಾಟೀಲ್ ಬಂಧಿಸಲು ಬಂದಿದ್ದರು. ಈ ವೇಳೆ ಅಧಿಕಾರಿಗಳನ್ನು ತಳ್ಳಿ ರುದ್ರಗೌಡ ಪರಾರಿಯಾಗಿದ್ದ. ಸದ್ಯ ಈಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ರಿಲೀಸ್ ಮಾಡಲಾಗಿತ್ತು.

ಇದನ್ನೂ ಓದಿ: PSI Scam Case: ಜಾಮೀನು ಪಡೆದು ಜೈಲಿನಿಂದ ಬಂದ ಮಹಾಂತೇಶ್ ಪಾಟೀಲ್​ಗೆ ಕಾಂಗ್ರೆಸ್ ನಾಯಕರಿಂದ ಸತ್ಕಾರ

ಬಿಡುಗಡೆಯಾದ ವಿಡಿಯೋದಲ್ಲೇನಿದೆ?

ಪರಾರಿಯಾದ ಬಳಿಕ ರುದ್ರಗೌಡ ಪಾಟೀಲ್ ಬಗ್ಗೆ ಅನೇಕ ಮಾತುಗಳು ಕೇಳಿ ಬಂದಿದ್ದವು. ಈ ಬೆನ್ನಲ್ಲೆ ಇಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಜನ ಭಯಸಿದ್ರೆ ಅಫಜಲಪುರ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಸ್ಪರ್ಧಿಸುತ್ತೇನೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿಯೇ ಸ್ಪರ್ದೆ ಮಾಡ್ತೇನೆ. ನಾನು ಎಲ್ಲಿಯೂ ಓಡಿ ಹೋಗಿಲ್ಲಾ, ಇಲ್ಲೇ ಇದ್ದೇನೆ. ಇಡಿ ಅಧಿಕಾರಿಗಳು ಬಂದಾಗ ಅವರ ವಿಚಾರಣೆ ಎದುರಿಸಿದ್ದೇನೆ. ಇಡಿ ಅಧಿಕಾರಿಗಳು ಬಂದು ಹೋದ ಮೇಲೆ ನಾನು ಹೊರಗೆ ಹೋಗಿದ್ದೆ ಎಂದು ಹೇಳಲಾಗಿತ್ತು.

ರುದ್ರಗೌಡ ಪಾಟೀಲ್ ಮನೆ ಮೇಲೆ ಇಡಿ ದಾಳಿ

ರುದ್ರಗೌಡ ಪಾಟೀಲ್ ಮತ್ತು ಅವರ ಸಹೋದರ ಮಹಾಂತೇಶ್ ಪಾಟೀಲ್, ಕಾಶಿನಾಥ್ ಚಿಲ್, ಮಂಜುನಾಥ ಮೇಳಕುಂದಿ, ಸೇರಿ ಐವರ ಮನೆ ಮೇಲೆ ಜ. 19 ದಾಳಿ ಮಾಡಿದ್ದು, ತಡರಾತ್ರಿವರೆಗೆ ಶೋಧ ಇಡಿ ಅಧಿಕಾರಿಗಳ ತಂಡ ಶೋಧ ನಡೆಸಿದ್ದರು.  ಬೆಂಗಳೂರು ಮತ್ತು ಹೈದ್ರಾಬಾದ್​ನಿಂದ ಬಂದಿದ್ದ 25 ಇಡಿ ಅಧಿಕಾರಿಗಳ ತಂಡ ಹಣದ ಮೂಲದ ಬಗ್ಗೆ ಅಧಿಕಾರಿಗಳು ಮಾಹಿತಿ ಪಡೆದಿದ್ದಾರೆ. ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಕೋಟ್ಯಂತರ ರೂ. ಅವ್ಯವಹಾರದ ಬಗ್ಗೆ ಸಿಐಡಿ ಇಡಿ ಗಮನಕ್ಕೆ ತಂದಿತ್ತು. ಆ ಬೆನ್ನಲೆ ಆರೋಪಿಗಳಿಗೆ ಜಾಮೀನು ಸಿಗುವವರೆಗೂ ಕಾದಿದ್ದ ಇಡಿ ಅಧಿಕಾರಿಗಳ ನಿನ್ನೆ ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ: PSI Recruitment Scam: ಜೈಲಿನಿಂದ ಹೊರಬಂದ ಬೆನ್ನಲ್ಲೇ ಜಾಮೀನು ಷರತ್ತು ಉಲ್ಲಂಘನೆ: ಕಿಂಗ್​ಪಿನ್​ ರುದ್ರಗೌಡ ಪಾಟೀಲ್​ ಮನೆಗೆ ಸಿಐಡಿ ಭೇಟಿ

ದಿವ್ಯಾ ಹಾಗರಗಿಗೆ ಜಾಮಿನು: ಪಟಾಕಿ ಹೊಡೆದು ಸಂಭ್ರಮಿಸಿದ ಅಭಿಮಾನಿಗಳು

545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಯಲ್ಲಿ ನಡೆದ ಅಕ್ರಮದಲ್ಲಿ ದಿವ್ಯಾ ಹಾಗರಗಿ ಕೂಡ ಪ್ರಮುಖ ಆರೋಪಿಯಾಗಿ ಜೈಲು ಸೇರಿದ್ದರು. ದಿವ್ಯಾ ಸೇರಿದಂತೆ ಪ್ರಕರಣದ 26 ಆರೋಪಿಗಳಿಗೆ ಜನವರಿ 5ರಂದು ಜಾಮೀನು ಸಿಕ್ಕಿದೆ. ಹಾಗಾಗಿ ಮೇಡಂ ಅಭಿಮಾನಿಗಳಿಗೆ ಅವರು ಯುದ್ಧ ಗೆದ್ದುಬಂದಷ್ಟು ಸಂತೋಷವಾಗಿದ್ದು, ದಿವ್ಯಾ ಮನೆ ಮುಂದೆ ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:17 pm, Mon, 23 January 23

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ