AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ; ಸಿಐಡಿ ಪೊಲೀಸರಿಂದ ಮತ್ತೊಬ್ಬ ಅಭ್ಯರ್ಥಿ ಅರೆಸ್ಟ್!

ಬಂಧಿತ ಸುನಿಲ್ ಕುಮಾರ್ ಮೂಲತಃ ಕಲಬುರಗಿ ನಿವಾಸಿ. ಬೆಂಗಳೂರಲ್ಲಿ ನಿನ್ನೆ ದಾಖಲೆ ಪರಿಶೀಲನೆಗೆ ಹಾಜರಾಗಿದ್ದ. ಸಿಐಡಿ ಅಧಿಕಾರಿಗಳು ಸುನಿಲ್ ಕುಮಾರ್​ನ ದಾಖಲೆ ಪರಿಶೀಲಿಸಿದ್ದರು. ಪರಿಶೀಲನೆ ವೇಳೆ ಪರೀಕ್ಷಾ ಅಕ್ರಮವೆಸಗಿರುವುದು ಕಂಡುಬಂದಿತ್ತು

ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ; ಸಿಐಡಿ ಪೊಲೀಸರಿಂದ ಮತ್ತೊಬ್ಬ ಅಭ್ಯರ್ಥಿ ಅರೆಸ್ಟ್!
ಸಾಂಕೇತಿಕ ಚಿತ್ರ
TV9 Web
| Edited By: sandhya thejappa|

Updated on:Apr 26, 2022 | 2:53 PM

Share

ಕಲಬುರಗಿ: 545 ಪಿಎಸ್ಐ ಹುದ್ದೆಗಳ (PSI Recruitment) ನೇಮಕಾತಿಯಲ್ಲಿ ನಡೆದ ಅಕ್ರಮ ಈಗಾಗಲೇ ಬಯಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ಪೊಲೀಸರು (CID Police) ಮತ್ತೊಬ್ಬ ಅಭ್ಯರ್ಥಿ ಸುನಿಲ್​ನ ಬಂಧಿಸಿದ್ದಾರೆ. ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿ ಕಲಬುರಗಿಗೆ ಕರೆತಂದಿದ್ದಾರೆ. ಬಂಧನಕ್ಕೊಳಗಾಗಿರುವ ಸುನಿಲ್ ಜ್ಞಾನಜ್ಯೋತಿ ಇಂಗ್ಲಿಷ್ ಶಾಲೆಯಲ್ಲಿ ಪರೀಕ್ಷೆ ಬರೆದಿದ್ದ. ಎಲೆಕ್ಟ್ರಾನಿಕ್ ಡಿವೈಸ್ ಬಳಸಿ ಪಿಎಸ್ಐ ಪರೀಕ್ಷೆ ಬರೆದಿದ್ದ. ವಿಚಾರಣೆ ವೇಳೆ ಈತ ಅಕ್ರಮವೆಸಗಿರುವುದು ಕಂಡುಬಂದಿತ್ತು.

ಬಂಧಿತ ಸುನಿಲ್ ಕುಮಾರ್ ಮೂಲತಃ ಕಲಬುರಗಿ ನಿವಾಸಿ. ಬೆಂಗಳೂರಲ್ಲಿ ನಿನ್ನೆ ದಾಖಲೆ ಪರಿಶೀಲನೆಗೆ ಹಾಜರಾಗಿದ್ದ. ಸಿಐಡಿ ಅಧಿಕಾರಿಗಳು ಸುನಿಲ್ ಕುಮಾರ್​ನ ದಾಖಲೆ ಪರಿಶೀಲಿಸಿದ್ದರು. ಪರಿಶೀಲನೆ ವೇಳೆ ಪರೀಕ್ಷಾ ಅಕ್ರಮವೆಸಗಿರುವುದು ಕಂಡುಬಂದಿತ್ತು. ಹೀಗಾಗಿ ಇಂದು ಅರೆಸ್ಟ್ ಮಾಡಿ ಕಲಬುರಗಿಗೆ ಕರೆತಂದಿದ್ದಾರೆ. ಪಿಎಸ್ಐ ಅಕ್ರಮ ಪ್ರಕರಣದಲ್ಲಿ ಸದ್ಯ 16 ಆರೋಪಿಗಳು ಅರೆಸ್ಟ್ ಆಗಿದ್ದಾರೆ.

ಇನ್ನು ಅಕ್ರಮದ ಕಿಂಗ್​ಪಿನ್ ಆಗಿರುವ ರುದ್ರಗೌಡ ಪಾಟೀಲ್ ಜೊತೆ ಅಭ್ಯರ್ಥಿ ಸುನಿಲ್ ಕುಮಾರ್ ಸಂಪರ್ಕ ಹೊಂದಿದ್ದ. ರುದ್ರಗೌಡ ಪಾಟೀಲ್ ಸುನಿಲ್ ಕುಮಾರ್​ಗೆ ಎಲೆಕ್ಟ್ರಾನಿಕ್ ಡಿವೈಸ್ ನೀಡಿದ್ದ. ಅಕ್ರಮಕ್ಕಾಗಿಯೇ ರುದ್ರಗೌಡ ಪಾಟೀಲ್​ಗೆ ಸುನಿಲ್ ಐವತ್ತು‌ ಲಕ್ಷ ಹಣ ನೀಡಿದ್ದ.

ದಿವ್ಯಾ ಹಾಗರಗಿಯನ್ನು ಪೊಲೀಸರು ಇನ್ನೂ ಬಂಧಿಸಿಲ್ಲ; ಶರಣಪ್ರಕಾಶ್ ಪಾಟೀಲ್: ಸರ್ಕಾರ ಪರೀಕ್ಷಾ ಅಕ್ರಮ ಕೇಸ್​ ತನಿಖೆಯ ದಿಕ್ಕು ತಪ್ಪಿಸುತ್ತಿದೆ ಅಂತ ಕಲಬುರಗಿಯಲ್ಲಿ ಮಾಜಿ ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿಕೆ ನೀಡಿದ್ದಾರೆ. ಹೈಕೋರ್ಟ್ ನ್ಯಾಯಮೂರ್ತಿಯಿಂದ ತನಿಖೆ ಮಾಡಿಸಬೇಕು. ದಿವ್ಯಾ ಹಾಗರಗಿಯನ್ನು ಪೊಲೀಸರು ಇನ್ನೂ ಬಂಧಿಸಿಲ್ಲ. ದಿವ್ಯಾ ಮನೆಗೆ ಸಚಿವರು ಹೋಗಿ ಬಂದಿದ್ದಾರೆ ಅಂತ ಬಂಧಿಸಿಲ್ವಾ? ಪರೀಕ್ಷಾ ಕೇಂದ್ರ ಮಂಜೂರು ಮಾಡಲು ಲೆಟರ್ ಕೊಟ್ಟಿದ್ದಾರೆ. ಡಾ.ಉಮೇಶ್ ಜಾಧವ್ ಪತ್ರ ಕೊಟ್ಟಿದ್ದಾರೆ ಅಂತ ಹೇಳಲಾಗುತ್ತಿದೆ ಎಂದರು.

ಇದನ್ನೂ ಓದಿ

ಕೇಂದ್ರೀಯ ವಿದ್ಯಾಲಯಗಳಲ್ಲಿ ಎಂಪಿ ಕೋಟಾ ರದ್ದು, ಪ್ರವೇಶ ಮಾರ್ಗಸೂಚಿಗಳನ್ನು ಪರಿಷ್ಕರಿಸಿದ ಕೇಂದ್ರ

PSI Recruitment Scam: ಆರೋಪಿ ದಿವ್ಯಾ ಹಾಗರಗಿ ಕಾಣಿಸಿಕೊಂಡರು ಬಿಜೆಪಿ ಟ್ವೀಟ್​​ನಲ್ಲಿ! ಜೊತೆಗೆ ಯಾರಿದ್ದಾರೆ ನೋಡಿ!

Published On - 2:33 pm, Tue, 26 April 22

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ