AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ; ಸಿಐಡಿ ಪೊಲೀಸರಿಂದ ಮತ್ತೊಬ್ಬ ಅಭ್ಯರ್ಥಿ ಅರೆಸ್ಟ್!

ಬಂಧಿತ ಸುನಿಲ್ ಕುಮಾರ್ ಮೂಲತಃ ಕಲಬುರಗಿ ನಿವಾಸಿ. ಬೆಂಗಳೂರಲ್ಲಿ ನಿನ್ನೆ ದಾಖಲೆ ಪರಿಶೀಲನೆಗೆ ಹಾಜರಾಗಿದ್ದ. ಸಿಐಡಿ ಅಧಿಕಾರಿಗಳು ಸುನಿಲ್ ಕುಮಾರ್​ನ ದಾಖಲೆ ಪರಿಶೀಲಿಸಿದ್ದರು. ಪರಿಶೀಲನೆ ವೇಳೆ ಪರೀಕ್ಷಾ ಅಕ್ರಮವೆಸಗಿರುವುದು ಕಂಡುಬಂದಿತ್ತು

ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ; ಸಿಐಡಿ ಪೊಲೀಸರಿಂದ ಮತ್ತೊಬ್ಬ ಅಭ್ಯರ್ಥಿ ಅರೆಸ್ಟ್!
ಸಾಂಕೇತಿಕ ಚಿತ್ರ
Follow us
TV9 Web
| Updated By: sandhya thejappa

Updated on:Apr 26, 2022 | 2:53 PM

ಕಲಬುರಗಿ: 545 ಪಿಎಸ್ಐ ಹುದ್ದೆಗಳ (PSI Recruitment) ನೇಮಕಾತಿಯಲ್ಲಿ ನಡೆದ ಅಕ್ರಮ ಈಗಾಗಲೇ ಬಯಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ಪೊಲೀಸರು (CID Police) ಮತ್ತೊಬ್ಬ ಅಭ್ಯರ್ಥಿ ಸುನಿಲ್​ನ ಬಂಧಿಸಿದ್ದಾರೆ. ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿ ಕಲಬುರಗಿಗೆ ಕರೆತಂದಿದ್ದಾರೆ. ಬಂಧನಕ್ಕೊಳಗಾಗಿರುವ ಸುನಿಲ್ ಜ್ಞಾನಜ್ಯೋತಿ ಇಂಗ್ಲಿಷ್ ಶಾಲೆಯಲ್ಲಿ ಪರೀಕ್ಷೆ ಬರೆದಿದ್ದ. ಎಲೆಕ್ಟ್ರಾನಿಕ್ ಡಿವೈಸ್ ಬಳಸಿ ಪಿಎಸ್ಐ ಪರೀಕ್ಷೆ ಬರೆದಿದ್ದ. ವಿಚಾರಣೆ ವೇಳೆ ಈತ ಅಕ್ರಮವೆಸಗಿರುವುದು ಕಂಡುಬಂದಿತ್ತು.

ಬಂಧಿತ ಸುನಿಲ್ ಕುಮಾರ್ ಮೂಲತಃ ಕಲಬುರಗಿ ನಿವಾಸಿ. ಬೆಂಗಳೂರಲ್ಲಿ ನಿನ್ನೆ ದಾಖಲೆ ಪರಿಶೀಲನೆಗೆ ಹಾಜರಾಗಿದ್ದ. ಸಿಐಡಿ ಅಧಿಕಾರಿಗಳು ಸುನಿಲ್ ಕುಮಾರ್​ನ ದಾಖಲೆ ಪರಿಶೀಲಿಸಿದ್ದರು. ಪರಿಶೀಲನೆ ವೇಳೆ ಪರೀಕ್ಷಾ ಅಕ್ರಮವೆಸಗಿರುವುದು ಕಂಡುಬಂದಿತ್ತು. ಹೀಗಾಗಿ ಇಂದು ಅರೆಸ್ಟ್ ಮಾಡಿ ಕಲಬುರಗಿಗೆ ಕರೆತಂದಿದ್ದಾರೆ. ಪಿಎಸ್ಐ ಅಕ್ರಮ ಪ್ರಕರಣದಲ್ಲಿ ಸದ್ಯ 16 ಆರೋಪಿಗಳು ಅರೆಸ್ಟ್ ಆಗಿದ್ದಾರೆ.

ಇನ್ನು ಅಕ್ರಮದ ಕಿಂಗ್​ಪಿನ್ ಆಗಿರುವ ರುದ್ರಗೌಡ ಪಾಟೀಲ್ ಜೊತೆ ಅಭ್ಯರ್ಥಿ ಸುನಿಲ್ ಕುಮಾರ್ ಸಂಪರ್ಕ ಹೊಂದಿದ್ದ. ರುದ್ರಗೌಡ ಪಾಟೀಲ್ ಸುನಿಲ್ ಕುಮಾರ್​ಗೆ ಎಲೆಕ್ಟ್ರಾನಿಕ್ ಡಿವೈಸ್ ನೀಡಿದ್ದ. ಅಕ್ರಮಕ್ಕಾಗಿಯೇ ರುದ್ರಗೌಡ ಪಾಟೀಲ್​ಗೆ ಸುನಿಲ್ ಐವತ್ತು‌ ಲಕ್ಷ ಹಣ ನೀಡಿದ್ದ.

ದಿವ್ಯಾ ಹಾಗರಗಿಯನ್ನು ಪೊಲೀಸರು ಇನ್ನೂ ಬಂಧಿಸಿಲ್ಲ; ಶರಣಪ್ರಕಾಶ್ ಪಾಟೀಲ್: ಸರ್ಕಾರ ಪರೀಕ್ಷಾ ಅಕ್ರಮ ಕೇಸ್​ ತನಿಖೆಯ ದಿಕ್ಕು ತಪ್ಪಿಸುತ್ತಿದೆ ಅಂತ ಕಲಬುರಗಿಯಲ್ಲಿ ಮಾಜಿ ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿಕೆ ನೀಡಿದ್ದಾರೆ. ಹೈಕೋರ್ಟ್ ನ್ಯಾಯಮೂರ್ತಿಯಿಂದ ತನಿಖೆ ಮಾಡಿಸಬೇಕು. ದಿವ್ಯಾ ಹಾಗರಗಿಯನ್ನು ಪೊಲೀಸರು ಇನ್ನೂ ಬಂಧಿಸಿಲ್ಲ. ದಿವ್ಯಾ ಮನೆಗೆ ಸಚಿವರು ಹೋಗಿ ಬಂದಿದ್ದಾರೆ ಅಂತ ಬಂಧಿಸಿಲ್ವಾ? ಪರೀಕ್ಷಾ ಕೇಂದ್ರ ಮಂಜೂರು ಮಾಡಲು ಲೆಟರ್ ಕೊಟ್ಟಿದ್ದಾರೆ. ಡಾ.ಉಮೇಶ್ ಜಾಧವ್ ಪತ್ರ ಕೊಟ್ಟಿದ್ದಾರೆ ಅಂತ ಹೇಳಲಾಗುತ್ತಿದೆ ಎಂದರು.

ಇದನ್ನೂ ಓದಿ

ಕೇಂದ್ರೀಯ ವಿದ್ಯಾಲಯಗಳಲ್ಲಿ ಎಂಪಿ ಕೋಟಾ ರದ್ದು, ಪ್ರವೇಶ ಮಾರ್ಗಸೂಚಿಗಳನ್ನು ಪರಿಷ್ಕರಿಸಿದ ಕೇಂದ್ರ

PSI Recruitment Scam: ಆರೋಪಿ ದಿವ್ಯಾ ಹಾಗರಗಿ ಕಾಣಿಸಿಕೊಂಡರು ಬಿಜೆಪಿ ಟ್ವೀಟ್​​ನಲ್ಲಿ! ಜೊತೆಗೆ ಯಾರಿದ್ದಾರೆ ನೋಡಿ!

Published On - 2:33 pm, Tue, 26 April 22

ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್