AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ; ಸಿಐಡಿ ಪೊಲೀಸರಿಂದ ಮತ್ತೊಬ್ಬ ಅಭ್ಯರ್ಥಿ ಅರೆಸ್ಟ್!

ಬಂಧಿತ ಸುನಿಲ್ ಕುಮಾರ್ ಮೂಲತಃ ಕಲಬುರಗಿ ನಿವಾಸಿ. ಬೆಂಗಳೂರಲ್ಲಿ ನಿನ್ನೆ ದಾಖಲೆ ಪರಿಶೀಲನೆಗೆ ಹಾಜರಾಗಿದ್ದ. ಸಿಐಡಿ ಅಧಿಕಾರಿಗಳು ಸುನಿಲ್ ಕುಮಾರ್​ನ ದಾಖಲೆ ಪರಿಶೀಲಿಸಿದ್ದರು. ಪರಿಶೀಲನೆ ವೇಳೆ ಪರೀಕ್ಷಾ ಅಕ್ರಮವೆಸಗಿರುವುದು ಕಂಡುಬಂದಿತ್ತು

ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ; ಸಿಐಡಿ ಪೊಲೀಸರಿಂದ ಮತ್ತೊಬ್ಬ ಅಭ್ಯರ್ಥಿ ಅರೆಸ್ಟ್!
ಸಾಂಕೇತಿಕ ಚಿತ್ರ
TV9 Web
| Edited By: |

Updated on:Apr 26, 2022 | 2:53 PM

Share

ಕಲಬುರಗಿ: 545 ಪಿಎಸ್ಐ ಹುದ್ದೆಗಳ (PSI Recruitment) ನೇಮಕಾತಿಯಲ್ಲಿ ನಡೆದ ಅಕ್ರಮ ಈಗಾಗಲೇ ಬಯಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ಪೊಲೀಸರು (CID Police) ಮತ್ತೊಬ್ಬ ಅಭ್ಯರ್ಥಿ ಸುನಿಲ್​ನ ಬಂಧಿಸಿದ್ದಾರೆ. ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿ ಕಲಬುರಗಿಗೆ ಕರೆತಂದಿದ್ದಾರೆ. ಬಂಧನಕ್ಕೊಳಗಾಗಿರುವ ಸುನಿಲ್ ಜ್ಞಾನಜ್ಯೋತಿ ಇಂಗ್ಲಿಷ್ ಶಾಲೆಯಲ್ಲಿ ಪರೀಕ್ಷೆ ಬರೆದಿದ್ದ. ಎಲೆಕ್ಟ್ರಾನಿಕ್ ಡಿವೈಸ್ ಬಳಸಿ ಪಿಎಸ್ಐ ಪರೀಕ್ಷೆ ಬರೆದಿದ್ದ. ವಿಚಾರಣೆ ವೇಳೆ ಈತ ಅಕ್ರಮವೆಸಗಿರುವುದು ಕಂಡುಬಂದಿತ್ತು.

ಬಂಧಿತ ಸುನಿಲ್ ಕುಮಾರ್ ಮೂಲತಃ ಕಲಬುರಗಿ ನಿವಾಸಿ. ಬೆಂಗಳೂರಲ್ಲಿ ನಿನ್ನೆ ದಾಖಲೆ ಪರಿಶೀಲನೆಗೆ ಹಾಜರಾಗಿದ್ದ. ಸಿಐಡಿ ಅಧಿಕಾರಿಗಳು ಸುನಿಲ್ ಕುಮಾರ್​ನ ದಾಖಲೆ ಪರಿಶೀಲಿಸಿದ್ದರು. ಪರಿಶೀಲನೆ ವೇಳೆ ಪರೀಕ್ಷಾ ಅಕ್ರಮವೆಸಗಿರುವುದು ಕಂಡುಬಂದಿತ್ತು. ಹೀಗಾಗಿ ಇಂದು ಅರೆಸ್ಟ್ ಮಾಡಿ ಕಲಬುರಗಿಗೆ ಕರೆತಂದಿದ್ದಾರೆ. ಪಿಎಸ್ಐ ಅಕ್ರಮ ಪ್ರಕರಣದಲ್ಲಿ ಸದ್ಯ 16 ಆರೋಪಿಗಳು ಅರೆಸ್ಟ್ ಆಗಿದ್ದಾರೆ.

ಇನ್ನು ಅಕ್ರಮದ ಕಿಂಗ್​ಪಿನ್ ಆಗಿರುವ ರುದ್ರಗೌಡ ಪಾಟೀಲ್ ಜೊತೆ ಅಭ್ಯರ್ಥಿ ಸುನಿಲ್ ಕುಮಾರ್ ಸಂಪರ್ಕ ಹೊಂದಿದ್ದ. ರುದ್ರಗೌಡ ಪಾಟೀಲ್ ಸುನಿಲ್ ಕುಮಾರ್​ಗೆ ಎಲೆಕ್ಟ್ರಾನಿಕ್ ಡಿವೈಸ್ ನೀಡಿದ್ದ. ಅಕ್ರಮಕ್ಕಾಗಿಯೇ ರುದ್ರಗೌಡ ಪಾಟೀಲ್​ಗೆ ಸುನಿಲ್ ಐವತ್ತು‌ ಲಕ್ಷ ಹಣ ನೀಡಿದ್ದ.

ದಿವ್ಯಾ ಹಾಗರಗಿಯನ್ನು ಪೊಲೀಸರು ಇನ್ನೂ ಬಂಧಿಸಿಲ್ಲ; ಶರಣಪ್ರಕಾಶ್ ಪಾಟೀಲ್: ಸರ್ಕಾರ ಪರೀಕ್ಷಾ ಅಕ್ರಮ ಕೇಸ್​ ತನಿಖೆಯ ದಿಕ್ಕು ತಪ್ಪಿಸುತ್ತಿದೆ ಅಂತ ಕಲಬುರಗಿಯಲ್ಲಿ ಮಾಜಿ ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿಕೆ ನೀಡಿದ್ದಾರೆ. ಹೈಕೋರ್ಟ್ ನ್ಯಾಯಮೂರ್ತಿಯಿಂದ ತನಿಖೆ ಮಾಡಿಸಬೇಕು. ದಿವ್ಯಾ ಹಾಗರಗಿಯನ್ನು ಪೊಲೀಸರು ಇನ್ನೂ ಬಂಧಿಸಿಲ್ಲ. ದಿವ್ಯಾ ಮನೆಗೆ ಸಚಿವರು ಹೋಗಿ ಬಂದಿದ್ದಾರೆ ಅಂತ ಬಂಧಿಸಿಲ್ವಾ? ಪರೀಕ್ಷಾ ಕೇಂದ್ರ ಮಂಜೂರು ಮಾಡಲು ಲೆಟರ್ ಕೊಟ್ಟಿದ್ದಾರೆ. ಡಾ.ಉಮೇಶ್ ಜಾಧವ್ ಪತ್ರ ಕೊಟ್ಟಿದ್ದಾರೆ ಅಂತ ಹೇಳಲಾಗುತ್ತಿದೆ ಎಂದರು.

ಇದನ್ನೂ ಓದಿ

ಕೇಂದ್ರೀಯ ವಿದ್ಯಾಲಯಗಳಲ್ಲಿ ಎಂಪಿ ಕೋಟಾ ರದ್ದು, ಪ್ರವೇಶ ಮಾರ್ಗಸೂಚಿಗಳನ್ನು ಪರಿಷ್ಕರಿಸಿದ ಕೇಂದ್ರ

PSI Recruitment Scam: ಆರೋಪಿ ದಿವ್ಯಾ ಹಾಗರಗಿ ಕಾಣಿಸಿಕೊಂಡರು ಬಿಜೆಪಿ ಟ್ವೀಟ್​​ನಲ್ಲಿ! ಜೊತೆಗೆ ಯಾರಿದ್ದಾರೆ ನೋಡಿ!

Published On - 2:33 pm, Tue, 26 April 22

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ