AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI Recruitment Scam: ಪರೀಕ್ಷಾ ಅಕ್ರಮ -ಇಬ್ಬರು ಪೊಲೀಸ್​​ ಅಧಿಕಾರಿಗಳು ಸಸ್ಪೆಂಡ್, ಮೈಸೂರು ವಿವಿ ಮೌಲ್ಯಮಾಪನ ಕುಲಸಚಿವ ಪ್ರೊ. ನಾಗರಾಜ್‌ ಅಮಾನತು

PSI Recruitment Scam: 545 ಪೊಲೀಸ್​ ಸಬ್​ ಇನ್ಸ್​ ಪೆಕ್ಟರ್​​ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಪರೀಕ್ಷಾ ಅಕ್ರಮದಲ್ಲಿ ಇಬ್ಬರು ಪೊಲೀಸ್​​ ಅಧಿಕಾರಿಗಳ ತಲೆದಂಡವಾಗಿದೆ. ಕಲಬುರಗಿಯ ಇಬ್ಬರು ಪೊಲೀಸ್​ ಅಧಿಕಾರಿಗಳು ಅಮಾನತುಗೊಂಡಿದ್ದಾರೆ

PSI Recruitment Scam: ಪರೀಕ್ಷಾ ಅಕ್ರಮ -ಇಬ್ಬರು ಪೊಲೀಸ್​​ ಅಧಿಕಾರಿಗಳು ಸಸ್ಪೆಂಡ್, ಮೈಸೂರು ವಿವಿ ಮೌಲ್ಯಮಾಪನ ಕುಲಸಚಿವ ಪ್ರೊ. ನಾಗರಾಜ್‌ ಅಮಾನತು
ಪಿಎಸ್​ಐ ಪರೀಕ್ಷಾ ಅಕ್ರಮ -ಇಬ್ಬರು ಪೊಲೀಸ್​​ ಅಧಿಕಾರಿಗಳು ಸಸ್ಪೆಂಡ್, ಮೈಸೂರು ವಿವಿ ಮೌಲ್ಯಮಾಪನ ಕುಲಸಚಿವ ಪ್ರೊ. ನಾಗರಾಜ್‌ ಅಮಾನತು
TV9 Web
| Edited By: |

Updated on: May 04, 2022 | 9:54 PM

Share

ಕಲಬುರಗಿ: 545 ಪೊಲೀಸ್​ ಸಬ್​ ಇನ್ಸ್​ ಪೆಕ್ಟರ್​​ ನೇಮಕಾತಿಯಲ್ಲಿ (PSI Recruitment Scam) ನಡೆದಿದೆ ಎನ್ನಲಾದ ಪರೀಕ್ಷಾ ಅಕ್ರಮದಲ್ಲಿ ಇಬ್ಬರು ಪೊಲೀಸ್​​ ಅಧಿಕಾರಿಗಳ ತಲೆದಂಡವಾಗಿದೆ. ಕಲಬುರಗಿಯ ಇಬ್ಬರು ಪೊಲೀಸ್​ ಅಧಿಕಾರಿಗಳು ಅಮಾನತುಗೊಂಡಿದ್ದಾರೆ. suspend). ಬೆರಳಚ್ಚು ವಿಭಾಗದ ಡಿವೈಎಸ್​ಪಿ ಆರ್​.ಆರ್​. ಹೊಸಮನಿ (RR Hosamani DySP Fingerprints) ಮತ್ತು ಕಲಬುರಗಿ ಮಹಿಳಾ ಠಾಣೆಯ ಇನ್ಸ್​​​ಪೆಕ್ಟರ್​​ ದಿಲೀಪ್​ ಸಾಗರ್ ಮನೆಯ ಹಾದಿಹಿಡಿದ ಭ್ರಷ್ಟ ಆರೋಪಿಗಳು. ಇನ್ಸ್​​​ಪೆಕ್ಟರ್​​ ದಿಲೀಪ್​ (Dileep sagar PI Women Police Station incharge of Jnana jyothi college) ಅಕ್ರಮ ನಡೆಯುವಾಗ ಜ್ಞಾನಜ್ಯೋತಿ ಕಾಲೇಜಿನಲ್ಲಿ ಪರೀಕ್ಷಾ ಕರ್ತವ್ಯದಲ್ಲಿದ್ದರು.

ಮೈಸೂರು ವಿವಿ ಮೌಲ್ಯಮಾಪನ ಕುಲಸಚಿವ, ಬಂಧಿತ ಪ್ರೊ. ನಾಗರಾಜ್‌ ಅಮಾನತು ಇನ್ನು, ಅಸಿಸ್ಟೆಂಟ್ ಪ್ರೊಫೆಸರ್‌ಗಳ ನೇಮಕಾತಿಯಲ್ಲಿ ನಡೆದಿರುವ ಅಕ್ರಮ ಪ್ರಕರಣದಲ್ಲಿ ಪ್ರೊ. ಹೆಚ್‌. ನಾಗರಾಜ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಮೈಸೂರು ವಿಶ್ವವಿದ್ಯಾಲಯದ ಕುಲಸಚಿವರು ಆದೇಶ ಹೊರಡಿಸಿದ್ದಾರೆ. 2022ರ ಏಪ್ರಿಲ್‌ 27ರಿಂದ ಪೂರ್ವಾನ್ವಯವಾಗುವಂತೆ ಸಸ್ಪೆಂಡ್ ಮಾಡಲಾಗಿದೆ. ಶ್ರೀಯುತರು ಮೈಸೂರು ವಿವಿಯ ಭೂಗೋಳಶಾಸ್ತ್ರ ವಿಭಾಗದ ಪ್ರೊಫೆಸರ್ ಆಗಿದ್ರು.

ಕರ್ನಾಟಕ ವಿವಿಯ ಮೌಲ್ಯಮಾಪನ ಕುಲಸಚಿವರಾಗಿ ಪ್ರೊ. ನಾಗರಾಜ್‌ ನೇಮಕಗೊಂಡಿದ್ದರು. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ನಾಗರಾಜ್‌ ನನ್ನು ಕುಲಸಚಿವ ಹುದ್ದೆಯಿಂದ ಬಿಡುಗಡೆಗೊಳಿಸಿ, ಅಮಾನತು ಆದೇಶ ಹೊರಡಿಸಲಾಗಿದೆ. ಪ್ರಕರಣದ ಸಂಬಂಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿತ್ತು. ಆರೋಪಿ ಪ್ರೊ. ಹೆಚ್‌. ನಾಗರಾಜ್‌ನನ್ನು ಪೊಲೀಸರು ಬಂಧಿಸಿದ್ದರು. ಹೀಗಾಗಿ ಇಲಾಖಾ ವಿಚಾರಣೆ ಕಾಯ್ದಿರಿಸಿ, ಅಮಾನತು ಆದೇಶ ನೀಡಲಾಗಿದೆ.

ಇದನ್ನೂ ಓದಿ: ಸಿಡಿಲಿನಿಂದ ತಾಯಿ ಮಗ ದುರ್ಮರಣ; ಬೈಕ್​​ನಲ್ಲಿ ತೆರಳ್ತಿದ್ದ ದಂಪತಿ ಜೊತೆ ಮೊಮ್ಮಗಳ ಸಾವು, ಬಸ್ ಡಿಕ್ಕಿ ಬೈಕ್​​ನಲ್ಲಿ ತೆರಳ್ತಿದ್ದ ಇಬ್ಬರ ಸಾವು

ಇದನ್ನೂ ಓದಿ: ಕೊರೊನಾ ಕಾಟದಿಂದ ಎರಡು ವರ್ಷದ ಬಳಿಕ ಬೆಳಗಾವಿಯಲ್ಲಿ ಮನೆಮಾಡಿದ ಶಿವಾಜಿ ಜಯಂತಿ ಸಂಭ್ರಮ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ