PSI Recruitment Scam: ಪರೀಕ್ಷಾ ಅಕ್ರಮ -ಇಬ್ಬರು ಪೊಲೀಸ್​​ ಅಧಿಕಾರಿಗಳು ಸಸ್ಪೆಂಡ್, ಮೈಸೂರು ವಿವಿ ಮೌಲ್ಯಮಾಪನ ಕುಲಸಚಿವ ಪ್ರೊ. ನಾಗರಾಜ್‌ ಅಮಾನತು

PSI Recruitment Scam: 545 ಪೊಲೀಸ್​ ಸಬ್​ ಇನ್ಸ್​ ಪೆಕ್ಟರ್​​ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಪರೀಕ್ಷಾ ಅಕ್ರಮದಲ್ಲಿ ಇಬ್ಬರು ಪೊಲೀಸ್​​ ಅಧಿಕಾರಿಗಳ ತಲೆದಂಡವಾಗಿದೆ. ಕಲಬುರಗಿಯ ಇಬ್ಬರು ಪೊಲೀಸ್​ ಅಧಿಕಾರಿಗಳು ಅಮಾನತುಗೊಂಡಿದ್ದಾರೆ

PSI Recruitment Scam: ಪರೀಕ್ಷಾ ಅಕ್ರಮ -ಇಬ್ಬರು ಪೊಲೀಸ್​​ ಅಧಿಕಾರಿಗಳು ಸಸ್ಪೆಂಡ್, ಮೈಸೂರು ವಿವಿ ಮೌಲ್ಯಮಾಪನ ಕುಲಸಚಿವ ಪ್ರೊ. ನಾಗರಾಜ್‌ ಅಮಾನತು
ಪಿಎಸ್​ಐ ಪರೀಕ್ಷಾ ಅಕ್ರಮ -ಇಬ್ಬರು ಪೊಲೀಸ್​​ ಅಧಿಕಾರಿಗಳು ಸಸ್ಪೆಂಡ್, ಮೈಸೂರು ವಿವಿ ಮೌಲ್ಯಮಾಪನ ಕುಲಸಚಿವ ಪ್ರೊ. ನಾಗರಾಜ್‌ ಅಮಾನತು
Follow us
| Updated By: ಸಾಧು ಶ್ರೀನಾಥ್​

Updated on: May 04, 2022 | 9:54 PM

ಕಲಬುರಗಿ: 545 ಪೊಲೀಸ್​ ಸಬ್​ ಇನ್ಸ್​ ಪೆಕ್ಟರ್​​ ನೇಮಕಾತಿಯಲ್ಲಿ (PSI Recruitment Scam) ನಡೆದಿದೆ ಎನ್ನಲಾದ ಪರೀಕ್ಷಾ ಅಕ್ರಮದಲ್ಲಿ ಇಬ್ಬರು ಪೊಲೀಸ್​​ ಅಧಿಕಾರಿಗಳ ತಲೆದಂಡವಾಗಿದೆ. ಕಲಬುರಗಿಯ ಇಬ್ಬರು ಪೊಲೀಸ್​ ಅಧಿಕಾರಿಗಳು ಅಮಾನತುಗೊಂಡಿದ್ದಾರೆ. suspend). ಬೆರಳಚ್ಚು ವಿಭಾಗದ ಡಿವೈಎಸ್​ಪಿ ಆರ್​.ಆರ್​. ಹೊಸಮನಿ (RR Hosamani DySP Fingerprints) ಮತ್ತು ಕಲಬುರಗಿ ಮಹಿಳಾ ಠಾಣೆಯ ಇನ್ಸ್​​​ಪೆಕ್ಟರ್​​ ದಿಲೀಪ್​ ಸಾಗರ್ ಮನೆಯ ಹಾದಿಹಿಡಿದ ಭ್ರಷ್ಟ ಆರೋಪಿಗಳು. ಇನ್ಸ್​​​ಪೆಕ್ಟರ್​​ ದಿಲೀಪ್​ (Dileep sagar PI Women Police Station incharge of Jnana jyothi college) ಅಕ್ರಮ ನಡೆಯುವಾಗ ಜ್ಞಾನಜ್ಯೋತಿ ಕಾಲೇಜಿನಲ್ಲಿ ಪರೀಕ್ಷಾ ಕರ್ತವ್ಯದಲ್ಲಿದ್ದರು.

ಮೈಸೂರು ವಿವಿ ಮೌಲ್ಯಮಾಪನ ಕುಲಸಚಿವ, ಬಂಧಿತ ಪ್ರೊ. ನಾಗರಾಜ್‌ ಅಮಾನತು ಇನ್ನು, ಅಸಿಸ್ಟೆಂಟ್ ಪ್ರೊಫೆಸರ್‌ಗಳ ನೇಮಕಾತಿಯಲ್ಲಿ ನಡೆದಿರುವ ಅಕ್ರಮ ಪ್ರಕರಣದಲ್ಲಿ ಪ್ರೊ. ಹೆಚ್‌. ನಾಗರಾಜ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಮೈಸೂರು ವಿಶ್ವವಿದ್ಯಾಲಯದ ಕುಲಸಚಿವರು ಆದೇಶ ಹೊರಡಿಸಿದ್ದಾರೆ. 2022ರ ಏಪ್ರಿಲ್‌ 27ರಿಂದ ಪೂರ್ವಾನ್ವಯವಾಗುವಂತೆ ಸಸ್ಪೆಂಡ್ ಮಾಡಲಾಗಿದೆ. ಶ್ರೀಯುತರು ಮೈಸೂರು ವಿವಿಯ ಭೂಗೋಳಶಾಸ್ತ್ರ ವಿಭಾಗದ ಪ್ರೊಫೆಸರ್ ಆಗಿದ್ರು.

ಕರ್ನಾಟಕ ವಿವಿಯ ಮೌಲ್ಯಮಾಪನ ಕುಲಸಚಿವರಾಗಿ ಪ್ರೊ. ನಾಗರಾಜ್‌ ನೇಮಕಗೊಂಡಿದ್ದರು. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ನಾಗರಾಜ್‌ ನನ್ನು ಕುಲಸಚಿವ ಹುದ್ದೆಯಿಂದ ಬಿಡುಗಡೆಗೊಳಿಸಿ, ಅಮಾನತು ಆದೇಶ ಹೊರಡಿಸಲಾಗಿದೆ. ಪ್ರಕರಣದ ಸಂಬಂಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿತ್ತು. ಆರೋಪಿ ಪ್ರೊ. ಹೆಚ್‌. ನಾಗರಾಜ್‌ನನ್ನು ಪೊಲೀಸರು ಬಂಧಿಸಿದ್ದರು. ಹೀಗಾಗಿ ಇಲಾಖಾ ವಿಚಾರಣೆ ಕಾಯ್ದಿರಿಸಿ, ಅಮಾನತು ಆದೇಶ ನೀಡಲಾಗಿದೆ.

ಇದನ್ನೂ ಓದಿ: ಸಿಡಿಲಿನಿಂದ ತಾಯಿ ಮಗ ದುರ್ಮರಣ; ಬೈಕ್​​ನಲ್ಲಿ ತೆರಳ್ತಿದ್ದ ದಂಪತಿ ಜೊತೆ ಮೊಮ್ಮಗಳ ಸಾವು, ಬಸ್ ಡಿಕ್ಕಿ ಬೈಕ್​​ನಲ್ಲಿ ತೆರಳ್ತಿದ್ದ ಇಬ್ಬರ ಸಾವು

ಇದನ್ನೂ ಓದಿ: ಕೊರೊನಾ ಕಾಟದಿಂದ ಎರಡು ವರ್ಷದ ಬಳಿಕ ಬೆಳಗಾವಿಯಲ್ಲಿ ಮನೆಮಾಡಿದ ಶಿವಾಜಿ ಜಯಂತಿ ಸಂಭ್ರಮ

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು