AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI Recruitment Scam: ಇಬ್ಬರು ಪ್ರಮುಖ ಆರೋಪಿಗಳಿಗೆ ಜಾಮೀನು ಮಂಜೂರು

545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಯಲ್ಲಿ ಹಗರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ.

PSI Recruitment Scam: ಇಬ್ಬರು ಪ್ರಮುಖ ಆರೋಪಿಗಳಿಗೆ ಜಾಮೀನು ಮಂಜೂರು
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Dec 15, 2022 | 4:15 PM

Share

ಕಲಬುರಗಿ: 545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಯಲ್ಲಿ ಹಗರಣ (PSI Recruitment Scam) ಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ಕಿಂಗ್ ಪಿನ್​​ ರುದ್ರಗೌಡ ಪಾಟೀಲ್ ಮತ್ತು ಮಹಾಂತೇಶ್ ಪಾಟೀಲ್​ಗೆ ಕಲಬುರಗಿ ಹೈಕೋರ್ಟ್​ ಪೀಠದಿಂದ ಜಾಮೀನು ಮಂಜೂರು ಮಾಡಲಾಗಿದೆ. ಜಿಲ್ಲೆಯ ಚೌಕ್ ಠಾಣೆಯಲ್ಲಿ ದಾಖಲಾಗಿದ್ದ ಕೇಸ್​ನಲ್ಲಿ ಜಾಮೀನು ನೀಡಲಾಗಿದೆ. ಪ್ರಕರಣದಲ್ಲಿ ಕಿಂಗ್ ಪಿನ್ ರುದ್ರಗೌಡ ಪಾಟೀಲ್​ನ್ನು ಈ ಹಿಂದೆ ಅರೆಸ್ಟ್ ಮಾಡಲಾಗಿತ್ತು. ಸಹಚರರಿಬ್ಬರಿಗ ರುದ್ರಗೌಡ ಜೊತೆ ಮಧ್ಯವರ್ತಿಗಳಾಗಿ ಕೆಲಸ ಮಾಡುತ್ತಿದ್ದ. ಬಂಧಿತ ಆರೋಪಿಗಳು ಬ್ಲೂಟೂತ್ಗಳನ್ನು ಸರಬರಾಜು ಮಾಡುತ್ತಿದ್ದರು. ಜೊತೆಗೆ, ರುದ್ರಗೌಡ ಪಾಟೀಲ್ ಜೊತೆ ಸೇರಿ ಅಭ್ಯರ್ಥಿಗಳ ಜೊತೆ ಡೀಲ್ ಮಾಡುತ್ತಿದ್ದರು. ಅಕ್ರಮವಾಗಿ ಪರೀಕ್ಷೆ ಬರೆಯಲು ಸಿದ್ದರಿದ್ದವರನ್ನು ಹುಡುಕಿ ರುದ್ರಗೌಡ ಪಾಟೀಲ್​ಗೆ ಭೇಟಿ ಮಾಡಿಸುತ್ತಿದ್ದರು.

ಎಸ್​ಐ ಹಗರಣದ ಪ್ರಮುಖ ಆರೋಪಿಗೆ ಜಾಮೀನು

ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಆರೋಪಿಗೆ ಹಾಗೂ ಪರೀಕ್ಷೆಯಲ್ಲಿ ಮೊದಲ ರ‍್ಯಾಂಕ್ ಪಡೆದ ಅಭ್ಯರ್ಥಿಗೆ ನ್ಯಾಯಾಲಯವು ಇತ್ತೀಚೆಗೆ ಜಾಮೀನು ಮಂಜೂರು ಮಾಡಿದೆ. ಪಿಎಸ್​ಐ ಹಗರಣದ ಎ1 ಜಾಗೃತ್ ಹಾಗೂ ಮಹಿಳಾ ಕೋಟಾದಲ್ಲಿ ಪ್ರಥಮ ರ‍್ಯಾಂಕ್‌ ಪಡೆದಿದ್ದ ರಚನಾಗೆ ಜಾಮೀನು ಸಿಕ್ಕಿದೆ. ಆರೋಪಿಗಳ ಪರ ವಕೀಲ ಶ್ಯಾಮ್​ಸುಂದರ್​ ಅವರು ವಾದ ಮಾಡಿದರು.

ಇದನ್ನೂ ಓದಿ: ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ; ಕಿಂಗ್ ಪಿನ್ ರುದ್ರಗೌಡ ಪಾಟೀಲ್​ನ ಮತ್ತಿಬ್ಬರು ಸಹಚರರು ಅರೆಸ್ಟ್

545 ಪಿಎಸ್​ಐ ಹುದ್ದೆಗಳಿಗೆ ನಡೆದಿದ್ದ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ (PSI Recruitment Scam) ಸಂಬಂಧಿಸಿದಂತೆ 17ನೇ ಆರೋಪಿ ರಚನಾಳನ್ನು ಸಿಐಡಿ (CID) ವಿಶೇಷ ತನಿಖಾ ತಂಡ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ವಶಕ್ಕೆ ಪಡೆದಿತ್ತು. ನೇಮಕಾತಿಯ ಮಹಿಳಾ ವಿಭಾಗದಲ್ಲಿ ರಾಜ್ಯಕ್ಕೆ ರಚನಾ ಹನುಮಂತ್ ಮೊದಲ ರ‍್ಯಾಂಕ್ ಪಡೆದಿದ್ದಳು.

ಅಕ್ರಮ ಪ್ರಕರಣ ಬಯಲಾಗುತ್ತಿದ್ದಂತೆ ರಚನಾ ಮೂರು ತಿಂಗಳಿನಿಂದ ನಾಪತ್ತೆಯಾಗಿದ್ದಳು. ಸಿಐಡಿ ತನಿಖೆಯಲ್ಲಿ ರಚನಾ 30 ಲಕ್ಷ ನೀಡಿದ್ದರೆಂಬ ಮಾಹಿತಿ ಬಹಿರಂಗವಾಗಿತ್ತು. ಈ ಸಂಬಂಧ 22 ಅಭ್ಯರ್ಥಿಗಳ ವಿರುದ್ಧ ಸಿಐಡಿ ಡಿವೈಎಸ್​ಪಿ ನರಸಿಂಹಮೂರ್ತಿ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನನ್ವಯ ಪ್ರಕರಣ ದಾಖಲಾಗಿತ್ತು. ರಚನಾ ಸರ್ಕಾರದ ಮರುಪರಿಕ್ಷಾ ಆದೇಶದ ವಿರುದ್ಧವೂ ಪ್ರತಿಭಟನೆಯಲ್ಲಿಯೂ ಭಾಗಿಯಾಗಿದ್ದಳು. ಯಾವಾಗ ತನ್ನ ವಿರುದ್ಧ ಎಫ್ಐಆರ್ ದಾಖಲಾಯ್ತೋ ಅಂದಿನಿಂದ ರಚನಾ ನಾಪತ್ತೆಯಾಗಿದ್ದಳು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:55 pm, Thu, 15 December 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ